LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೋಝಿಕ್ಕೋಡ್ ರೈಲು ನಿಲ್ದಾಣದಲ್ಲಿ ಅವಘಡ: 137 ವರ್ಷದಷ್ಟು ಹಳೆಯ ಗಡಿಯಾರ ಗೋಪುರ ಕುಸಿತ

ತಿರುವನಂತಪುರಂ: ಭಾರಿ ಮಳೆಯಿಂದಾಗಿ ಕೋಝಿಕ್ಕೋಡ್ ರೈಲು ನಿಲ್ದಾಣದಲ್ಲಿ ಅವಘಡವೊಂದು ಸಂಭವಿಸಿದೆ. ನವೀಕರಣ ಕಾರ್ಯ ನಡೆಯುತ್ತಿರುವಾಗ 137 ವರ್ಷಗಳಷ್ಟು ಹಳೆಯದಾದ ಗಡಿಯಾರ ಗೋಪುರ ಕುಸಿದು ಬಿದ್ದಿದ್ದು, ಅನಾಹುತವೊಂದು ಸ್ವಲ್ಪದರಲ್ಲೇ ತಪ್ಪಿದೆ.

ಕೋಝಿಕ್ಕೋಡ್ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 2 ರಲ್ಲಿರುವ 137 ವರ್ಷದ ಹಳೆಯ ಗಡಿಯಾರ ಗೋಪುರ ಕುಸಿದಿದೆ. ಪರಿಣಾಮ ಹಲವು ರೈಲು ಸೇವೆಗಳ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ.

ಹಳೆಯ ರಚನೆಯು, ನಿಲ್ದಾಣದ ನವೀಕರಣ ಯೋಜನೆಯ ಭಾಗವಾಗಿ ಪುನರಾಭಿವೃದ್ಧಿ ಕಾರ್ಯ ನಡೆಯುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಹತ್ತಿರದ ರೈಲ್ವೆ ಹಳಿಗೆ ಅಪ್ಪಳಿಸಿದೆ. ಐಕಾನಿಕ್ ಗಡಿಯಾರ ಗೋಪುರವು ಕುಸಿದು ಬೀಳುವ ಮೊದಲು ಎರಡು ಹೋಳಾಗಿದೆ. ಅವಶೇಷಗಳು ಮೂರನೇ ರೈಲ್ವೆ ಮಾರ್ಗ ಮತ್ತು ಪ್ಲಾಟ್‌ಫಾರ್ಮ್‌ನ ಕೆಲವು ಭಾಗಗಳ ಮೇಲೆ ಬಿದ್ದಿವೆ.

ಘಟನೆಯ ಸಮಯದಲ್ಲಿ ಮೂರನೇ ಹಳಿಯಲ್ಲಿ ರೈಲು ನಿಂತಿತ್ತು. ಅದೃಷ್ಟವಶಾತ್‌ ಕುಸಿದ ರಚನೆಯ ಕೆಲವು ಭಾಗಗಳು ನೇರವಾಗಿ ಬೋಗಿಗಳ ಮೇಲೆ ಬಿದ್ದಿಲ್ಲ. ಬದಲಾಗಿ ಪಕ್ಕದಲ್ಲಿ ಬಿದ್ದಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಸುತ್ತಮುತ್ತ ಯಾವುದೇ ಪ್ರಯಾಣಿಕರು ಇಲ್ಲದ ಸಮಯದಲ್ಲಿ ಈ ಘಟನೆ ಸಂಭವಿಸಿರುವುದರಿಂದ ಭಾರಿ ಅನಾಹುತ ತಪ್ಪಿದೆ ಎಂದಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ