LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸೆ. 17ರ ಕಲ್ಯಾಣ ಕರ್ನಾಟಕ ಉತ್ಸವ: 7 ಜಿಲ್ಲೆಗಳಲ್ಲಿ ಧ್ವಜಾರೋಹಣ ನೆರವೇರಿಸಲಿರುವ ಸಚಿವರನ್ನು ನಿಯೋಜನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ (ಕಲ್ಯಾಣ ಕರ್ನಾಟಕ ಉತ್ಸವ) ಅಂಗವಾಗಿ ಸೆಪ್ಟೆಂಬರ್ 17ರಂದು ಆ ಭಾಗದ 7 ಜಿಲ್ಲಾ ಕೇಂದ್ರಗಳಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಲು ಸಚಿವರುಗಳನ್ನು ನಿಯೋಜಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು (ರಾಜ್ಯ ಶಿಷ್ಟಾಚಾರ) ಈ ಸಂಬಂಧ ಅಧಿಸೂಚನೆ ಹೊರಡಿಸಿದ್ದು, ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚನೆ ರವಾನಿಸಿದೆ.

ಜಿಲ್ಲಾವಾರು ಧ್ವಜಾರೋಹಣ ನೆರವೇರಿಸಲಿರುವ ಸಚಿವರ ವಿವರ:

  • ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ

  • ಬೀದರ್: ಸಚಿವ ಈಶ್ವರ್ ಖಂಡ್ರೆ

  • ಯಾದಗಿರಿ: ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್

  • ಕೊಪ್ಪಳ: ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ

  • ಬಳ್ಳಾರಿ: ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಟಿ. ರಘುಮೂರ್ತಿ

  • ರಾಯಚೂರು: ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಸಿಂಗ್

  • ವಿಜಯನಗರ: ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ

ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಯೋಜಿಸಲಾಗುವ ಅಧಿಕೃತ ಸರ್ಕಾರಿ ಸಮಾರಂಭದಲ್ಲಿ ನಿಯೋಜಿತ ಸಚಿವರು ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಲಿದ್ದಾರೆ.

news_1789472952_0_216.webp

 

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ಪೈಸ್ ಜೆಟ್ ವಿರುದ್ಧ ಪ್ರಯಾಣಿಕರ ಆಕ್ರೋಶ: ಸ್ಪೈಸ್ ಜೆಟ್ ಚೋರ್ ಹೈ ಎಂದು ಘೋಷಣೆViral News: 'ಹುಂಡಿ ಹಣ'ವನ್ನೇ ತಿಂದು ಹಾಕಿದ 'ಇಲಿ'ಗಳು!ಸೆ. 17ರ ಕಲ್ಯಾಣ ಕರ್ನಾಟಕ ಉತ್ಸವ: 7 ಜಿಲ್ಲೆಗಳಲ್ಲಿ ಧ್ವಜಾರೋಹಣ ನೆರವೇರಿಸಲಿರುವ ಸಚಿವರನ್ನು ನಿಯೋಜನೆಮುಸ್ಲಿಂರ ಟೋಪಿ ಹಾಕಿದಕ್ಕೆ ತಲೆ ಬೋಳಿಸಿಕೊಂಡು, ಗಂಗಾ ನದಿಯಲ್ಲಿ ಸ್ನಾನ ಮಾಡಿ ಪ್ರಾಯಶ್ಚಿತ ಮಾಡಿಕೊಂಡಿದ್ದೇನೆ : ಶಾಸಕ ಯತ್ನಾಳ್!69ನೇ ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನ: ದಕ್ಷಿಣ ಆಫ್ರಿಕಾದ ಸ್ಪೀಕರ್‌ಗೆ 'A Brochure on Karnataka' ಕಿರುಹೊತ್ತಿಗೆ ಸಮರ್ಪಣೆನಾಳೆ ಹುಬ್ಬಳ್ಳಿಯ ನೈಋತ್ಯ ರೇಲ್ವೆ ಕನ್ನಡ ಸಂಘದಲ್ಲಿ ಬಹುಭಾಷಾ ಗೀತಗಾಯನ ‘ಹೂದೋಟ’ ಸಂಭ್ರಮಸೆ. 18ರ ಸಂಪುಟ ಸಭೆಯಲ್ಲಿ ತುಳು ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ: ಶಾಸಕ ಅಶೋಕ್ ಕುಮಾರ್ ರೈ ವಿಶ್ವಾಸSHOCKING: 'ಗಣಪತಿ ಹುಂಡಿ ಹಣ'ಕ್ಕೆ ಕನ್ನ ಹಾಕಿದ 'ಇಲಿ'ಗಳು: ಸಾವಿರಾರು ರೂಪಾಯಿ 'ನೋಟುಗಳು ಚೂರು ಚೂರು'!ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ: ಸಿಎಂ ಡಿ.ಕೆ.ಶಿವಕುಮಾರ್ಚಲಿಸುತ್ತಿದ್ದ ರೈಲಿನಿಂದ ಜಾರಿ ಹೊರಗೆ ನೇತಾಡಿದ ಯುವಕ; ರಕ್ಷಿಸುವ ಬದಲು ವಿಡಿಯೋ ಮಾಡಿದ ಪ್ರಯಾಣಿಕರು |WATCH VIDEO