LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾಮಾನ್ಯ ಸೋಲಲ್ಲ ಸರಣಿ ಸೋಲು: ಒಂದಲ್ಲ ಎರಡಲ್ಲ ಸತತ 3 ವರ್ಷ, 16 ಸರಣಿ ಸೋಲಿಲ್ಲದೇ ಮೆರೆಯುತ್ತಿದ್ದ ವಿಶ್ವ ಚಾಂಪಿಯನ್ಸ್ ಭಾರತಕ್ಕೆ ಲೆಕ್ಕಕ್ಕೇ ಇಲ್ಲದ ಐರ್ಲೆಂಡ್‌ನಿಂದ ಹೀನಾಯ ಅವಮಾನ!

ನಿನ್ನೆ ( ಜೂನ್ 28 ) ಬೆಲ್ಟ್‌ಫಾಸ್ಟ್ ಕ್ರೀಡಾಂಗಣದಲ್ಲಿ ನಡೆದ ಐರ್ಲೆಂಡ್ ಹಾಗೂ ಭಾರತ ತಂಡಗಳ ನಡುವಿನ ಎರಡನೇ ಟಿ ಟ್ವೆಂಟಿ ಪಂದ್ಯದಲ್ಲಿ ಐರ್ಲೆಂಡ್ 1 ರನ್‌ನ ರೋಚಕ ಗೆಲುವು ಸಾಧಿಸುವ ಮೂಲಕ ಎರಡು ಪಂದ್ಯಗಳ ಸರಣಿಯನ್ನು ಗೆದ್ದುಬೀಗಿ ಇತಿಹಾಸ ನಿರ್ಮಿಸಿತು.

ಮೊದಲ ಪಂದ್ಯದಲ್ಲಿ 34 ರನ್‌ಗಳಿಂದ ಭಾರತವನ್ನು ಸೋಲಿಸಿ ಅದೇ ಮೊದಲ ಬಾರಿಗೆ ಭಾರತದ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯವನ್ನು ಗೆದ್ದ ದಾಖಲೆ ಬರೆದಿದ್ದ ಐರ್ಲೆಂಡ್ ನಿನ್ನೆ ಎರಡನೇ ಪಂದ್ಯದಲ್ಲಿ ರೋಚಕ ಜಯ ಸಾಧಿಸಿ ಮೊದಲ ಟಿ ಟ್ವೆಂಟಿ ಸರಣಿ ಜಯ ಸಾಧಿಸಿದ ಐತಿಹಾಸಿಕ ದಾಖಲೆಯನ್ನೂ ಬರೆಯಿತು.

ಇನ್ನು 2024 ಹಾಗೂ 2026 ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗಳಲ್ಲಿ ಸತತ ಎರಡು ಬಾರಿ ಗೆದ್ದು ಚಾಂಪಿಯನ್ಸ್ ಎನಿಸಿಕೊಂಡಿದ್ದ ಭಾರತಕ್ಕೆ ಈ ಸೋಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಅವಮಾನವನ್ನು ಉಂಟುಮಾಡಿದೆ.

ಈ ಸೋಲು ಹಲವು ಕಾರಣಗಳಿಗೆ ಸಾಮಾನ್ಯ ಸರಣಿ ಸೋಲಾಗದೇ ಉಳಿದುಕೊಂಡಿದ್ದು, ಭಾರತ ತಂಡಕ್ಕೆ ಭಾರೀ ಮುಜುಗರವನ್ನುಂಟುಮಾಡಿದ ಸೋಲಾಗಿದೆ.

* ಭಾರತ ಕಳೆದ 1050 ದಿನಗಳಲ್ಲಿ ಅಂದರೆ ಕಳೆದ ಮೂರು ವರ್ಷಗಳಲ್ಲಿ ಒಂದೇ ಒಂದು ಟಿ ಟ್ವೆಂಟಿ ಸರಣಿಯನ್ನೂ ಸೋತಿರಲಿಲ್ಲ. ಈ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಐರ್ಲೆಂಡ್ ಬ್ರೇಕ್ ಹಾಕಿದೆ.

* ಈ ಅವಧಿಯಲ್ಲಿ ಒಟ್ಟು 16 ಸರಣಿಗಳನ್ನು ಗೆದ್ದು ಬೀಗಿದ್ದ ಭಾರತ ನಿನ್ನೆ ಸೋಲುವ ಮೂಲಕ ಹಿನ್ನಡೆ ಅನುಭವಿಸಿದೆ.

* 2023ರ ಆಗಸ್ಟ್ ತಿಂಗಳಲ್ಲಿ ಕೊನೆಯದಾಗಿ ಟಿ ಟ್ವೆಂಟಿ ಸರಣಿ ಸೋತಿದ್ದ ಭಾರತ ಮೂರು ವರ್ಷಗಳ ಬಳಿಕ ನಿನ್ನೆಯೇ ಟಿ ಟ್ವೆಂಟಿ ಸರಣಿ ಸೋತಿದ್ದು ಈ ನಡುವೆ ಎರಡು ಟ್ವೆಂಟಿ ವಿಶ್ವಕಪ್ ಟ್ರೋಫಿಗಳನ್ನೂ ಸಹ ಗೆದ್ದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ