ಬೆಂಗಳೂರು: ಬೆಂಗಳೂರಿನ ಬಾಗಲಗುಂಟೆ ಆಕ್ಸಿಸ್ ಬ್ಯಾಂಕ್ ಮ್ಯಾನೇಜರ್ ವಿರುದ್ಧ ವಂಚನೆ ಆರೋಪದಡಿ ದೂರು ನೀಡಲಾಗಿದೆ.
ವಂಚನೆಗೊಳಗಾದ ಉದ್ಯಮಿ ಸುಬ್ರಮಣ್ಯ ಪೊಲೀಸರಿಗೆ ದೂರು ನೀಡಿದ್ದಾರೆ. ಆಕ್ಸಿಸ್ ಬ್ಯಾಂಕ್ ಮ್ಯಾನೇಜರ್ ವಿನೋದ್ ಕುಮಾರ್, ಮಲ್ಲಿಕಾರ್ಜುನ ಸೇರಿದಂತೆ ಹಲವರ ವಿರುದ್ಧ ಸುಬ್ರಹ್ಮಣ್ಯ ದೂರು ದಾಖಲಿಸಿದ್ದಾರೆ.
ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ವಿನೋದ್ ಕುಮಾರ್, ಅರುಣ್ ಮತ್ತು ಕಿರಣ್ ಎಂಬುವರನ್ನು ಬಂಧಿಸಲಾಗಿದೆ. ಸುಬ್ರಮಣ್ಯ ಅವರು ಲಾಜಿಸ್ಟಿಕ್ಸ್ ಕಂಪನಿ ನಡೆಸುತ್ತಿದ್ದು, ಬಾಗಲಗುಂಟೆ ಆಕ್ಸಿಸ್ ಬ್ಯಾಂಕ್ ನಲ್ಲಿ ಖಾತೆಯನ್ನು ತೆರೆದಿದ್ದರು. ಅವರ ವ್ಯವಹಾರದ ಮೇಲೆ ಕಣ್ಣಿಟ್ಟಿದ್ದ ವಿನೋದ್ ಕುಮಾರ್ ಉದ್ಯಮಿಗೆ 30 ಕೋಟಿ ರೂಪಾಯಿ ಮೌಲ್ಯದ ವ್ಯವಹಾರ ಕೊಡಿಸುತ್ತೇನೆ ಎಂದು ಹೇಳಿದ್ದ. ಜೊತೆಗೆ ಮ್ಯಾನ್ ಪವರ್ ವ್ಯವಹಾರ ಕೊಡಿಸುವುದಾಗಿ ನಂಬಿಸಿದ್ದ. ಇದಕ್ಕೆ ಮುಂಗಡವಾಗಿ 2.66 ಕೋಟಿ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಬಾಗಲಗುಂಟೆ ದೂರು ನೀಡಲಾಗಿದೆ.