LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮಸ್ಥಳ ಬುರುಡೆ ಕೇಸ್ ಗೆ ಬಿಗ್ ಟ್ವಿಸ್ಟ್: 200 ಕೋಟಿ ರೂ. ಷಡ್ಯಂತ್ರ, ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖಿಸಿದ ಚಿನ್ನಯ್ಯ

ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ತನ್ನನ್ನು ಬಳಸಿಕೊಂಡು ಧರ್ಮಸ್ಥಳ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ ಎಂದು ಚಿನ್ನಯ್ಯ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾನೆ.

 ಈ ಬಗ್ಗೆ ಎಸ್ಐಟಿ ತನಿಖೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಲು ಕೋರಿದ್ದಾನೆ. ಷಡ್ಯಂತ್ರದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ವಿಠಲ್ ಗೌಡ, ಜಯಂತ್ ಯುಟ್ಯೂಬರ್ ಗಳಾದ ಎಂ.ಡಿ. ಸಮೀರ್, ಅಜಯ್, ದಿನೇಶ್ ಸೇರಿದಂತೆ ಹಲವರ ಪಾತ್ರದ ಬಗ್ಗೆ ಉಲ್ಲೇಖಿಸಲಾಗಿದ್ದು, ನಟ ಪ್ರಕಾಶ್ ರಾಜ್ ಅವರ ಬಗ್ಗೆಯೂ ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿದೆ. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಎಸ್ಐಟಿ ಮತ್ತು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ವಿಠಲ್ ಗೌಡ ತಮ್ಮನ್ನು ಮಹೇಶ್ ಶೆಟ್ಟಿ ತಿಮರೋಡಿಗೆ ಪರಿಚಯಿಸಿದ್ದ. ಧರ್ಮಸ್ಥಳದಲ್ಲಿ ಅನೇಕ ಶವಗಳನ್ನು ದಫನ್ ಮಾಡಲಾಗಿದೆ. ಅಲ್ಲಿ ಸಾವಿರಾರು ಶವಗಳಿವೆ ಎಂದು ಹೇಳಲು ತಿಳಿಸಿದ್ದ. ನಂತರ ಗಿರೀಶ್ ಮಟ್ಟಣ್ಣನವರ್, ವಿಠಲ್ ಗೌಡ ಮತ್ತಿತರರು ಕೇರಳ, ತಮಿಳುನಾಡು ಸೇರಿದಂತೆ ಹಲವು ಕಡೆಗೆ ಕರೆದೊಯ್ದಿದ್ದರು. ಆಗಾಗ 5000, 15000 ರೂ. ಹಣ ಕೊಡುತ್ತಿದ್ದರು.

ನಂತರ ಬೆಂಗಳೂರಿನ ಜಯಂತ್ ಮನೆಗೆ ಕರೆದುಕೊಂಡು ಹೋಗಿ ತಲೆ ಬುರುಡೆ ಕೊಟ್ಟು ಕೈಯಲ್ಲಿ ಹಿಡಿದುಕೊಳ್ಳುವಂತೆ ಸೂಚಿಸಿ ಫೋಟೋ ತೆಗೆದುಕೊಂಡು ನಂತರ ವಕೀಲರ ಕಚೇರಿಗೆ ಕರೆದೊಯ್ದು ಅಲ್ಲಿ ಸಹಿ ಹಾಕಿಸಿಕೊಂಡಿದ್ದರು. ಸುಜಾತಾ ಭಟ್ ಅವರೊಂದಿಗೆ ಗಿರೀಶ್ ಮಟ್ಟಣ್ಣನವರ್ ತಮ್ಮನ್ನು ಕೂಡ ದೆಹಲಿಗೆ ಕರೆದುಕೊಂಡು ಹೋಗಿದ್ದರು. ನಂತರ ಉಜಿರೆಯ ತಿಮರೋಡಿ ಮನೆಯಲ್ಲಿ ಕೂಡಿಹಾಕಲಾಗಿತ್ತು. ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿಗೆ ಮಸಾಜ್ ಮಾಡಲು ತಮಗೆ ಒತ್ತಾಯಿಸಲಾಗುತ್ತಿತ್ತು. ಅವರ ಜಮೀನಿನಲ್ಲಿ ಕೆಲಸ ಮಾಡಿಸುತ್ತಿದ್ದರು. ವಕೀಲರು ಹೇಳಿದಂತೆ ನ್ಯಾಯಾಲಯಕ್ಕೆ ಹೇಳದಿದ್ದರೆ ಕೊಂದು ಅದೇ ಜಾಗದಲ್ಲಿ ಹೂತು ಹಾಕುವುದಾಗಿ ಬೆದರಿಸಿದ್ದರು.

ಎಂ.ಡಿ. ಸಮೀರ್, ಅಜಯ್ ಅವರ ಯುಟ್ಯೂಬ್ ಚಾನೆಲ್ ಗಳಲ್ಲಿ ಅವರ ಸೂಚನೆಯಂತೆ ಹೇಳಿಸಿ ರೆಕಾರ್ಡ್ ಮಾಡಿಸಲಾಯಿತು. ಮನೆ ಕಟ್ಟಲು 5 ಲಕ್ಷ ನೀಡುವುದಾಗಿ ಭರವಸೆ ನೀಡಿದ್ದರು. ಅಲ್ಲದೆ 50 ಲಕ್ಷ ರೂಪಾಯಿ ಕೊಡುವುದಾಗಿಯೂ ಹೇಳಿದ್ದರು ಎಂದು ಚಿನ್ನಯ್ಯ ತಿಳಿಸಿದ್ದಾನೆ.

ಖ್ಯಾತ ನಟ ಪ್ರಕಾಶ್ ರಾಜ್ ಹೆಸರನ್ನು ಕೂಡ ಚಿನ್ನಯ್ಯ ಉಲ್ಲೇಖಿಸಿದ್ದಾನೆ. ತಲೆ ಬುರುಡೆ ನೀಡಿ ದೂರು ಕೊಟ್ಟ ಬಳಿಕ ಕೇರಳದ ರೆಸಾರ್ಟ್ ಗೆ ತನ್ನನ್ನು ಕರೆದೊಯ್ಯಲಾಗಿತ್ತು. ನಟ ಪ್ರಕಾಶ್ ರಾಜ್ ಅವರಿಗೆ ಕರೆ ಮಾಡಿ ಫೋನ್ ನೀಡಿದ್ದರು. ತಮಿಳುನಲ್ಲಿ ಮಾತನಾಡಿದ ಪ್ರಕಾಶ್ ರಾಜ್ ಅವರು ಗಿರೀಶ್ ಮಟ್ಟಣ್ಣನವರ್ ಹೇಳಿಕೊಟ್ಟಂತೆ ಹೇಳಿಕೆ ನೀಡಬೇಕು. ನಾನು ಬಂದಾಗ ನಿನ್ನನ್ನು ಅಪ್ಪಿಕೊಳ್ಳುತ್ತೇನೆ ಎಂದಿದ್ದರು.  ಕರ್ನಾಟಕ ಸರ್ಕಾರ ಬುರುಡೆ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಿದಾಗ ವೀರೇಂದ್ರ ಹೆಗಡೆಯವರನ್ನು ಜೈಲಿಗೆ ಕಳುಹಿಸುವ ಸಮಯ ಬಂದಿದೆ ಎಂದು ಸಂಭ್ರಮಿಸಿದ್ದರು. ಈ ಯೋಜನೆಯ ಬಜೆಟ್ 200 ಕೋಟಿ ರೂ. ಇದ್ದು, ವೀರೇಂದ್ರ ಹೆಗಡೆಯವರನ್ನು ಜೈಲಿಗೆ ಕಳುಹಿಸಲು ಸಹಕರಿಸಿದರೆ 50 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದರು ಎಂದು ತಿಳಿಸಿದ್ದಾರೆ.

ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಸರ್ಕಾರ ಮತ್ತು ಎಸ್ಐಟಿಗೆ ನೋಟಿಸ್ ಜಾರಿಗೊಳಿಸಿದ್ದು, ಜೂನ್ 29 ರೊಳಗೆ ತನಿಖೆಯ ಸ್ಥಿತಿಗತಿ ಬಗ್ಗೆ ಮಾಹಿತಿ ನೀಡಲು ಸೂಚಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಸಿದ್ಧರಾಮಯ್ಯ ಮುನಿಸಿನಿಂದ ಕೈತಪ್ಪಿದ ಸಚಿವ ಸ್ಥಾನ..? ಮನವೊಲಿಸಲು ಜಮೀರ್ ಅಹ್ಮದ್ ಕಸರತ್ತುಇಸ್ರೇಲ್, ಅಮೆರಿಕ ದಾಳಿಯಲ್ಲಿ ಮೃತಪಟ್ಟ 131 ದಿನಗಳ ನಂತರ ಜು. 9ರಂದು ಇರಾನ್ ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆSHOCKING: ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ವಿಷಕಾರಿ ಅನಿಲ ಸೇವಿಸಿ ನಾಲ್ವರು ಸಾವುವಿವಾಹಿತೆಗೆ ಮತ್ತು ಬರುವ ಪಾನೀಯ ಕುಡಿಸಿ ರೇಪ್, ಬೆತ್ತಲೆ ಚಿತ್ರ ಸೆರೆಹಿಡಿದು ಬ್ಲಾಕ್ ಮೇಲ್BREAKING: ಇನ್ನು ಯಾರೂ ಒಂದು ರೂಪಾಯಿ ಲಂಚ ಕೊಡಬೇಕಿಲ್ಲ: ಭ್ರಷ್ಟಾಚಾರ ಮುಕ್ತ ರಾಜ್ಯವಾಗಿಸಲು ಸಿಎಂ ಡಿಕೆ ಮಹತ್ವದ ಹೆಜ್ಜೆಶಿವಮೊಗ್ಗ: ಕೊಳೆತ ಸ್ಥಿತಿಯಲ್ಲಿ ಮಹಿಳೆ, ಸಾಕು ನಾಯಿ ಶವ ಪತ್ತೆಧರ್ಮಸ್ಥಳ ಬುರುಡೆ ಗ್ಯಾಂಗ್ ಪ್ರಕರಣ: ಚಿನ್ನಯ್ಯನ ಬ್ರೇನ್ ಮ್ಯಾಪಿಂಗ್ ಹಾಗೂ ರಿಟ್ ಅರ್ಜಿ ತನಿಖೆ ನಡೆಸುವಂತೆ SITಗೆ ಗಿರೀಶ್ ಮಟ್ಟಣ್ಣನವರ್ ದೂರುBREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಯೋಜನೆ ಸೌಲಭ್ಯ ಪಡೆಯಲು ಮತ್ತೆ ಅರ್ಜಿ ಸಲ್ಲಿಸಬೇಕು: ಸಿಎಂ ಡಿಕೆ ಮಾಹಿತಿದೇಶದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಕೋಟ್ಯಂತರ ರೂ ಅಕ್ರಮ ಫಂಡಿಂಗ್ ಆರೋಪ: ಕರ್ನಾಟಕದ ನಾಲ್ವರು ಸೇರಿ 7 ಜನರ ವಿರುದ್ಧ FIR ದಾಖಲುಸಂಬಳ ಪಡೆಯುವ ಪ್ರತಿಯೊಬ್ಬ ಉದ್ಯೋಗಿಯೂ  ತಿಳಿಯಲೇಬೇಕಾದ ಸೀಕ್ರೆಟ್ ಪಿಎಫ್ ಕಟ್ ಆದ್ರೆ ಸಿಗುತ್ತೆ ₹7 ಲಕ್ಷದ ಬಿಗ್ ಇನ್ಶೂರೆನ್ಸ್ ಬೆನಿಫಿಟ್