LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶೇ. 12.5 ರಷ್ಟು ವೇತನ ಹೆಚ್ಚಳ ಒಪ್ಪದ ಸಾರಿಗೆ ನೌಕರರು, ಮೇ 20ರಿಂದ ಮುಷ್ಕರದ ಎಚ್ಚರಿಕೆ

ಬೆಂಗಳೂರು: ರಾಜ್ಯ ಸರ್ಕಾರ ಶೇಕಡ 12.5 ರಷ್ಟು ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವುದನ್ನು ಒಪ್ಪದ ಕೆಎಸ್ಆರ್‌ಟಿಸಿ ಸೇರಿ 4 ನಿಗಮಗಳ ಸಾರಿಗೆ ನೌಕರರು ಮೇ 20ರಿಂದ ಮುಷ್ಕರ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದರಿಂದಾಗಿ ಸಮಸ್ಯೆ ಬಿಗಡಾಯಿಸಿದೆ. ವೇತನ ಹೆಚ್ಚಳವನ್ನು 2024ರ ಏಪ್ರಿಲ್ ನಿಂದಲೇ ಜಾರಿಗೊಳಿಸಬೇಕು. ಶೇ. 25 ರಷ್ಟು ವೇತನ ಹೆಚ್ಚಳ ಮಾಡಬೇಕು ಎಂದು ಈ ಹಿಂದೆ ಮಾಡಲಾಗಿದ್ದ ವೇತನ ಪರಿಷ್ಕರಣೆಯ ಹಿಂಬಾಕಿ ಒಂದು ವರ್ಷ ಬಾಕಿ ಉಳಿದಿದ್ದು, ಅದನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಲಾಗಿದೆ. ತಮ್ಮ ಬೇಡಿಕೆಗಳನ್ನು ಮುಂದಿಟ್ಟು ಹೋರಾಟ ಕೈಗೊಳ್ಳುವುದಾಗಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ತಿಳಿಸಿದೆ.

2023ರ ಮಾರ್ಚ್ ವೇತನ ಪರಿಷ್ಕರಣೆಯ 26 ತಿಂಗಳ ಹಿಂಬಾಕಿ ಮೊತ್ತ 1271.92 ಕೋಟಿ ರೂ.ಗಳಲ್ಲಿ ಮೊದಲ ಕಂತಿನ 450 ಕೋಟಿ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಿದ್ದು ನೌಕರರ ಖಾತೆಗಳಿಗೆ ಜಮಾ ಆಗಿದೆ. ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಅವರಿಗೆ ಸಿಗುವ ಎಲ್ಲಾ ಸೌಲಭ್ಯ ನೀಡಬೇಕು. ಬಾಕಿ ಇರುವ ಭತ್ಯೆ ಮತ್ತು ರಜೆ ನಗದೀಕರಣದ ಹಣವನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ