LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

‘ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್: ಇಂದಿನಿಂದ 30ನೇ ಕಂತಿನ 2 ಸಾವಿರ ರೂ. ಫಲಾನುಭವಿಗಳ ಖಾತೆಗೆ ಜಮಾ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 30ನೇ ಕಂತಿನ ಹಣ ವರ್ಗಾವಣೆ ಮಾಡಲಾಗಿದ್ದು, ಮೇ 20 ರಿಂದ ಜಿಲ್ಲೆಯ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ನೇರವಾಗಿ ಹಣ ಜಮಾ ಆಗಲಿದೆ ಎಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಹೇಳಿದ್ದಾರೆ.

2026ರ ಏಪ್ರಿಲ್ ಮಾಹೆಯಲ್ಲಿ ಕೊಪ್ಪಳ ಜಿಲ್ಲೆಯ 3,09,274 ಮಹಿಳಾ ಫಲಾನುಭವಿಗಳಿಗೆ ಸುಮಾರು ರೂ. 61 ಕೋಟಿ, 85 ಲಕ್ಷದ 48 ಸಾವಿರ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಿದ ನಂತರ ಇಲ್ಲಿಯವರೆಗೆ ಕೊಪ್ಪಳ ಜಿಲ್ಲೆಯ ಅರ್ಹ ಮಹಿಳಾ ಫಲಾನುಭವಿಗಳಿಗೆ ಒಟ್ಟು 30 ಕಂತುಗಳಲ್ಲಿ ರೂ. 1860 ಕೋಟಿಗಳನ್ನು ನೇರವಾಗಿ ಆಯಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಪಾವತಿಸಲಾಗಿದೆ. ಈ ಯೋಜನೆಯಡಿ ಒಬ್ಬ ಮಹಿಳಾ ಫಲಾನುಭವಿಗಳಿಗೆ ಇಲ್ಲಿಯವರೆಗೆ ರೂ. 60,000 ಗಳ ಸಹಾಯಧನ ಸಿಕ್ಕಿದಂತಾಗಿದೆ. ಇದರಿಂದ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹೆಚ್ಚಾಗಿದೆ. ಮಹಿಳೆಯರಿಗೆ ಕುಟುಂಬದ ನಿರ್ವಹಣೆ, ಮನೆಯ ದೈನಂದಿನ ಖರ್ಚುಗಳಿಗೆ ಸಹಾಯ, ವಿಶೇಷವಾಗಿ ಮಕ್ಕಳ ಶಿಕ್ಷಣಕ್ಕೆ ಗೃಹಲಕ್ಷ್ಮಿ ಯೋಜನೆಯ ಸಹಾಯಧನವು ಅತ್ಯಂತ ಸಹಕಾರಿಯಾಗಿದೆ ಮತ್ತು ಗ್ರಾಮೀಣ ಭಾಗದ ಬಡ ಕುಟುಂಬಗಳ ಜೀವನಮಟ್ಟ ಸುಧಾರಣೆಗೂ ತುಂಬಾ ಅನುಕೂಲವಾಗಿದೆ. ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ಫಲಾನುಭವಿಗಳಿಗೆ ನೇರವಾಗಿ ಸಹಾಯಧನ ದೊರೆಯುವ ಮಹತ್ವದ ಯೋಜನೆ ಇದಾಗಿದೆ ಎಂದರು.

 ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿದ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ನಮ್ಮ ರಾಜ್ಯ ಸರ್ಕಾರವು ನುಡಿದಂತೆ ನಡೆಯುತ್ತಿದೆ. ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ ಅವರು ನಿರ್ದೇಶನದಂತೆ ಮತ್ತು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರ ಹಾಗೂ ಜಿಲ್ಲೆಯ ಸಂಸದರು ಮತ್ತು ಶಾಸಕರ ಮಾರ್ಗದರ್ಶನದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮಪರ್ಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

 ತಾಂತ್ರಿಕ ಸಮಸ್ಯೆಗಳಿಂದಾಗಿ ಜಿಲ್ಲೆಯ 1302 ಫಲಾನುಭವಿಗಳ ಸಹಾಯಧನವು ಫಲಾನುಭವಿಗಳಿಗೆ ಜಮಾ ಆಗದೆ ಸರ್ಕಾರಕ್ಕೆ ವಾಪಸ್ ಆಗಿರುತ್ತದೆ. ಈ ಬಗ್ಗೆ ಸಮಸ್ಯೆಯನ್ನು ಸರಿಪಡಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಫಲಾನುಭವಿಗಳ ಸಮಸ್ಯೆಯನ್ನು ಸರಿಪಡಿಸುವಂತೆ ತಿಳಿಸಲಾಗಿದೆ. ಫಲಾನುಭವಿಗಳು ಸಹ ತಮ್ಮ ಬ್ಯಾಂಕ್ ಖಾತೆಯ ಇ-ಕೆವೈಸಿ, ಆಧಾರ್ ಲಿಂಕ್, ಬ್ಯಾಂಕ್ ಸೀಡಿಂಗ್ ಮತ್ತು ಇತರೆ ಸಮಸ್ಯೆಗಳನ್ನು ಸರಿಪಡಿಸಿಕೊಂಡು ಗೃಹಲಕ್ಷ್ಮೀ ಯೋಜನೆಯ ಸಹಾಯಧನ ಪಡೆದುಕೊಳ್ಳಬೇಕು ಎಂದರು.

 ಈ ಬಾರಿಯ ಗೃಹಲಕ್ಷ್ಮೀ ಯೋಜನೆಯ ಸಹಾಯಧನ ಮೊತ್ತವನ್ನು ಖಜಾನೆ ಇಲಾಖೆಯ ಎನ್.ಟಿ.ಟಿ.ಎ.ಐ ವರ್ಗಾವಣೆ ಮೂಲಕ ಪಾವತಿಸಲಾಗಿದ್ದು, ಮೇ 19 ರಿಂದ ಗೃಹಲಕ್ಷ್ಮೀ ಯೋಜನೆಯ ಕೊಪ್ಪಳ ಜಿಲ್ಲೆಯ ಎಲ್ಲಾ ಮಹಿಳಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಒಂದೇ ಬಾರಿಗೆ ಸಹಾಯಧನ ಜಮಾ ಆಗಲಿದೆ. ಫಲಾನುಭವಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಜಿಲ್ಲೆಯ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಪರವಾಗಿ ರಾಜ್ಯ ಸರ್ಕಾರಕ್ಕೆ ಈ ಮೂಲಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಹೇಳಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
IPL 2026: ಸೂರ್ಯವಂಶಿ ಆರ್ಭಟಕ್ಕೆ ನಲುಗಿದ ಲಕ್ನೋ; ಪ್ಲೇಆಫ್ ಆಸೆಯಲ್ಲಿ ರಾಜಸ್ಥಾನ್ ಸೋಲಿಗಾಗಿ ಕಾಯುತ್ತಿದ್ದ ಆ 4 ತಂಡಗಳು ಕಂಗಾಲು!ಆಂಕರ್ ಕೇಳಿದ ಪ್ರಶ್ನೆಗೆ ತಲೆಕೆಟ್ಟವನಂತೆ ಉತ್ತರ ಕೊಟ್ಟ ಪಂತ್: ಪಕ್ಕಾ ಎಣ್ಣೆ ಏಟಲ್ಲಿ ಆಡಿದ ಮಾತು ಎಂದ ನೆಟ್ಟಿಗರು; ವಿಡಿಯೊಥೂ ಥೂ.. ಏನ್ರೀ ಅಸಹ್ಯ ಈ ಪಂತ್: ರಾಜಸ್ಥಾನ್ ವಿರುದ್ಧ ಸೋತು ಲೈವ್‌ನಲ್ಲೇ ‘F’ ಪದ ಬಳಸಿ ಅವಾಂತರ; ವಿಡಿಯೊಕೊಹ್ಲಿ, ರೋಹಿತ್, ಧೋನಿ, ರೈನಾ ಯಾರಿಂದಲೂ ಆಗದ ಮಹಾ ದಾಖಲೆ ಬರೆದ 15 ವರ್ಷದ ಸೂರ್ಯವಂಶಿ; ಗೇಲ್ ದಾಖಲೆ ಮುರಿಯುವ ತಾಕತ್ತಿರುವ ಏಕೈಕ ಗಂಡು!ಇನ್ಮುಂದೆ WhatsApp ನಲ್ಲೇ ಸಿಗುತ್ತೆ ಪಿಎಫ್ ಬ್ಯಾಲೆನ್ಸ್ ಮಾಹಿತಿ: EPFO ನಿಂದ ಹೊಸ ವಾಟ್ಸಾಪ್ ಸೇವೆ ಜಾರಿ: ಆಫೀಸ್‌ಗೆ ಅಲೆಯೋ ಕಷ್ಟ ಇರಲ್ಲಐತಿಹಾಸಿಕ ಕೊಲೋಸಿಯಂನಲ್ಲಿ ಪ್ರಧಾನಿ ಮೋದಿಗೆ ಜಾರ್ಜಿಯಾ ಮೆಲೋನಿ ಆತ್ಮೀಯ ಸ್ವಾಗತ: ವೈರಲ್ ಆಯ್ತು ಸೆಲ್ಫಿ ಫೋಟೋಐದು ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಇಟಲಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತಐಪಿಎಲ್ ಇತಿಹಾಸದಲ್ಲೇ ಅತಿ ಹೆಚ್ಚು ಗಳಿಸಿದ ಆಟಗಾರ ವಿರಾಟ್ ಕೊಹ್ಲಿBIG NEWS : ಧೂಮಪಾನಿಗಳಿಗೆ ಬಿಗ್ ಶಾಕ್ ; ಸಿಗರೇಟ್ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ |Cigarette Price Hike‘ಗ್ಯಾಸ್ ಸಿಲಿಂಡರ್’ ಬುಕ್ ಮಾಡುವಾಗ OTP ಬರುತ್ತಿಲ್ಲವೇ..ನಿಮ್ಮ ‘ಮೊಬೈಲ್‌’ನಲ್ಲಿ ಈ ಸೆಟ್ಟಿಂಗ್ಸ್ ಬದಲಾಯಿಸಿ !