ಉಡುಪಿ: ಕಲಿಕೆಗೆ ತಕ್ಕ ಉದ್ಯೋಗ ಸಿಗಲಿಲ್ಲವೆಂದು ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದಲ್ಲಿ ನಡೆದಿದೆ.
ಸಹನಾ (23 ) ಮೃತ ದುರ್ದೈವಿ. ಇವರು ದಕ್ಷಿಣ ಕನ್ನಡ ಜಿಲ್ಲೆಯ ಮೂಲದವರು.
ತಮ್ಮ ಅಕ್ಕನ ಮನೆಗೆ ಬಂದಿದ್ದ ಸಹನಾ ವಿಷ ಸೇವಿಸಿದ್ದಳು. ಅಸ್ವಸ್ಥಗೊಂಡಿದ್ದ ಸಹನಾಳನ್ನು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗಿತ್ತು.
ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.ಮೂರು ಆಸ್ಪತ್ರೆಗಳಲ್ಲಿ 10 ದಿನ ಸಹನಾಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.