LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯುಜಿ ಸಿಇಟಿ ಸೀಟು ಹಂಚಿಕೆ ಮುಕ್ತಾಯ: ಎಂಜಿನಿಯರಿಂಗ್ 24,283 ಉಳಿಕೆ ಸೀಟು ಕಾಲೇಜುಗಳಿಗೆ ಹಸ್ತಾಂತರ

ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ಯುಜಿ ಸಿಇಟಿ ಕೋರ್ಸ್ ಗಳ 3ನೇ ಹಾಗೂ ಅಂತಿಮ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಪೂರ್ಣ ಆಗಿದ್ದು, ಒಪ್ಪಂದದ ಪ್ರಕಾರ ಉಳಿಕೆ ಸೀಟುಗಳನ್ನು ಆಯಾ ಕಾಲೇಜುಗಳ ಆಡಳಿತ ಮಂಡಳಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಸ್ತಾಂತರ ಮಾಡಿದೆ.

ಎಲ್ಲ ವಿಧದ ಎಂಜಿನಿಯರಿಂಗ್ ಕೋರ್ಸ್ ಗಳ 24,283 ಸೀಟು ಹಾಗೂ ಆರ್ಕಿಟೆಕ್ಚರ್ ಕೋರ್ಸ್ ನ 252 ಸೀಟು ಹಂಚಿಕೆಯಾಗದೆ ಉಳಿದಿವೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಎಂಜಿನಿಯರಿಂಗ್ ಹೊರತುಪಡಿಸಿದರೆ ನರ್ಸಿಂಗ್ ನಲ್ಲಿ ಅತಿ ಹೆಚ್ಚು ಸೀಟು ಉಳಿದಿವೆ. ಒಟ್ಟು 36,238 ಸೀಟುಗಳ ಪೈಕಿ13,407 ಸೀಟು ಮಾತ್ರ ಹಂಚಿಕೆಯಾಗಿ, 22,832 ಸೀಟು ಹಾಗೆಯೇ ಉಳಿದಿವೆ ಎಂದು ಅವರು ವಿವರಿಸಿದ್ದಾರೆ.

ಪಶು ವೈದ್ಯಕೀಯ ಕೋರ್ಸ್ ನ ಎಲ್ಲ 366 ಸೀಟು ಹಂಚಿಕೆಯಾಗಿವೆ. ಫಾರ್ಮಸಿ ಕೋರ್ಸ್ ನ 489, ಬಿಪಿಟಿ- 22, ಕೃಷಿ ಮತ್ತು ಸಂಬಂಧಿತ ಕೋರ್ಸ್ ಗಳ 20, ಬಿಎಸ್ಸಿ ಎಎಚ್ಎಸ್ ನ 2,465 ಸೀಟು ಉಳಿದಿವೆ. ಯೋಗಾ ಮತ್ತು ನ್ಯಾಚುರೋಪತಿ ಕೋರ್ಸ್ ನ ಒಟ್ಟು 520 ಸೀಟುಗಳಲ್ಲಿ 214 ಸೀಟು ಉಳದಿವೆ ಎಂದು ಅವರು ವಿವರಿಸಿದ್ದಾರೆ.

3ನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವವರಿಗೆ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಸೆ.11ರವರೆಗೆ ಅವಕಾಶ‌ ನೀಡಲಾಗಿದೆ. ಕಡ್ಡಾಯ ಪ್ರವೇಶವಾಗಿರುವ ಕಾರಣ ಎಲ್ಲರೂ ತಪ್ಪದೆ ಪ್ರವೇಶ ಪಡೆಯಬೇಕು ಎಂದು ಅವರು ಹೇಳಿದರು.

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ಮಾತ್ರ ಆಗಿದೆ. ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಚಾಲ್ತಿಯಲ್ಲಿ ಇದೆ ಎಂದು ಅವರು ಹೇಳಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS: ಸೆ.21 ರಿಂದ ಕರ್ನಾಟಕ ವಿಧಾನಸಭೆ ವಿಶೇಷ ಅಧಿವೇಶನ ಆರಂಭ: ಕಸ್ತೂರಿರಂಗನ್ ವರದಿ, ರೈತರ ಸಮಸ್ಯೆಗಳ ಚರ್ಚೆಕ್ಲೈಮ್ಯಾಕ್ಸ್‌ ಘಟ್ಟ ತಲುಪಿದ ಬಿಜೆಪಿ ಪಾದಯಾತ್ರೆ: ಬಳ್ಳಾರಿ ಜಿಲ್ಲೆಗೆ ಎಂಟ್ರಿ ಕೊಟ್ಟ ಬಿಜೆಪಿ ನಾಯಕರುರಾಜ್ಯದಲ್ಲಿ ಶಾಲಾ-ಕಾಲೇಜುಗಳ ಮಾನ್ಯತೆ ನವೀಕರಣ ನಿಯಮ ಸರಳೀಕರಣ: ಮಧ್ಯಂತರ ವರದಿಯಲ್ಲಿ ಏನಿದೆ ಗೊತ್ತಾ? ಇಲ್ಲಿದೆ ಮಾಹಿತಿGOOD NEWS: 100 ದಿನದ ಸಂಭ್ರಮಕ್ಕೆ ಬಡವರಿಗೆ 'ಫ್ರೀ ಸೈಟ್' ಭಾಗ್ಯ: '15 ಲಕ್ಷ ಉಚಿತ ನಿವೇಶನ' ಹಂಚಿಕೆಗೆ ರಾಜ್ಯ ಸರ್ಕಾರ ಅಸ್ತು!ಆರೋಗ್ಯ ಇಲಾಖೆಯಲ್ಲಿ 51 ಜನರಿಗೆ ಅನುಕಂಪದ ಆಧಾರದಲ್ಲಿ ನೇಮಕಾತಿ ಆದೇಶ ಪತ್ರ ವಿತರಿಸಿದ ಸಚಿವ ಯು.ಟಿ ಖಾದರ್ಶಾಲಾ-ಕಾಲೇಜುಗಳ ಮಾನ್ಯತೆ ನವೀಕರಣ ನಿಯಮ ಸರಳೀಕರಣ: ಮಧ್ಯಂತರ ವರದಿಯಲ್ಲಿ ಏನಿದೆ ಗೊತ್ತಾ? ಇಲ್ಲಿದೆ ಮಾಹಿತಿಫ್ರಾನ್ಸ್‌ನಲ್ಲಿ ಕೈಗಾರಿಕಾ ಸಚಿವ ಎಂ ಬಿ ಪಾಟೀಲ: ಲಿಸಿ ಏರೋಸ್ಪೇಸ್, ಆರ್ಕೆಮಾ ಕಂಪನಿಗಳ ಜತೆ ಮಹತ್ತ್ವದ ವಿಚಾರ ವಿನಿಮಯಬಿಜೆಪಿ ಪಾದಯಾತ್ರೆ ಕರ್ನಾಟಕದಲ್ಲಿ NDA ಸರ್ಕಾರ ತರುವ ನಿಟ್ಟಿನಲ್ಲಿ ಭದ್ರ ಬುನಾದಿ: ಬಿ.ವೈ.ವಿಜಯೇಂದ್ರಯುಜಿ ಸಿಇಟಿ ಸೀಟು ಹಂಚಿಕೆ ಮುಕ್ತಾಯ: ಎಂಜಿನಿಯರಿಂಗ್ 24,283 ಉಳಿಕೆ ಸೀಟು ಕಾಲೇಜುಗಳಿಗೆ ಹಸ್ತಾಂತರಗಣೇಶೋತ್ಸವ ಹಿನ್ನೆಲೆ: ಸೆ.13ರಿಂದ 27ರವರೆಗೆ ಈ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಡಿಸಿ ಆದೇಶ