LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪಾಕಿಸ್ತಾನ ಸೇನೆ ಕ್ರೌರ್ಯ: ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ: 30ಕ್ಕೂ ಹೆಚ್ಚು ಜನರು ಸಾವು

ರಾವಲಕೋಟ್: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (POK) ಪ್ರತಿಭಟನಾಕಾರರ ಮೇಲೆ ಪಾಕಿಸ್ತಾನ ಸೇನೆ ಕ್ರೌರ್ಯ ಮೆರೆದಿದ್ದು, ಗುಂಡಿನ ದಾಳಿಗೆ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 200ಕ್ಕೂ ಹೆಚ್ಚು ಅನರು ಗಾಯಗೊಂಡಿದ್ದಾರೆ.

ಪಿಒಕೆಯಲ್ಲಿ ಅಶಾಂತಿ ತಲೆದೋರಿದ್ದು, ಸಾಮಾಜಿಕ-ರಾಜಕೀಯ ಸಂಘಟನೆಯಾದ ಜಂಟಿ ಅವಾಮಿ ಕ್ರಿಯಾ ಸಮಿತಿ (JAAC) ಮೇಲಿನ ನಿಷೇಧದ ಬಳಿಕ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಘರ್ಷಣೆಯಲ್ಲಿ 30 ಜನ ಪ್ರತಿಭಟನಾಕಾರರು ಸಾವನ್ನಪ್ಪಿದ್ದು, 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪಾಕ್ ಸೇನೆ ಪ್ರತಿಭಟನಾಕಾರರ ಮೇಲೆ ಕಂಡ ಕಂಡಲ್ಲಿ ಗುಂಡಿನ ದಾಳಿ ನಡೆಸಿದೆ. ಮತ್ತೊಂದೆಡೆ ಇಂಟರ್ ನೆಟ್ ಸೇವೆ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.

ಜೂನ್ 9ರಂದು ಜೆಎಎಸಿ ಕರೆ ನೀಡಿದ್ದ ಬಂದ್‌ಗೆ ಮುನ್ನವೇ ರಾವಲಕೋಟ್‌ನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಈ ನಡುವೆ ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದ ಸಂಘಟನೆಯ ಕಾರ್ಯಕರ್ತನ ಮೃತದೇಹವನ್ನು ಇರಿಸಲಾಗಿದ್ದ ಆಸ್ಪತ್ರೆಯ ಶವಾಗಾರದ ಹೊರಗೆ ಸಾವಿರಾರು ಬೆಂಬಲಿಗರು ಜಮಾಯಿಸಿದ್ದರು. ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿದ್ದು, ಪರಿಸ್ಥಿತಿ ಹಿಂಸಾಚಾರಕ್ಕೆ ತಿರುಗಿದೆ. ಶಬಾಜ್ ಷರೀಫ್ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

45 ಸದಸ್ಯರ ಶಾಸಕಾಂಗ ಸಭೆಯಲ್ಲಿ 12 ಸ್ಥಾನಗಳನ್ನು ಕಾಶ್ಮೀರದ ಹೊರಗೆ ಆದರೆ ಪಾಕಿಸ್ತಾನದ ಇತರ ಭಾಗಗಳಲ್ಲಿ ವಾಸಿಸುವ ನಿರಾಶ್ರಿತರಿಗೆ ಮೀಸಲಿಡುವ ಆಡಳಿತದ ನಿರ್ಧಾರವೇ ಅಶಾಂತಿಗೆ ಪ್ರಮುಖ ಕಾರಣವಾಗಿದೆ. ಈ ಕ್ರಮವು ಸ್ಥಳೀಯ ಜನರ ರಾಜಕೀಯ ಪ್ರಾತಿನಿಧ್ಯವನ್ನು ದುರ್ಬಲಗೊಳಿಸುತ್ತದೆ ಎಂದು ಜೆಎಎಸಿ ಆರೋಪಿಸಿದ್ದು, ಮೀಸಲು ಸ್ಥಾನಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿದೆ.

ಇದರೊಂದಿಗೆ ನಿರಂತರವಾಗಿ ಏರಿಕೆಯಾಗುತ್ತಿರುವ ಹಣದುಬ್ಬರ, ವಿದ್ಯುತ್ ಕೊರತೆ, ನಿರುದ್ಯೋಗ, ಆಹಾರ ಪದಾರ್ಥಗಳ ಬೆಲೆ ಏರಿಕೆ ಹಾಗೂ ಆಡಳಿತದ ವಿರುದ್ಧದ ಅಸಮಾಧಾನವೂ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ಎರಡು ವರ್ಷಗಳಿಂದ ವಿದ್ಯುತ್ ಮತ್ತು ಹಿಟ್ಟಿನ ಬೆಲೆ ಏರಿಕೆಯನ್ನು ವಿರೋಧಿಸಿ ಸಂಘಟನೆ ಹಲವು ಬಾರಿ ಪ್ರತಿಭಟನೆ ನಡೆಸಿತ್ತು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ