LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಗ್ ಬಾಸ್ ಕನ್ನಡ 13ಕ್ಕೆ ಸಖತ್ ರೆಸ್ಪಾನ್ಸ್‌; JioHotstarನಲ್ಲಿ ಮೊದಲ ವಾರವೇ ಹೊಸ ದಾಖಲೆ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಾರಥ್ಯದ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ 13’ ಆರಂಭವಾದ ಮೊದಲ ವಾರದಲ್ಲೇ ಡಿಜಿಟಲ್ ವೇದಿಕೆಯಲ್ಲಿ ಭರ್ಜರಿ ಸದ್ದು ಮಾಡಿದೆ. JioHotstarನ ಕನ್ನಡ ವಿಭಾಗದಲ್ಲಿ ನಂ.1 ಸ್ಥಾನಕ್ಕೇರುವ ಮೂಲಕ ಶೋಗೆ ಸಿಗುತ್ತಿರುವ ಪ್ರೇಕ್ಷಕರ ಪ್ರತಿಕ್ರಿಯೆ ಮತ್ತೊಮ್ಮೆ ಗಮನ ಸೆಳೆದಿದೆ.

ಎಂಡೆಮೋಲ್ ಶೈನ್ ಇಂಡಿಯಾ ನಿರ್ಮಿಸಿರುವ ಈ ಕಾರ್ಯಕ್ರಮ ಟೆಲಿವಿಷನ್‌ನಲ್ಲಿ ಮಾತ್ರವಲ್ಲದೆ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲೂ ನಿರಂತರ ಚರ್ಚೆಯಲ್ಲಿದೆ. ಪ್ರಸಾರ ಆರಂಭಿಸಿದ ಕೆಲವೇ ದಿನಗಳಲ್ಲಿ JioHotstarನಲ್ಲಿ ಅಗ್ರಸ್ಥಾನಕ್ಕೇರಿರುವುದು ಕಾರ್ಯಕ್ರಮದ ಜನಪ್ರಿಯತೆಗೆ ಮತ್ತೊಂದು ಸಾಕ್ಷಿಯಾಗಿದೆ.

ಕರ್ನಾಟಕದ ವಿವಿಧ ಭಾಗಗಳ ಪ್ರೇಕ್ಷಕರನ್ನು ತಲುಪಿರುವ ‘ಬಿಗ್ ಬಾಸ್ ಕನ್ನಡ 13’, ಈ ಬಾರಿ ಡಿಜಿಟಲ್ ವೀಕ್ಷಕರಿಂದಲೂ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಭಾರತೀಯ ಪ್ರಾದೇಶಿಕ ಮಾರುಕಟ್ಟೆಯ ಪ್ರೇಕ್ಷಕರ ಅಭಿರುಚಿಗೆ ತಕ್ಕಂತೆ ಕಾರ್ಯಕ್ರಮವನ್ನು ರೂಪಿಸುವಲ್ಲಿ ಎಂಡೆಮೋಲ್ ಶೈನ್ ಇಂಡಿಯಾ ತನ್ನ ಅನುಭವವನ್ನು ಮತ್ತೊಮ್ಮೆ ತೋರಿಸಿದೆ.

ಇನ್ನು ಈ ಬಾರಿ ದಕ್ಷಿಣ ಭಾರತದ ಬಿಗ್ ಬಾಸ್ ಕಾರ್ಯಕ್ರಮಗಳಿಗೆ ವಿಶೇಷ ಮೆರುಗು ಸಿಕ್ಕಿದೆ. ‘ಬಿಗ್ ಬಾಸ್ ಸೌತ್ ಕಾರ್ನಿವಲ್’ ಅಡಿಯಲ್ಲಿ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳ ಬಿಗ್ ಬಾಸ್ ಶೋಗಳು ಒಂದೇ ದಿನ ಅದ್ಧೂರಿಯಾಗಿ ಆರಂಭಗೊಂಡಿವೆ.

ಈ ನಾಲ್ಕು ಕಾರ್ಯಕ್ರಮಗಳ ನಿರೂಪಕರಾದ ಮೋಹನ್‌ಲಾಲ್ (ಮಲಯಾಳಂ), ಅಕ್ಕಿನೇನಿ ನಾಗಾರ್ಜುನ (ತೆಲುಗು), ಕಿಚ್ಚ ಸುದೀಪ್ (ಕನ್ನಡ) ಹಾಗೂ ವಿಜಯ್ ಸೇತುಪತಿ (ತಮಿಳು) ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಪರಸ್ಪರ ಶುಭ ಹಾರೈಸಿದ್ದು ವಿಶೇಷವಾಗಿತ್ತು.

ದಕ್ಷಿಣ ಭಾರತದಾದ್ಯಂತ ನಡೆದ ಈ ವಿಶೇಷ ಸಂಭ್ರಮದ ನಡುವೆಯೇ ‘ಬಿಗ್ ಬಾಸ್ ಕನ್ನಡ 13’ JioHotstarನಲ್ಲಿ ನಂ.1 ಸ್ಥಾನ ಪಡೆದಿರುವುದು ಕನ್ನಡ ಕಾರ್ಯಕ್ರಮಕ್ಕೆ ಸಿಕ್ಕಿರುವ ಮತ್ತೊಂದು ದೊಡ್ಡ ಗೆಲುವಾಗಿದೆ. ಟಿವಿ ಜೊತೆಗೆ ಒಟಿಟಿಯಲ್ಲೂ ಕಿಚ್ಚ ಸುದೀಪ್ ಅವರ ಶೋ ತನ್ನ ಗಟ್ಟಿಯಾದ ಹಿಡಿತವನ್ನು ಮುಂದುವರಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ