
City Big News Desk.
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ದೊಡ್ಮನೆ ಕುಟುಂಬವನ್ನು ಹೊಂದಿರುವ ಡಾಕ್ಟರ್ ಶಿವರಾಜಕುಮಾರ್ ಅವರು ನಂದಿನಿ ಹಾಲಿನ ಉತ್ಪನ್ನಗಳಿಗೆ ರಾಯಭಾರಿಯಾಗಿದ್ದಾರೆ
ಹೌದು, ನಟ ಶಿವರಾಜ್ಕುಮಾರ್ ಅವರು ನಂದಿನಿ ಉತ್ಪನ್ನಗಳ ರಾಯಭಾರಿ ಆಗಲು ಒಪ್ಪಿಗೆ ಸೂಚಿಸಿದ್ದಾರೆ. ಈ ವಿಚಾರವನ್ನು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಅವರು ಖಚಿಪಡಿಸಿದ್ದಾರೆ. ಶಿವರಾಜ್ಕುಮಾರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಜನರಿಗೆ ಹೆಚ್ಚು ಇಷ್ಟವಾಗುತ್ತಾರೆ. ಈ ಕಾರಣಕ್ಕೆ ಅವರನ್ನು ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿ ಆಗಿ ಕರೆತರಲಾಗಿದೆ ಎಂದು ತಿಳಿದು ಬಂದಿದೆ. ಪುನೀತ್ ರಾಜ್ಕುಮಾರ್ ಅವರು ಈ ಮೊದಲು ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿ ಆಗಿದ್ದರು.
ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹಾಗೂ ಎಂಡಿ ಜಗದೀಶ್ ಶಿವರಾಜ್ಕುಮಾರ್ ಬಳಿ ಈ ಬಗ್ಗೆ ಮನವಿ ಮಾಡಿದ್ದರು. ಶಿವರಾಜ್ಕುಮಾರ್ ಅವರು ಈ ಮನವಿಗೆ ಸ್ಪಂದಿಸಿದ್ದಾರೆ. ನಂದಿನಿ ಉತ್ಪನ್ನಗಳ ಜಾಹೀರಾತಿನಲ್ಲಿ ಶಿವರಾಜ್ಕುಮಾರ್ ಅವರು ಕಾಣಿಸಿಕೊಳ್ಳಲಿದ್ದಾರೆ. ಶಿವಣ್ಣಗೆ ಹೂಗುಚ್ಛ ನೀಡಿ ಭೀಮಾನಾಯ್ಕ್ ಅಭಿನಂದಿಸಿದ್ದಾರೆ.
City Big News.
Disclaimer: This Story is auto-aggregated by a Syndicated Feed and has not been Created or Edited By City Big News Staff.