ಧಾರವಾಡ: ಜಮೀನಿನ ಖರಾಬ್ ಭಾಗವನ್ನು ತೆಗೆದುಹಾಕುವ ಕೆಲಸ ಮಾಡಿಕೊಡಲು ₹1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟು, ಅದರಲ್ಲಿ ₹50 ಲಕ್ಷ ಮುಂಗಡ ಹಣ ಪಡೆಯುತ್ತಿದ್ದ ಧಾರವಾಡ ತಹಸೀಲ್ದಾರ್ ಸಚ್ಚಿದಾನಂದ ಕುಚನೂರ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಬಾಗಲಕೋಟೆ ಜಿಲ್ಲೆ ಮೂಲದ ರಿಯಲ್ ಎಸ್ಟೇಟ್ ಡೆವಲಪರ್ ಮಂಜುನಾಥ್ ಅಂಗಡಿ ಅವರು ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮದ ಬಳಿ ಜಮೀನು ಖರೀದಿಸಿದ್ದರು. ಈ ಜಮೀನನ್ನು ಅಭಿವೃದ್ಧಿಪಡಿಸಲು ಮುಂದಾಗಿದ್ದ ಅವರು, ಜಮೀನಿನಲ್ಲಿದ್ದ ಖರಾಬ್ ಭಾಗವನ್ನು ತೆಗೆದುಹಾಕುವ ಸಂಬಂಧ ತಾಲೂಕು ಕಚೇರಿಗೆ ಅರ್ಜಿ ಸಲ್ಲಿಸಿದ್ದರು.
ಈ ಕೆಲಸಕ್ಕೆ ಸಂಬಂಧಿಸಿದಂತೆ ತಹಸೀಲ್ದಾರ್ ಸಚ್ಚಿದಾನಂದ ಕುಚನೂರ್ ಅವರು ಡೆವಲಪರ್ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ₹1 ಕೋಟಿ ನಗದು ಹಣದ ಜೊತೆಗೆ 1 ಎಕರೆ ಜಮೀನು ನೀಡುವಂತೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
https://www.instagram.com/reel/DdWxiWOTiD5/?utm_source=ig_embed&utm_campaign=loading” data-instgrm-version=”14″ style=” background:#FFF; border:0; border-radius:3px; box-shadow:0 0 1px 0 rgba(0,0,0,0.5),0 1px 10px 0 rgba(0,0,0,0.15); margin: 1px; max-width:540px; min-width:326px; padding:0; width:99.375%; width:-webkit-calc(100% – 2px); width:calc(100% – 2px);”>https://www.instagram.com/reel/DdWxiWOTiD5/?utm_source=ig_embed&utm_campaign=loading” style=” background:#FFFFFF; line-height:0; padding:0 0; text-align:center; text-decoration:none; width:100%;” target=”_blank”>View this post on Instagramhttps://www.instagram.com/reel/DdWxiWOTiD5/?utm_source=ig_embed&utm_campaign=loading” style=” color:#c9c8cd; font-family:Arial,sans-serif; font-size:14px; font-style:normal; font-weight:normal; line-height:17px; text-decoration:none;” target=”_blank”>A post shared by Vinay Reddy (@vinay_reddy909)
">www.instagram.com/embed.js”>
ಲಂಚದ ಹಣ ನೀಡಲು ಇಚ್ಛಿಸದ ಮಂಜುನಾಥ್ ಅವರು ಈ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರು ಸ್ವೀಕರಿಸಿದ ಅಧಿಕಾರಿಗಳು ಪ್ರಕರಣದ ಬಗ್ಗೆ ಮಾಹಿತಿ ಕಲೆಹಾಕಿ ಕಾರ್ಯಾಚರಣೆಗೆ ಸಿದ್ಧತೆ ನಡೆಸಿದ್ದರು.
₹50 ಲಕ್ಷ ಮುಂಗಡ ಪಡೆಯುತ್ತಿದ್ದಾಗ ದಾಳಿ
ತಹಸೀಲ್ದಾರ್ಗೆ ಮುಂಗಡವಾಗಿ ₹50 ಲಕ್ಷ ನೀಡುವುದಾಗಿ ಡೆವಲಪರ್ ಒಪ್ಪಿಕೊಂಡಿದ್ದರು. ಅದರಂತೆ ಹಣ ನೀಡುವ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.
₹50 ಲಕ್ಷ ನಗದು ಸ್ವೀಕರಿಸುತ್ತಿದ್ದ ವೇಳೆ ಸಚ್ಚಿದಾನಂದ ಕುಚನೂರ್ ಅವರನ್ನು ಅಧಿಕಾರಿಗಳು ರೆಡ್ಹ್ಯಾಂಡ್ ಆಗಿ ಹಿಡಿದಿದ್ದಾರೆ. ನಂತರ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಖಚಿತ ಮಾಹಿತಿ ಮತ್ತು ದೂರು ಆಧರಿಸಿ ಲೋಕಾಯುಕ್ತ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಇತರ ಮಾಹಿತಿಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಜಮೀನಿನ ಖರಾಬ್ ತೆರವು ವಿಚಾರದಲ್ಲಿ ಹಣದ ಬೇಡಿಕೆ ಹೇಗೆ ಇತ್ತು ಎಂಬುದರ ಬಗ್ಗೆಯೂ ತನಿಖೆ ಮುಂದುವರಿದಿದೆ.
ಈ ಪ್ರಕರಣದಲ್ಲಿ ₹1 ಕೋಟಿ ಹಣ ಮತ್ತು 1 ಎಕರೆ ಜಮೀನಿಗೆ ಬೇಡಿಕೆ ಇಡಲಾಗಿತ್ತು ಎಂಬ ಆರೋಪ ಕೇಳಿಬಂದಿದ್ದು, ಮುಂಗಡವಾಗಿ ₹50 ಲಕ್ಷ ಪಡೆಯುವಾಗಲೇ ತಹಸೀಲ್ದಾರ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.