
City Big News Desk.
ಬೆಂಗಳೂರು: ಸ್ಯಾಂಡಲ್ ವುಡ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿದೇಶ ಪ್ರವಾಸಕ್ಕೆ ತೆರಳಿದ್ದ ವೇಳೆ ಸಂಭವಿಸಿದ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ ವೇಳೆ ದುರಂತ ಸಂಭವಿಸಿದೆ. ನಿನ್ನೆ ಬ್ಯಾಂಕಾಕ್ ನಲ್ಲಿ ಹೃದಯಾಘಾತವಾಗಿ, ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸ್ಪಂದನಾ ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಬಿ.ಕೆ ಶಿವರಾಂ ಅವರ ಪುತ್ರಿಯಾಗಿದ್ದಾರೆ.
ಇನ್ನೂ ವಿಷಯ ತಿಳಿಯುತ್ತಿದ್ದಂತೆ ಸ್ಪಂದನಾ ತಂದೆ ಬಿ.ಕೆ ಶಿವರಾಂ ಮತ್ತು ಅವರ ತಂದೆ ಬ್ಯಾಂಕಾಕ್ ಗೆ ತೆರಳಿದ್ದಾರೆ. ವಿಜಯ ರಾಘವೇಂದ್ರ ಅವರು ಶೂಟಿಂಗ್ ನಿಮಿತ್ತ ಬೆಂಗಳೂರಿನಲ್ಲಿಯೇ ಇದ್ದರು ಎಂದು ತಿಳಿದು ಬಂದಿದೆ, ಸ್ಪಂದನಾ ಸ್ನೇಹಿತರ ಜೊತೆ ಪ್ರವಾಸಕ್ಕೆ ತೆರಳಿದ್ದರು ಎನ್ನಲಾಗಿದೆ.
ನಾಳೆ ಬೆಂಗಳೂರಿಗೆ ವಿಜಯ್ ಪತ್ನಿ ಸ್ಪಂದನಾ ಪಾರ್ಥಿವ ಶರೀರ ಬರುವ ಸಾಧ್ಯತೆಯಿದ್ದು, ವಿಧಿ ವಿಧಾನ ಕಾರ್ಯವೆಲ್ಲ ಬೆಂಗಳೂರಿನಲ್ಲಿ ಜರುಗಲಿದೆ.
ಇನ್ನು ಸ್ಪಂದನಾ ಅವರು ವಿಧಿವಶರಾಗಿರುವ ಘಟನೆಯನ್ನು ಕೇಳಿ ಗಣ್ಯಾತಿ ಗಣ್ಯರು ಇವರಿಗೆ ಸಂತಾಪ ಸೂಚಿಸಿದ್ದಾರೆ.
City Big News.
Disclaimer: This Story is auto-aggregated by a Syndicated Feed and has not been Created or Edited By City Big News Staff.