LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತರೀಕೆರೆ ಅರಣ್ಯಾಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ: ಮುಳ್ಳುಹಂದಿ ಬೇಟೆಯಾಡಿದ್ದ ಮೂವರ ಅರೆಸ್ಟ್

ತರೀಕೆರೆ: ಭದ್ರಾವತಿ ವಿಭಾಗಕ್ಕೆ ಒಳಪಡುವ ತರೀಕೆರೆ ವಲಯದ ಹುಣಸಘಟ್ಟ ಶಾಖೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮುಳ್ಳುಹಂದಿಗಳನ್ನು ಬೇಟೆಯಾಡಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಸಾವೆಮರಡಿ ಕಾವಲ್ ಗ್ರಾಮದ ನಿವಾಸಿ ಸುರೇಶ ಬಿನ್ ನಾಗರಾಜ ಎಂಬುವವರ ದನದ ಕೊಟ್ಟಿಗೆಯ ಮೇಲೆ ತರೀಕೆರೆ ವಲಯ ಅರಣ್ಯಾಧಿಕಾರಿ ಹರೀಶ್.ಕೆ.ಆರ್. ಅವರ ನೇತೃತ್ವದಲ್ಲಿ ಇಲಾಖೆ ಸಿಬ್ಬಂದಿ ದಿಢೀರ್ ದಾಳಿ ನಡೆಸಿದರು. ಈ ವೇಳೆ ಕೊಟ್ಟಿಗೆಯಲ್ಲಿ ಬಚ್ಚಿಡಲಾಗಿದ್ದ ಮೂರು ಮುಳ್ಳುಹಂದಿಗಳ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತ ಮೂವರು ಆರೋಪಿಗಳ ವಿರುದ್ಧ ಅರಣ್ಯ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿಕೊಂಡಿರುವ ಅಧಿಕಾರಿಗಳು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಈ ಯಶಸ್ವಿ ದಾಳಿ ಕಾರ್ಯಾಚರಣೆಯಲ್ಲಿ ಹುಣಸಘಟ್ಟ ಉಪ ವಲಯ ಅರಣ್ಯಾಧಿಕಾರಿ ಉಮೇಶ್ ಕೆ., ಗಸ್ತು ಅರಣ್ಯ ಪಾಲಕರಾದ ಅನ್ನಪೂರ್ಣೇಶ್ವರಿ ಹೆಗ್ಗಡೆ, ಸುನೀಲ್ ಪೂಜಾರಿ ಹಾಗೂ ನೆಡುತೋಪು ಕಾವಲುಗಾರರಾದ ರಾಜು ಮತ್ತು ನಾಗರಾಜ ಅವರು ಉಪಸ್ಥಿತರಿದ್ದು ಭಾಗವಹಿಸಿದ್ದರು.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು..

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ