LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಎರಡೇ ದಿನದಲ್ಲಿ ₹3,700 ಕುಸಿದ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ಇಂದಿನ ದರ ಎಷ್ಟು?

ಷೇರು ಮಾರುಕಟ್ಟೆಯ ಏರಿಳಿತದ ಬೆನ್ನಲ್ಲೇ ಇದೀಗ ಬಂಗಾರದ ಪ್ರಿಯರಿಗೆ ಮತ್ತು ಹೂಡಿಕೆದಾರರಿಗೆ ದೊಡ್ಡ ಶಾಕ್ ಎದುರಾಗಿದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಾಲರ್ ಮೌಲ್ಯ ಬಲಗೊಂಡ ಹಿನ್ನೆಲೆಯಲ್ಲಿ, ದೇಶೀಯ ಮಾರುಕಟ್ಟೆಯಲ್ಲೂ ಚಿನ್ನ ಮತ್ತು ಬೆಳ್ಳಿ ಬೆಲೆ ಸತತ ಎರಡನೇ ದಿನವೂ ಕುಸಿತದ ಹಾದಿ ಹಿಡಿದಿದೆ. ಬುಧವಾರ ಮಾರುಕಟ್ಟೆ ವಹಿವಾಟು ಆರಂಭವಾದ ಕೆಲವೇ ಗಂಟೆಗಳಲ್ಲಿ ಎರಡೂ ಅಮೂಲ್ಯ ಲೋಹಗಳ ಬೆಲೆಗಳು ದಿಢೀರ್ ಇಳಿಕೆ ಕಂಡಿದ್ದು, ಜೂನ್ ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದಿವೆ.

ಮಲ್ಟಿ ಕಮೋಡಿಟಿ ಎಕ್ಸ್‌ಚೇಂಜ್ (MCX) ನ ಆರಂಭಿಕ ವಹಿವಾಟಿನ ಅವಧಿಯಲ್ಲೇ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರಿ ಪತನ ದಾಖಲಾಗಿದೆ. ಜುಲೈ ವಿತರಣೆಗಾಗಿ ಬೆಳ್ಳಿ ದರವು ಪ್ರತಿ ಕೆಜಿಗೆ ಆರಂಭದಲ್ಲಿ ಬರೋಬ್ಬರಿ ₹4,000 ಕ್ಕೂ ಅಧಿಕ ದಾಖಲೆಯ ಕುಸಿತ ಕಂಡಿತ್ತು. ತದನಂತರ ₹1,000 ಕ್ಕೂ ಹೆಚ್ಚು ಇಳಿಕೆಯಾಗಿ ₹2,24,793 ಕ್ಕೆ ವಹಿವಾಟು ನಡೆಸುತ್ತಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಮಂಕಾದ ಜಾಗತಿಕ ಚಿನ್ನ

ದೇಶೀಯ ಮಾರುಕಟ್ಟೆಯಂತೆ ಜಾಗತಿಕ ಮಾರುಕಟ್ಟೆಯಲ್ಲೂ ಚಿನ್ನ ಮತ್ತು ಬೆಳ್ಳಿ ಬೆಲೆ ಭಾರಿ ಮಂಕಾಗಿದೆ:

ಸ್ಪಾಟ್ ಗೋಲ್ಡ್ (Spot Gold): ಬುಧವಾರ ಬೆಳಗ್ಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಶೇ. 1.75 ರಷ್ಟು ಇಳಿಕೆಯಾಗಿ ಪ್ರತಿ ಔನ್ಸ್‌ಗೆ 4,077.70 ಡಾಲರ್ ತಲುಪಿದೆ.

ಜಾಗತಿಕ ಬೆಳ್ಳಿ ದರ: ಶೇ. 1.69 ರಷ್ಟು ಕುಸಿದು ಪ್ರತಿ ಔನ್ಸ್‌ಗೆ 61.02 ಡಾಲರ್ ಬಳಿ ವಹಿವಾಟು ನಡೆಸುತ್ತಿದೆ.

ಬೆಂಗಳೂರಿನ ಇಂದಿನ ಚಿನ್ನ ಮತ್ತು ಬೆಳ್ಳಿ ದರಗಳ ಕಂಪ್ಲೀಟ್ ಲಿಸ್ಟ್

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬುಧವಾರದ ಮಾರುಕಟ್ಟೆ ದರಗಳು ಹೀಗಿವೆ:

24 ಕ್ಯಾರೆಟ್ ಶುದ್ಧ ಚಿನ್ನ (Pure Gold – 99.9%):

1 ಗ್ರಾಂ ಬೆಲೆ: ₹27 ಇಳಿಕೆಯಾಗಿ ₹14,433 ದಾಖಲಾಗಿದೆ.

10 ಗ್ರಾಂ (ಒಂದು ತೊಲ) ಬೆಲೆ: ₹270 ಇಳಿಕೆಯಾಗಿದ್ದು ₹1,44,330 ರೂಪಾಯಿಗೆ ತಲುಪಿದೆ.

22 ಕ್ಯಾರೆಟ್ ಆಭರಣ ಚಿನ್ನ

1 ಗ್ರಾಂ ಬೆಲೆ: ₹25 ಇಳಿಕೆಯಾಗಿ ₹13,230 ಆಗಿದೆ.

10 ಗ್ರಾಂ (ಒಂದು ತೊಲ) ಬೆಲೆ: ₹250 ಇಳಿಕೆಯಾಗಿ ₹1,32,300 ರೂಪಾಯಿ ದಾಖಲಾಗಿದೆ.

ಬೆಳ್ಳಿ ದರ (Silver Rate – ತಟಸ್ಥ):

ಬೆಂಗಳೂರಿನಲ್ಲಿ ಇಂದು ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಯಾವುದೇ ಬದಲಾವಣೆ ಕಂಡಿಲ್ಲ.

1 ಗ್ರಾಂ ಬೆಲೆ: ₹245

1 ಕೆಜಿ ಬೆಲೆ: ₹2,45,000 ದಾಖಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ