LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಖರೀದಿ ನೆಪದಲ್ಲಿ 1.64 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದ ಮುಂಬೈ ಗ್ಯಾಂಗ್ ಅರೆಸ್ಟ್

ಬೆಂಗಳೂರು: ಚಿನ್ನಭರಣ ಖರೀದಿಸುವ ನೆಪದಲ್ಲಿ ಜುವೆಲ್ಲರಿ ಶಾಪ್ ಸಿಬ್ಬಂದಿಯಿಂದ 1.64 ಕೋಟಿ ರೂಪಾಯಿ ಮೌಲ್ಯದ ಚೆನ್ನಾಭರಣ ದೋಚಿದ್ದ ಮುಂಬೈ ಮೂಲದ ಇಬ್ಬರು ಆರೋಪಿಗಳನ್ನು ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮುಂಬೈನ ಪರೇಶ್ ಸೋನಿ ಮತ್ತು ಪ್ರವೀಣ್ ಅಲಿಯಾಸ್ ಪಪ್ಪು ಬಂಧಿತ ಆರೋಪಿಗಳು. ಶ್ಯಾಮ್ ಹಾಗೂ ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು ಅವರ ಬಂಧನಕ್ಕೆ ಬಲೆ ಬೀಸಲಾಗಿದೆ. ಆರೋಪಿಗಳು ಮೇ 16ರಂದು ಮಲ್ಲೇಶ್ವರದ ಸಂಪಿಗೆ ರಸ್ತೆಯಲ್ಲಿ ತಾತ್ಕಾಲಿಕವಾಗಿ ಸ್ಥಾಪಿಸಿದ್ದ ಕಚೇರಿಯೊಂದರಲ್ಲಿ ಈ ಕೃತ್ಯ ನಡೆದಿದ್ದು, ಬಂಧಿತರಿಂದ 1.64 ಕೋಟಿ ರೂ. ಮೌಲ್ಯದ 1.08 ಕೆಜಿ ಚಿನ್ನದ ಗಟ್ಟಿ ಜಪ್ತಿ ಮಾಡಲಾಗಿದೆ.

ಚಿಕ್ಕಪೇಟೆಯ ಮಹೇಂದ್ರ ಕುಮಾರ್ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಆಭರಣ ಖರೀದಿಸುವುದಾಗಿ ಮಹಾರಾಷ್ಟ್ರದಲ್ಲಿಯೂ ಆರೋಪಿಗಳು ಇದೇ ರೀತಿ ವಂಚಿಸಿದ್ದಾರೆ. ಮಹಾರಾಷ್ಟ್ರದ 15 ಪೊಲೀಸ್ ಠಾಣೆಗಳಲ್ಲಿ ಆರೋಪಿಗಳ ವಿರುದ್ಧ ಪ್ರಕರಣಗಳು ದಾಖಲಾಗಿವೆ.

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಆರೋಪಿಗಳು ಕೃತ್ಯ ಎಸಗಿದ್ದಾರೆ. ಮಹಾರಾಷ್ಟ್ರ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು ಅಲ್ಲಿನ ಪೊಲೀಸರು ಬಾಡಿ ವಾರೆಂಟ್ ಮೇಲೆ ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಿದ್ದಾರೆ.

ಮೇ 16 ರಂದು ತಮ್ಮ ಸಂಸ್ಥೆಗೆ ಭಾರಿ ಪ್ರಮಾಣದ ಆಭರಣಗಳು ಬೇಕಾಗಿವೆ ಎಂದು ಹೇಳಿದ ಆರೋಪಿಗಳು ಸಂಪಿಗೆ ರಸ್ತೆಯಲ್ಲಿರುವ ಕಚೇರಿಗೆ ಚಿನ್ನಾಭರಣಗಳ ಮಾದರಿ ತಂದು ತೋರಿಸುವಂತೆ ಕೋರಿದ್ದರು. ಆರೋಪಿಗಳು ಆಭರಣ ಮಾದರಿಗಳನ್ನು ನೋಡಿ ಅವುಗಳ ಫೋಟೋ ತೆಗೆಯುವ ನೆಪದಲ್ಲಿ ಪಕ್ಕದ ಕೊಠಡಿಗೆ ಆಭರಣಗಳನ್ನು ತೆಗೆದುಕೊಂಡು ಹೋಗಿದ್ದರು. ಕೆಲ ಸಮಯ ಕಳೆದರೂ ಆರೋಪಿಗಳು ರೂಮ್ ನಿಂದ ಹೊರಗೆ ಬಂದಿರಲಿಲ್ಲ. ಒಳಗೆ ಹೋಗಿ ಪರಿಶೀಲಿಸಿದಾಗ ಆಭರಣ ಸಹಿತ ನಾಪತ್ತೆಯಾಗಿರುವುದು ಗೊತ್ತಾಗಿತ್ತು. ಮುಂಬೈ ಜವಾರಿ ಬಜಾರ್ ಸೇರಿ ಹಲವು ಕಡೆ ಆಭಣಗಳನ್ನು ಆರೋಪಿಗಳು ಮಾರಾಟ ಮಾಡಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ