international News

ನಾನು ಕಮಿಷನ್ ಕೇಳಿದ್ದೇನೆಂದು ನಿಜವಾದ್ರೆ ರಾಜಕೀಯ ನಿವೃತ್ತಿ: ಡಿಸಿಎಂ

ನಾನು ಕಮಿಷನ್ ಕೇಳಿದ್ದೇನೆಂದು ನಿಜವಾದ್ರೆ ರಾಜಕೀಯ ನಿವೃತ್ತಿ: ಡಿಸಿಎಂ

ಬೆಂಗಳೂರು: ರಾಜ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಮಿಷನ್ ಕೂಗು ಜೋರಾಗಿ ಕೇಳುತ್ತಿರುವುದರಿಂದ ಇದರ ಬಗ್ಗೆ ಪ್ರತಿಕ್ರಿಯೆ ನೀಡಿರುವಂತಹ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ನಾನು ಏನಾದರೂ ಕಮಿಷನ್ ಕೇಳಿದ್ದಕ್ಕೆ ಸಾಕ್ಷಿ ಇದ್ದರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಕಾಮಗಾರಿಗಳ ಬಿಲ್ ಬಾಕಿ ಬಿಡುಗಡೆಗೆ ಕಮಿಷನ್ ಕೇಳಲಾಗುತ್ತಿದ್ದಾರೆ ಎಂದು ರಾಜ್ಯ ಗುತ್ತಿಗೆದಾರರ ಸಂಘವು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರ ಮೇಲಿನ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿ, ಏನೂ ಆರೋಪ ಮಾಡ್ತಾರೆ ಮಾಡ್ಲಿ, ಅವರೆಲ್ಲ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾತಾಡಬೇಕು ಹಾಗೆ ಅವರ ಪಕ್ಷದ ನಾಯಕರೂ ತನಿಖೆ ಮಾಡಿ ಎಂದು ನಮ್ರತೆಯಿಂದ ಮನವಿ ಮಾಡಿದ್ರು ಆದ್ರೂ ಕೆಲಸ ಮಾಡಿದವರ ಬಿಲ್ ಏಕೆ ಅವರು ಕೊಡಲಿಲ್ಲ? ಕಂಟ್ರಾಕ್ಟರುಗಳು ಯಾರಿಗೆ ಎಷ್ಟು ಕೊಟ್ಟಿದಾರೆ ಎಂದು ಚರ್ಚೆ ಮಾಡಲು ಹೋಗಲ್ಲ ಎಂದು ಹೇಳಿದರು.

 

Disclaimer: This Story is auto-aggregated by a Syndicated Feed and has not been Created or Edited By City Big News Staff.