LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ 169 (ಚಿಕ್ಕಮಗಳೂರು-ಮಂಗಳೂರು) ರಲ್ಲಿನ ತನಿಕೋಡ್ ಚೆಕ್ ಪೋಸ್ಟ್ ಮತ್ತು ಎಸ್.ಕೆ. ಬಾರ್ಡರ್ ನಡುವಿನ ರಸ್ತೆಯ ಶಿಥಿಲಾವಸ್ಥೆಯ ಕಾರಣದಿಂದಾಗಿ, 12 ಟನ್‌ಗಿಂತ ಹೆಚ್ಚಿನ ತೂಕದ ಭಾರಿ ವಾಹನಗಳ ಸಂಚಾರವನ್ನು 2026ರ ಸೆಪ್ಟೆಂಬರ್ 30ರವರೆಗೆ ನಿಷೇಧಿಸಲಾಗಿದೆ. ಈ ಅವಧಿಯಲ್ಲಿ ಪರ್ಯಾಯ ಮಾರ್ಗಗಳನ್ನು ಬಳಸಲು ಸೂಚಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 169ರ ತನಿಕೋಡಿನಿಂದ ಎಸ್.ಕೆ. ಬಾರ್ಡರ್ ವರೆಗಿನ 18 ಕಿಲೋಮೀಟರ್ ರಸ್ತೆಯಲ್ಲಿ ಸೇತುವೆಗಳು ಶಿಥಿಲಾವಸ್ಥೆ ತಲುಪಿರುವುದರಿಂದ ಪ್ರಯಾಣಿಕರ ಹಿತದೃಷ್ಟಿಯಿಂದ 12 ಟನ್ ಗಿಂತ ಅಧಿಕ ಬಾರದ ಸರಕು ಸಾಗಾಣಿಕೆ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಬುಧವಾರ ಆದೇಶಿಸಿದ್ದಾರೆ.

ಈ ಭಾಗದಲ್ಲಿ 1950, 1960ನೇ ಸಾಲಿನಲ್ಲಿ ಕಲ್ಲಿನಿಂದ ನಿರ್ಮಿಸಿದ ಸೇತುವೆಗಳು ಶಿಥಿಲಾವಸ್ಥೆ ತಲುಪಿವೆ. ಜೊತೆಗೆ ರಸ್ತೆಯ ಇಕ್ಕೆಲಗಳಲ್ಲಿ ಮಣ್ಣು ಕೊರೆತ ಉಂಟಾಗಿದ್ದು, ಕಿರಿದಾದ ರಸ್ತೆಯಾದ ಕಾರಣ ವಾಹನಗಳು ಸಿಲುಕುವ ಸಾಧ್ಯತೆ ಇದೆ. ಹೀಗಾಗಿ ಸೆಪ್ಟೆಂಬರ್ 30ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

ಪರ್ಯಾಯ ಮಾರ್ಗ

ಚಿಕ್ಕಮಗಳೂರಿನಿಂದ ಬರುವ ಭಾರಿ ವಾಹನಗಳು ಬಾಳೆಹೊನ್ನೂರು, ಮಾಗುಂಡಿ, ಕಳಸ, ಕುದುರೆಮುಖ, ಎಸ್.ಕೆ. ಬಾರ್ಡರ್ ಮಾರ್ಗವಾಗಿ ಸಂಚರಿಸಲು ಸೂಚಿಸಲಾಗಿದೆ.

ಎನ್ಆರ್ ಪುರ ಕಡೆಯಿಂದ ಬರುವ ವಾಹನಗಳು ಬಾಳೆಹೊನ್ನೂರು, ಮಾಗುಂಡಿ, ಕಳಸ, ಕುದುರೆಮುಖ, ಎಸ್.ಕೆ. ಬಾರ್ಡರ್ ಮಾರ್ಗವಾಗಿ ಸಂಚರಿಸುವುದು.

ಕೊಪ್ಪ ಕಡೆಯಿಂದ ಬರುವ ವಾಹನಗಳು ಕೊಪ್ಪ, ಜಯಪುರ, ಬಾಳೆಹೊನ್ನೂರು, ಮಾಗುಂಡಿ, ಕಳಸ, ಕುದುರೆಮುಖ, ಎಸ್.ಕೆ. ಬಾರ್ಡರ್ ಮಾರ್ಗವಾಗಿ ಸಂಚರಿಸುವಂತೆ ತಿಳಿಸಲಾಗಿದೆ.

ಚಿತ್ರಕೃಪೆ: ಎಐ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ