LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ರಮ ಮರಳು ದಂಧೆಕೋರರಿಗೆ ಶಾಕ್: 3000 ಮೆಟ್ರಿಕ್ ಟನ್ ಮರಳು ಜಪ್ತಿ

ಕೊಪ್ಪಳ: ತಾಲೂಕಿನ ಹಲುವಾಗಲಿ ಸೀಮಾದ ತುಂಗಭದ್ರಾ ನದಿಯ ಹಿನ್ನೀರು ಪ್ರದೇಶದಲ್ಲಿ ಕಾನೂನು ಬಾಹಿರವಾಗಿ ಮರಳು ಸಂಗ್ರಹಿಸಿ ಕಳ್ಳತನ ಮಾಡಲು ಯತ್ನಿಸುತ್ತಿದ್ದ ದಂಧೆಕೋರರ ಜಾಲಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಅಳವಂಡಿ ಪೊಲೀಸರು ಜಂಟಿಯಾಗಿ ದಾಳಿ ನಡೆಸಿದ್ದಾರೆ.

ಶನಿವಾರ ಮಧ್ಯಾಹ್ನ ಜಂಟಿ ದಾಳಿ ನಡೆಸಿರುವ ಅಧಿಕಾರಿಗಳ ತಂಡ, ಸುಮಾರು 2,40,000 ರೂ. ಮೌಲ್ಯದ 3,000 ಮೆಟ್ರಿಕ್ ಟನ್ ಮರಳನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದೆ.

ಕೊಪ್ಪಳ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿಗೆ ಹಲುವಾಗಲಿ ಸೀಮಾದ ತುಂಗಭದ್ರಾ ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿ ಕಳ್ಳಸಾಗಣೆಗೆ ಸಂಚು ರೂಪಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಲಭ್ಯವಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಅವರು, ಮೇಲಾಧಿಕಾರಿಗಳ ಆದೇಶದ ಮೇರೆಗೆ ಅಳವಂಡಿ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿದರು.

ಶನಿವಾರ ಮಧ್ಯಾಹ್ನ 2:45ರ ಸುಮಾರಿಗೆ ಅಧಿಕಾರಿಗಳ ತಂಡ ಜಂಟಿಯಾಗಿ ಹಲುವಾಗಲಿ ಸೀಮಾದ ಹೊಲವೊಂದರ ಸಮೀಪವಿರುವ ತುಂಗಭದ್ರಾ ನದಿ ಪಾತ್ರಕ್ಕೆ ದಾಳಿ ಮಾಡಿದ ವೇಳೆ ಅಪರಿಚಿತ ಕಳ್ಳರು ಕಳ್ಳತನದ ಉದ್ದೇಶದಿಂದ ಬೃಹತ್ ಪ್ರಮಾಣದಲ್ಲಿ ಮರಳನ್ನು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ. ಅಧಿಕಾರಿಗಳ ವಾಹನ ಬರುತ್ತಿದ್ದಂತೆ ದಂಧೆಕೋರರು ಅಲ್ಲಿಂದ ಪರಾರಿಯಾಗಿದ್ದಾರೆ.

ಜಪ್ತಿಯಾದ ಮರಳಿನ ವಿವರ:

ಒಟ್ಟು ಸುಮಾರು 3000 ಮೆಟ್ರಿಕ್ ಟನ್ ಮರಳನ್ನು ಜಪ್ತಿ ಮಾಡಲಾಗಿದ್ದು, ಇದರ ಅಂದಾಜು ಮೌಲ್ಯ ರೂ. 2,40,000/- (ಎರಡು ಲಕ್ಷದ ನಲವತ್ತು ಸಾವಿರ ರೂ.) ಆಗಿದೆ. ಸ್ಥಳದಲ್ಲಿ ಹಾಜರಿದ್ದ ಅಳವಂಡಿ ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಸಹಾಯಕರ ಸಮ್ಮುಖದಲ್ಲಿ ಕಂದಾಯ ಮತ್ತು ಪೊಲೀಸ್ ಇಲಾಖೆ ಜಂಟಿ ಪಂಚನಾಮೆ ನಡೆಸಿದ್ದು, ಮಧ್ಯಾಹ್ನ 2:45 ರಿಂದ 3:00 ಗಂಟೆಯ ಅವಧಿಯಲ್ಲಿ ಜಪ್ತಿ ಪಂಚನಾಮೆ ಪ್ರಕ್ರಿಯೆ ಜರುಗಿತು. ಜಪ್ತಿ ಮಾಡಲಾದ ಬೃಹತ್ ಮರಳಿನ ದಾಸ್ತಾನನ್ನು ಪ್ರಸ್ತುತ ಅಳವಂಡಿ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.

ತುಂಗಭದ್ರಾ ನದಿ ಪಾತ್ರದಲ್ಲಿ ಪ್ರಕೃತಿ ಸಂಪತ್ತನ್ನು ಲೂಟಿ ಮಾಡಲು ಯತ್ನಿಸಿದ ಕಳ್ಳರನ್ನು ಪತ್ತೆ ಹಚ್ಚಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಭೂವಿಜ್ಞಾನಿಗಳು ಅಳವಂಡಿ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದಾರೆ. ಈ ಸಂಬಂಧ ಅಳವಂಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಮರಳು ಕಳ್ಳರ ಪತ್ತೆಗಾಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
BREAKING: ಉಕ್ರೇನ್‌ ಒಡೆಸಾ ಬಂದರಿನಿಂದ ಹೊರಟಿದ್ದ ಹಡಗಿನ ಮೇಲೆ ದಾಳಿ: ನಾಲ್ವರು ಭಾರತೀಯರು ಸಾವುಅಕ್ರಮ ಮರಳು ದಂಧೆಕೋರರಿಗೆ ಶಾಕ್: 3000 ಮೆಟ್ರಿಕ್ ಟನ್ ಮರಳು ಜಪ್ತಿಬೆಂಗಳೂರಿನಲ್ಲಿ ಜನನಿಬಿಡ ಪ್ರದೇಶದಲ್ಲೇ ವ್ಯಕ್ತಿ ಆತ್ಮಹತ್ಯೆವ್ಯವಸ್ಥೆ ಶುದ್ಧೀಕರಿಸದಿದ್ದರೆ ಅರ್ಹತೆ ಇರುವ ಯುವ ಜನತೆ ನರಳುತ್ತಾರೆ: ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಸಿಬಿಐ ತನಿಖೆ ಕೋರಿ ಹೈಕೋರ್ಟ್ ಗೆ ಅರ್ಜಿʻಬೆಂಗಳೂರು ದಕ್ಷಿಣ ಶೈಕ್ಷಣಿಕ ಜಿಲ್ಲೆʼಗೆ ಮರು ನಾಮಕರಣ: ʻಬೆಂಗಳೂರು ಕೇಂದ್ರ ಶೈಕ್ಷಣಿಕ ಜಿಲ್ಲೆʼ ಕಡ್ಡಾಯ ಬಳಕೆಗೆ ಆದೇಶಪೆಟ್ರೋಲ್‌ ನಲ್ಲಿ ಎಥೆನಾಲ್ ಮಿಶ್ರಣ 20% ಕ್ಕಿಂತ ಹೆಚ್ಚಿಸಲು ಯಾವುದೇ ನಿರ್ಧಾರ ಕೈಗೊಂಡಿಲ್ಲ: ಕೇಂದ್ರ ಸಚಿವ ಸುರೇಶ್ ಗೋಪಿಚಿನ್ನದ ಬೆಲೆ ಮತ್ತೆ ಏರಿಕೆ ಬೆಳ್ಳಿ ಕೆಜಿಗೆ ₹5,000 ಜಿಗಿತ: ಜುಲೈ 20ರ ಹೊಸ ದರ ಇಲ್ಲಿದೆರಾಜ್ಯ ಸರ್ಕಾರ ತನ್ನ ಅಧಿಕಾರದ ಮಿತಿಯನ್ನು ಮೀರಿ ನಡೆದುಕೊಳ್ಳುತ್ತಿರುವುದು ಸಂವಿಧಾನ ವ್ಯವಸ್ಥೆಗೆ ವಿರುದ್ಧ: ಆರ್.ಅಶೋಕ್ ಕಿಡಿಉದ್ಯೋಗಾಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: ಜುಲೈ 23 ರಂದು ಉದ್ಯೋಗ ನೇರ ಸಂದರ್ಶನಚೆನ್ನಮ್ಮ ಇನ್ನು ನೆನಪು ಮಾತ್ರ: ಸ್ವಾಮಿಯ ಸಾನ್ನಿಧ್ಯಕ್ಕೆ ಕಳುಹಿಸಿಕೊಡುತ್ತೇನೆ….ಎನ್ನುತ್ತಾ ಅಂತ್ಯಕ್ರಿಯೆ ವೇಳೆ ಪತ್ನಿ ಬಗ್ಗೆ ಗದ್ಗದಿತರಾದ ಮಾಜಿ ಪ್ರಧಾನಿ ದೇವೇಗೌಡ