LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಾಕಿಸ್ತಾನದಲ್ಲಿ ಉಗ್ರರ ದಾಳಿ ಪ್ರಕರಣ: 18 ಜನ ಭದ್ರತಾ ಸಿಬ್ಬಂದಿ ಸಾವು

ಇಸ್ಲಾಮಾಬಾದ್: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ನಡೆದಿದ್ದ ಉಗ್ರರ ದಾಳಿಯಲ್ಲಿ ೧೮ ಜನ ಪಾಕಿಸ್ತಾಅನಿ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಪಾಕಿಸ್ತಾನದ ವಾಯವ್ಯ ಪ್ರಾಂತ್ಯದ ಖೈಬರ್ ಪಖ್ತುಂಖ್ವಾದಲ್ಲಿ ಉಗ್ರರು ಸರಣಿ ದಾಳಿ ನಡೆಸಿದ್ದು, ಘಟನೆಯಲ್ಲಿ 18 ಪಾಕಿಸ್ತಾನಿ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ನಿಷೇಧಿತ ಸಂಘಟನೆ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ (TTP) ಉಗ್ರರು ಸೇನಾ ಶಿಬಿರಗಳು ಮತ್ತು ಪೊಲೀಸ್ ಚೌಕಿಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಿದ್ದರು.

ಬಜೌರ್ ಜಿಲ್ಲೆಯ ದಮಂಗಿ ಸ್ಕೌಟ್ಸ್ ಕ್ಯಾಂಪ್‌ನ ಮುಖ್ಯ ದ್ವಾರದ ಬಳಿ ಉಗ್ರನೊಬ್ಬ ಆತ್ಮಹತ್ಯಾ ಬಾಂಬ್ ಸ್ಫೋಟಿಸಿಕೊಂಡಿದ್ದು, ಈ ಮೂಲಕ ದಾಳಿಯನ್ನು ಆರಂಭಿಸಿದ್ದಾನೆ. ಸ್ಫೋಟದ ಬೆನ್ನಲ್ಲೇ ಸುಮಾರು 20ಕ್ಕೂ ಹೆಚ್ಚು ಶಸ್ತ್ರಸಜ್ಜಿತ ಉಗ್ರರು ಶಿಬಿರಕ್ಕೆ ನುಗ್ಗಿ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.

ಗುಂಡಿನ ದಾಅಲಿಯಲ್ಲಿ 14 ಸಿಬ್ಬಂದಿ ಮೃತಪಟ್ಟಿದ್ದಾರೆ. ಇದೇ ವೇಳೆ ಐನಾಯಿ ಕಿಲೆ ಮತ್ತು ಮಾಮಂಡ್ ಪ್ರದೇಶಗಳಲ್ಲಿ ನಡೆದ ಪ್ರತ್ಯೇಕ ದಾಳಿಗಳಲ್ಲಿ ನಾಲ್ವರು ಪೊಲೀಸರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸದ್ಯ ಘಟನಾ ಸ್ಥಳವನ್ನು ಸೇನೆಯು ಸುತ್ತುವರೆದಿದೆ. ಅಡಗಿಕೊಂಡಿರುವ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಕಳೆದ ಮಂಗಳವಾರವಷ್ಟೇ ಖೈಬರ್ ಪಖ್ತುಂಖ್ವಾದ ನೌರಂಗ್ ಬಜಾರ್‌ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ 9 ಮಂದಿ ಸಾವನ್ನಪ್ಪಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ