LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾಮಾನ್ಯ ಸೋಲಲ್ಲ ಸರಣಿ ಸೋಲು: ಒಂದಲ್ಲ ಎರಡಲ್ಲ ಸತತ 3 ವರ್ಷ, 16 ಸರಣಿ ಸೋಲಿಲ್ಲದೇ ಮೆರೆಯುತ್ತಿದ್ದ ವಿಶ್ವ ಚಾಂಪಿಯನ್ಸ್ ಭಾರತಕ್ಕೆ ಲೆಕ್ಕಕ್ಕೇ ಇಲ್ಲದ ಐರ್ಲೆಂಡ್‌ನಿಂದ ಹೀನಾಯ ಅವಮಾನ!

ನಿನ್ನೆ ( ಜೂನ್ 28 ) ಬೆಲ್ಟ್‌ಫಾಸ್ಟ್ ಕ್ರೀಡಾಂಗಣದಲ್ಲಿ ನಡೆದ ಐರ್ಲೆಂಡ್ ಹಾಗೂ ಭಾರತ ತಂಡಗಳ ನಡುವಿನ ಎರಡನೇ ಟಿ ಟ್ವೆಂಟಿ ಪಂದ್ಯದಲ್ಲಿ ಐರ್ಲೆಂಡ್ 1 ರನ್‌ನ ರೋಚಕ ಗೆಲುವು ಸಾಧಿಸುವ ಮೂಲಕ ಎರಡು ಪಂದ್ಯಗಳ ಸರಣಿಯನ್ನು ಗೆದ್ದುಬೀಗಿ ಇತಿಹಾಸ ನಿರ್ಮಿಸಿತು.

ಮೊದಲ ಪಂದ್ಯದಲ್ಲಿ 34 ರನ್‌ಗಳಿಂದ ಭಾರತವನ್ನು ಸೋಲಿಸಿ ಅದೇ ಮೊದಲ ಬಾರಿಗೆ ಭಾರತದ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯವನ್ನು ಗೆದ್ದ ದಾಖಲೆ ಬರೆದಿದ್ದ ಐರ್ಲೆಂಡ್ ನಿನ್ನೆ ಎರಡನೇ ಪಂದ್ಯದಲ್ಲಿ ರೋಚಕ ಜಯ ಸಾಧಿಸಿ ಮೊದಲ ಟಿ ಟ್ವೆಂಟಿ ಸರಣಿ ಜಯ ಸಾಧಿಸಿದ ಐತಿಹಾಸಿಕ ದಾಖಲೆಯನ್ನೂ ಬರೆಯಿತು.

ಇನ್ನು 2024 ಹಾಗೂ 2026 ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗಳಲ್ಲಿ ಸತತ ಎರಡು ಬಾರಿ ಗೆದ್ದು ಚಾಂಪಿಯನ್ಸ್ ಎನಿಸಿಕೊಂಡಿದ್ದ ಭಾರತಕ್ಕೆ ಈ ಸೋಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಅವಮಾನವನ್ನು ಉಂಟುಮಾಡಿದೆ.

ಈ ಸೋಲು ಹಲವು ಕಾರಣಗಳಿಗೆ ಸಾಮಾನ್ಯ ಸರಣಿ ಸೋಲಾಗದೇ ಉಳಿದುಕೊಂಡಿದ್ದು, ಭಾರತ ತಂಡಕ್ಕೆ ಭಾರೀ ಮುಜುಗರವನ್ನುಂಟುಮಾಡಿದ ಸೋಲಾಗಿದೆ.

* ಭಾರತ ಕಳೆದ 1050 ದಿನಗಳಲ್ಲಿ ಅಂದರೆ ಕಳೆದ ಮೂರು ವರ್ಷಗಳಲ್ಲಿ ಒಂದೇ ಒಂದು ಟಿ ಟ್ವೆಂಟಿ ಸರಣಿಯನ್ನೂ ಸೋತಿರಲಿಲ್ಲ. ಈ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಐರ್ಲೆಂಡ್ ಬ್ರೇಕ್ ಹಾಕಿದೆ.

* ಈ ಅವಧಿಯಲ್ಲಿ ಒಟ್ಟು 16 ಸರಣಿಗಳನ್ನು ಗೆದ್ದು ಬೀಗಿದ್ದ ಭಾರತ ನಿನ್ನೆ ಸೋಲುವ ಮೂಲಕ ಹಿನ್ನಡೆ ಅನುಭವಿಸಿದೆ.

* 2023ರ ಆಗಸ್ಟ್ ತಿಂಗಳಲ್ಲಿ ಕೊನೆಯದಾಗಿ ಟಿ ಟ್ವೆಂಟಿ ಸರಣಿ ಸೋತಿದ್ದ ಭಾರತ ಮೂರು ವರ್ಷಗಳ ಬಳಿಕ ನಿನ್ನೆಯೇ ಟಿ ಟ್ವೆಂಟಿ ಸರಣಿ ಸೋತಿದ್ದು ಈ ನಡುವೆ ಎರಡು ಟ್ವೆಂಟಿ ವಿಶ್ವಕಪ್ ಟ್ರೋಫಿಗಳನ್ನೂ ಸಹ ಗೆದ್ದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜೆಡಿಎಸ್ ದೂರುನಾಳೆಯಿಂದ ರಾಜ್ಯದಲ್ಲಿ ಎಸ್ಐಆರ್: ಮತ ಹಕ್ಕು ಕಳೆದುಕೊಂಡ್ರೆ ಸಿಗಲ್ಲ ಸೌಲಭ್ಯವಿಜಯೇಂದ್ರನನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕು; ವೈರಲ್ ಆಡಿಯೊ ಬಗ್ಗೆ ಸದಾನಂದಗೌಡ ಮೊದಲ ಪ್ರತಿಕ್ರಿಯೆಇಂಧನ ಇಲಾಖೆ ಬಲಿಷ್ಠವಾಗಿದೆ, ಖಾಸಗೀಕರಣಗೊಳಿಸುವ ಪ್ರಶ್ನೆಯೇ ಇಲ್ಲ: ಕೆಜೆ ಜಾರ್ಜ್BREAKING: ಜರ್ಮನಿಯಲ್ಲಿ ಸಾಮೂಹಿಕ ಗುಂಡಿನ ದಾಳಿ: ಕನಿಷ್ಠ 5 ಜನ ಸಾವು: ಇಬ್ಬರು ಶಂಕಿತರು ಅರೆಸ್ಟ್ಸ್ವರ್ಗವೇನೂ ಬಿದ್ದುಹೋಗಲ್ಲ ಸುಮ್ಮನಿರಿ; ರಾಮಮಂದಿರ ಅವ್ಯವಹಾರ ಅರ್ಜಿ ವಿಚಾರಣೆ ಬೇಗ ಮಾಡಿ ಎಂದವರಿಗೆ ಚಾಟಿ ಬೀಸಿದ ಸುಪ್ರೀಂಹೋಟೆಲ್ ನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಖ್ಯಾತ ನಟಿ ಸೇರಿ ಇಬ್ಬರು ನಟಿಯರ ರಕ್ಷಣೆನಾಳೆಯಿಂದ ಮನೆ ಮನೆಗೆ BLO ಗಳು ಭೇಟಿ: SIR ಬಗ್ಗೆ ಮಾಹಿತಿ ನೀಡಿದ ರಾಜ್ಯ ಚುನಾವಣಾಧಿಕಾರಿ ಅನ್ಬುಕುಮಾರ್ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಕೆಳಗಿಳಿಸಲು ಷಡ್ಯಂತ್ರ: ರೇಣುಕಾಚಾರ್ಯ ಗುಡುಗುಶರಾವತಿ ಪಂಪ್ಡ್ ಸ್ಟೋರೇಜ್‌, ಕಳಸಾ ಬಂಡೂರಿ ಯೋಜನೆ ಅರಣ್ಯ ಅನುಮತಿ ಪ್ರಕ್ರಿಯೆ ತ್ವರಿತ ಗತಿಯಲ್ಲಿ ವಿಲೇವಾರಿ ಮಾಡಲು ಸೂಚನೆ