LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

1 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಇನ್ಸ್ ಪೆಕ್ಟರ್

ಯಾದಗಿರಿ: ಯಾದಗಿರಿ ಜಿಲ್ಲೆ ಗುರುಮಠಕಲ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ವೀರಣ್ಣ ದೊಡ್ಡಮನಿ ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕ್ರಿಮಿನಲ್ ಪ್ರಕರಣ ವೊಂದರಲ್ಲಿ ಆರೋಪಿ ಬಂಧಿಸದಿರಲು ಮತ್ತು ಪ್ರಕರಣದಿಂದ ಕೈಬಿಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ವೀರಣ್ಣ ಲಂಚದ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.

ಗುರುಮಠಕಲ್ ತಾಲೂಕಿನ ಗೋಪಾಲಪುರ ಗ್ರಾಮದ ಆನಂದ್ ಎಂಬುವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಅವರನ್ನು ಬಂಧಿಸದಿರಲು ಮತ್ತು ಇನ್ನೊಂದು ಪ್ರಕರಣದಲ್ಲಿ ಅವರ ಹೆಸರನ್ನು ಕೈಬಿಡಲು ಪಿಐ ವೀರಣ್ಣ ದೊಡ್ಡಮನಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಈ ಕುರಿತಾಗಿ ಆನಂದ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದು, ಎರಡು ಪ್ರಕರಣಗಳ ಇತ್ಯರ್ಥಕ್ಕಾಗಿ ಒಂದು ಲಕ್ಷ ರೂಪಾಯಿ ಹಣ ಪಡೆಯುವ ಸಂದರ್ಭದಲ್ಲಿ ದಾಳಿ ನಡೆಸಲಾಗಿದೆ. ಗುರುಮಠಕಲ್ ಪೊಲೀಸ್ ವಸತಿ ಗೃಹದಲ್ಲಿ ಆನಂದ್ ಅವರಿಂದ ವೀರಣ್ಣ ಒಂದು ಲಕ್ಷ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ಡಿವೈಎಸ್ಪಿ ಜಾಕೀರ್ ನಮ್ಮದಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವೀರಣ್ಣ ದೊಡ್ಡಮನಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಕಾಂಪೌಂಡ್ ಗೇಟ್ ಬಿದ್ದು 5 ವರ್ಷದ ಮಗು ಸಾವುBIG NEWS: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವ: ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾಚಿನ್ನ ಖರೀದಿದಾರರಿಗೆ ವೀಕೆಂಡ್ ಗಿಫ್ಟ್: ಇಂದು ಚಿನ್ನದ ಬೆಲೆ ಇಳಿಕೆ, ಬೆಳ್ಳಿ ಬೆಲೆ ಸ್ಥಿರ ಮೇ 9ರ ಲೇಟೆಸ್ಟ್ ದರ ಪಟ್ಟಿ ನೋಡಿಹೊಳೆಯುವ ಮುಖದ ಚರ್ಮಕ್ಕಾಗಿ ಆಲೂಗಡ್ಡೆ ಫೇಸ್ ಪ್ಯಾಕ್: ಮನೆಯಲ್ಲೇ ಸಿಗುವ ಈ ವಸ್ತುವಿನಿಂದ ಪಡೆಯಿರಿ ಇನ್‌ಸ್ಟಂಟ್ ಗ್ಲೋಪ್ರವಾಸದ ಸಮಯದಲ್ಲಿ ಕಾಂತಿ ಕಳೆದುಕೊಳ್ಳುವ ಕೂದಲಿಗೆ ‘ಆಯಿಲಿಂಗ್’ ಸಂಜೀವಿನಿ: ಕೂದಲು ಉದುರುವಿಕೆಗೆ ಇಲ್ಲಿದೆ ಬ್ರೇಕ್BREAKING: ಗೊಬ್ಬರ ತುಂಬಿದ್ದ ಲಾರಿ-ಕಾರಿನ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ದುರ್ಮರಣBIG NEWS: ಯಾವುದೇ ಹುದ್ದೆ ಹಾಗೂ ಅಧಿಕಾರಕ್ಕಾಗಿ ವಿಸಿಕೆ ಬೇಡಿಕೆ ಇಟ್ಟಿಲ್ಲ: ಪಕ್ಷದ ಘನತೆಗೆ ಕುಂದು ತರಲು ಅಪಪ್ರಾಚಾರ ನಡೆಸಲಾಗುತ್ತಿದೆ: ವಿಸಿಕೆ ನಾಯಕ ರವಿಕುಮಾರ್ ಸ್ಪಷ್ಟನೆಬಾಲಿವುಡ್ ನಟಿಯರ ಮುಖವಾಡ ಕಳಚಿದ ಅಮೀಶಾ ಪಟೇಲ್: ಹಣ ನೀಡಿ ನಂಬರ್ 1 ಪಟ್ಟ ಪಡೆಯುವವರ ಬಗ್ಗೆ ಆಕ್ರೋಶBREAKING: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಿಜಯ್ ಅಭಿಮಾನಿ: ವ್ಯಕ್ತಿ ಸ್ಥಿತಿ ಗಂಭಿರBREAKING: ವಿಜಯ್ ಗೆ ಬೆಂಬಲ ನೀಡುವಂತೆ ಒತ್ತಾಯಿಸಿ ಕೈ ಕೊಯ್ದುಕೊಂಡ ವಿಸಿಕೆ ಕಾರ್ಯಕರ್ತ: ಚೆನ್ನೈ ಕಚೇರಿ ಮುಂದೆ ಹೈಡ್ರಾಮಾ