LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಿನ್ನ ಖರೀದಿದಾರರಿಗೆ ಗುಡ್‌ನ್ಯೂಸ್: 10 ಗ್ರಾಂ ಚಿನ್ನದ ಬೆಲೆ ₹1,950 ಇಳಿಕೆ, ಬೆಳ್ಳಿಯೂ ಅಗ್ಗ

ಬೆಂಗಳೂರು: ಕಳೆದ ಮೂರು ದಿನಗಳಲ್ಲಿ ಎರಡು ಬಾರಿ ಭಾರಿ ಏರಿಕೆ ಕಂಡು ಆಭರಣ ಪ್ರಿಯರ ಜೇಬಿಗೆ ಕತ್ತರಿ ಹಾಕಿದ್ದ ಚಿನ್ನದ ದರವು, ಇಂದು ಜಾಗತಿಕ ಮಾರುಕಟ್ಟೆಯ ದಿಢೀರ್ ಪ್ರಭಾವದಿಂದಾಗಿ ಗಣನೀಯವಾಗಿ ಇಳಿಕೆಯಾಗಿದೆ ಹೈದರಾಬಾದ್, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಬಂಗಾರದ ಬೆಲೆ ಒಂದೇ ದಿನದಲ್ಲಿ ಸುಮಾರು ₹2,000 ರಷ್ಟು ಇಳಿಕೆಯಾಗಿದ್ದರೆ, ಬೆಳ್ಳಿ ಬೆಲೆ ಕೆಜಿಗೆ ಬರೋಬ್ಬರಿ ₹5,000 ರಷ್ಟು ಪಾತಾಳಕ್ಕೆ ಕುಸಿದಿದೆ.ಮಾರುಕಟ್ಟೆಯಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ದರ ಪಟ್ಟಿ ಹಾಗೂ ಈ ದಿಢೀರ್ ಕುಸಿತಕ್ಕೆ ಅಸಲಿ ಕಾರಣಗಳೇನು?

ದೇಶೀಯ ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರ (10 ಗ್ರಾಂ):

ಸ್ಥಳೀಯ ಮಾರುಕಟ್ಟೆಯಲ್ಲಿ ಇಂದು ಚಿನ್ನದ ದರದಲ್ಲಿ ಭಾರಿ ಇಳಿಕೆ ದಾಖಲಾಗಿದ್ದು, ಮಾರುಕಟ್ಟೆ ಮುಖ್ಯಾಂಶಗಳು ಹೀಗಿವೆ:

22 ಕ್ಯಾರೆಟ್ ಆಭರಣ ಚಿನ್ನ: ಮದುವೆ ಸೀಸನ್‌ನಲ್ಲೇ ಗ್ರಾಹಕರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಒಂದೇ ದಿನದಲ್ಲಿ ದೊಡ್ಡ ಪ್ರಮಾಣದ ಇಳಿಕೆ ಕಂಡುಬಂದಿದೆ. ಪ್ರಸ್ತುತ 10 ಗ್ರಾಂ (ಒಂದು ತುಲ) 22 ಕ್ಯಾರೆಟ್ ಚಿನ್ನದ ಬೆಲೆ ₹1,33,750 ರಷ್ಟಿದೆ.

24 ಕ್ಯಾರೆಟ್ ಅಪರಂಜಿ ಚಿನ್ನ (Pure Gold): 24 ಕ್ಯಾರೆಟ್ ನಿವ್ವಳ ಚಿನ್ನದ ಬೆಲೆ ಇಂದು ಬರೋಬ್ಬರಿ ₹2,070 ರಷ್ಟು ಭಾರಿ ಕುಸಿತ ಕಂಡು, 10 ಗ್ರಾಂಗೆ ₹1,45,910 ರ ಮಟ್ಟಕ್ಕೆ ತಲುಪಿದೆ.

ಕೆಜಿಗೆ ₹5,000 ಕುಸಿದ ಬೆಳ್ಳಿ (Silver Price Drop):

ಚಿನ್ನದ ಹಾದಿಯಲ್ಲೇ ಸಾಗಿರುವ ಬೆಳ್ಳಿ ಬೆಲೆಯೂ ಸಹ ಹೂಡಿಕೆದಾರರು ಮತ್ತು ಗ್ರಾಹಕರಿಗೆ ಭಾರಿ ನಿರಾಳತೆ ತಂದಿದೆ. ಇಂದು ದೇಶೀಯ ಮಾರುಕಟ್ಟೆಯಲ್ಲಿ ಬೆಳ್ಳಿ ಬೆಲೆ ಒಂದೇ ಸಮನೆ ₹5,000 ಪತನಗೊಂಡಿದ್ದು, ಪ್ರಸ್ತುತ ಪ್ರತಿ ಕೆಜಿ ಬೆಳ್ಳಿ ಬೆಲೆ ₹2.50 ಲಕ್ಷಕ್ಕೆ ತಲುಪಿದೆ. ವಿಶೇಷ ಎಂದರೆ, ಕಳೆದ 8 ದಿನಗಳಿಂದ ಬೆಳ್ಳಿ ಬೆಲೆಯಲ್ಲಿ ಯಾವುದೇ ಏರಿಕೆ ಕಂಡುಬಂದಿಲ್ಲ ಹಾಗೂ ಈ ಅವಧಿಯಲ್ಲಿ ಒಟ್ಟಾರೆಯಾಗಿ ಸುಮಾರು ₹30,000 ದಷ್ಟು ಬೆಲೆ ಇಳಿಕೆಯಾಗಿರುವುದು ಗಮನಾರ್ಹ!

ಚಿನ್ನದ ಬೆಲೆ ದಿಢೀರ್ ಕುಸಿಯಲು ಕಾರಣವೇನು?

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ನಡೆದ 2 ಪ್ರಮುಖ ವಿದ್ಯಮಾನಗಳು ಈ ದರ ಕುಸಿತಕ್ಕೆ ನೇರ ಕಾರಣವಾಗಿವೆ:

ಯುಎಸ್ ಫೆಡ್ ಬಡ್ಡಿದರ ಭೀತಿ: ಅಮೆರಿಕದ ಸೆಂಟ್ರಲ್ ಬ್ಯಾಂಕ್ ಆದ ಯುಎಸ್ ಫೆಡರಲ್ ರಿಸರ್ವ್ (US Federal Reserve) ಮುಂಬರುವ ದಿನಗಳಲ್ಲಿ ಬಡ್ಡಿದರಗಳನ್ನು ಹೆಚ್ಚಿಸಬಹುದು ಎಂಬ ಅಂದಾಜುಗಳು ಜಾಗತಿಕ ಮಾರುಕಟ್ಟೆಯಲ್ಲಿ ದಟ್ಟವಾಗಿವೆ. ಫೆಡ್ ಬಡ್ಡಿದರ ಹೆಚ್ಚಿಸಿದರೆ, ಯುಎಸ್ ಡಾಲರ್ ಮತ್ತು ಬಾಂಡ್ ಇಳುವರಿ (Bond Yields) ಬಲಗೊಳ್ಳುತ್ತದೆ. ಇದರಿಂದಾಗಿ ಸುರಕ್ಷಿತ ಹೂಡಿಕೆಯಾಗಿ ಚಿನ್ನಕ್ಕಿರುವ ಬೇಡಿಕೆ ಕಡಿಮೆಯಾಗಿ ಬೆಲೆಗಳು ಕುಸಿಯುತ್ತವೆ.

ಸ್ಪಾಟ್ ಗೋಲ್ಡ್ ಪತನ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸ್ಪಾಟ್ ಗೋಲ್ಡ್ (Spot Gold) ಬೆಲೆ ನಿನ್ನೆ ಒಂದು ಔನ್ಸ್‌ಗೆ $4,200 ಗಿಂತ ಹೆಚ್ಚಿತ್ತು. ಆದರೆ ರಾತ್ರಿ ಬೆಳಗಾಗುವುದರೊಳಗೆ ಅದು $80 ಕ್ಕಿಂತ ಹೆಚ್ಚು ಕುಸಿದು ಪ್ರಸ್ತುತ $4,130 ಮಟ್ಟಕ್ಕೆ ತಲುಪಿದೆ. ಇತ್ತ ಬೆಳ್ಳಿ ಬೆಲೆಯೂ ಭಾರಿ ಕುಸಿತ ಕಂಡು ಔನ್ಸ್‌ಗೆ $63 ಮಟ್ಟಕ್ಕೆ ಬಂದಿದೆ. ಇದರೊಂದಿಗೆ ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಗಳಲ್ಲಿನ ಅನಿಶ್ಚಿತತೆಯೂ ಜಾಗತಿಕ ಮಾರುಕಟ್ಟೆಯ ಮೇಲೆ ಪ್ರಭಾವ ಬೀರಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಮಳೆ ಕೊರತೆಯಿಂದ ಕಂಗಾಲಾದ ಬೆಳಗಾವಿ ರೈತರು: ಮಹಾರಾಷ್ಟ್ರದಲ್ಲಿಯೂ ನೀರಿನ ಅಭಾವವಿರುವುದರಿಂದ ಅಲ್ಲಿಂದ ನೀರು ಬಿಡುವುದು ಕಷ್ಟಕರ ಎಂದ ಸಚಿವ ಸತೀಶ್ ಜಾರಕಿಹೊಳಿಪಿಯುಸಿ, ಪದವೀಧರರಿಗೆ ಉದ್ಯೋಗಾವಕಾಶ: ಜೂ.25 ರಂದು ನೇರ ಸಂದರ್ಶನಬಿಹಾರದಲ್ಲಿ ಭಾರೀ ವಿವಾದಕ್ಕೆ ಕಾರಣವಾದ ಭರತ್ ತಿವಾರಿ ಎನ್ಕೌಂಟರ್: ಪೊಲೀಸರ ವಿರುದ್ಧ ಎಫ್ಐಆರ್: ನ್ಯಾಯಾಂಗ ತನಿಖೆಗೆ ಆದೇಶ‘ಕೋರ್ಟ್ ನಲ್ಲಿ ಪತ್ನಿಯೊಬ್ಬರು ತನ್ನ ಗಂಡನನ್ನು ಹುಡುಕುತ್ತಿದ್ದಾರೆ’: ಸಿಎಂ ವಿಜಯ್ ವಿರುದ್ಧ ವೈಯಕ್ತಿಕ ಟೀಕೆ ಮಾಡಿದ ಉದಯನಿಧಿ ಸ್ಟಾಲಿನ್: ಟಿವಿಕೆ ತಿರುಗೇಟುBREAKING: ಪ್ರಯಾಣಿಕರೇ ಗಮನಿಸಿ: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ತಾಂತ್ರಿಕ ದೋಷಟೀಂ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನಪಿಯು ವಿದ್ಯಾರ್ಥಿನಿಯರು ನಾಪತ್ತೆ ಪ್ರಕರಣ: 6 ತಿಂಗಳಾದರೂ ಪತ್ತೆಯಾಗದ ಯುವತಿಯರು: ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಸಿಐಡಿ ಮನವಿಬಿಡದಿ ಟೌನ್ ಶಿಪ್ ವಿವಾದ: ನಿಖಿಲ್ 5 ಎಕರೆ ಜಾಗ ಕೊಡಲಿ; ‘ನಿಖಿಲ್ ಲೇಔಟ್’ ಎಂದು ಹೆಸರಿಡುತ್ತೇವೆ ಎಂದು ಟಾಂಗ್ ನೀಡಿದ ಹೆಚ್.ಸಿ.ಬಾಲಕೃಷ್ಣರೇಣುಕಾಸ್ವಾಮಿ ಹತ್ಯೆ ಪ್ರಕರಣ: ಕೇಸ್ ನಿಂದ ಹಿಂದೆ ಸರಿದ ನಟ ದರ್ಶನ್ ಪರ ವಕೀಲಬಿಡದಿ ಟೌನ್ ಶಿಪ್ ಕೆಸರೆರಚಾಟ: ಹಣ ಕೊಟ್ಟು ಜನರನ್ನು ಕರೆಸಿ ಪ್ರತಿಭಟನೆ: ಶಾಸಕರಿಗೆ ನಿವೇಶನ; HDK ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದ ಶಾಸಕ ಬಾಲಕೃಷ್ಣ