ಬೆಂಗಳೂರು: ಹೌದಪ್ಪ ಹೌದು ನಟ ಸತ್ಯಜಿತ್ ಗ್ಗೆ ಪದೇ ಪದೇ ನನ್ನ ತಂದೆ ಹಣಕ್ಕಾಗಿ ಪೀಡಿಸುತ್ತಿದ್ದಾರೆ. ಹಣಕ್ಕಾಗಿ ರೌಡಿಗಳನ್ನು ಬಿಟ್ಟು ಬೆದರಿಸುತ್ತಿದ್ದಾರೆ. ಅವರಿಂದಲೇ ನನಗೆ ಜೀವ ಬೆದರಿಕೆಯಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸತ್ಯಜಿತ್ ಅವರ ಪುತ್ರಿಯೇ ತಂದೆಯ ವಿರುದ್ಧ ದೂರು ದಾಖಲಿಸಿದ್ದಾರೆ.!
ಬಾಣಸವಾಡಿ ಪೊಲೀಸ್ ಠಾಣೆಗೆ ತೆರಳಿ ಸತ್ಯಜಿತ್ ಪುತ್ರಿ ವೃತ್ತಿಯಲ್ಲಿ ಪೈಲೆಟ್ ಆಗಿರುವಂತ ಅಖ್ತರ್ ಸ್ವಲೇಹಾ ಅವರು, ನನ್ನ ತಂದೆ ಹಿರಿಯ ನಟ ಸತ್ಯಜಿತ್ ಅವರು, ಪದೇ ಪದೇ ಹಣಕ್ಕಾಗಿ ಪೀಡಿಸುತ್ತಿದ್ದಾರೆ. ಹಣ ನೀಡದೇ ಇದ್ದಾಗ ರೌಡಿಗಳನ್ನು ಬಿಟ್ಟು ಬೆದರಿಸುತ್ತಿದ್ದಾರೆ. ನನಗೆ ಜೀವ ಬೆದರಿಕೆ ಇದೆ. ನನಗೆ ರಕ್ಷಣೆ ನೀಡಬೇಕು ಹಾಗೂ, ಸತ್ಯಜಿತ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬುದಾಗಿ ಉಲ್ಲೇಖಿಸಿ, ದೂರು ನೀಡಿದ್ದಾರೆ. ಹೀಗಾಗಿ ಹಿರಿಯ ನಟ ಸತ್ಯಜಿತ್ ವಿರುದ್ಧ ದೂರು ದಾಖಲಾಗಿದೆ.