LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಿಎಂಕೆ ಅವಧಿಯ 46 ಯೋಜನೆಗಳನ್ನು ರದ್ದುಗೊಳಿಸಿದ ತಮಿಳುನಾಡು ಸಿಎಂ ವಿಜಯ್: ಟಿವಿಕೆ ಸರ್ಕಾರದ ನಡೆಗೆ ಭಾರಿ ಬೆಂಬಲ

ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರವು ಹಿಂದಿನ ಡಿಎಂಕೆ ಸರ್ಕಾರದ ಅವಧಿಯ ಹಲವಾರು ಯೋಜನೆಗಳನ್ನು ರದ್ದುಗೊಳಿಸಿದೆ.

ತಮಿಳುನಾಡು ಸರ್ಕಾರವು ದೇವಸ್ಥಾನದ ಹಣವನ್ನು ಕಲ್ಯಾಣ ಮಂಟಪಗಳು ಮತ್ತು ವಾಣಿಜ್ಯ ಸಂಕೀರ್ಣಗಳಂತಹ ಇತರೆ ಉದ್ದೇಶಗಳಿಗೆ ಬಳಸುವುದಕ್ಕೆ ನಿಷೇಧ ಹೇರಿದೆ. ಸ್ಟಾಲಿನ್ ಸರ್ಕಾರದ ಅವಧಿಯಲ್ಲಿ ದೇವಸ್ಥಾನದ ನಿಧಿಯಿಂದ ಘೋಷಿಸಲಾಗಿದ್ದ 246 ಕೋಟಿ ರೂ. ಮೌಲ್ಯದ 46 ಯೋಜನೆಗಳನ್ನು ಸರ್ಕಾರ ರದ್ದುಗೊಳಿಸಿದೆ. ತಮಿಳುನಾಡಿನ ದೇವಸ್ಥಾನದ ಹಣವನ್ನು ದೇವಸ್ಥಾನಗಳ ಜೀರ್ಣೋದ್ಧಾರ ಮತ್ತು ಭಕ್ತರ ಕಲ್ಯಾಣಕ್ಕೆ ಮಾತ್ರ ಬಳಸಲು ಟಿವಿಕೆ ಸರ್ಕಾರ ತೀರ್ಮಾನಿಸಿದೆ.

ದೇವಾಲಯಗಳ ಆಸ್ತಿ ಮತ್ತು ಆದಾಯವನ್ನು ಕೇವಲ ಧಾರ್ಮಿಕ ಉದ್ದೇಶಗಳು ಮತ್ತು ದೇವಸ್ಥಾನದ ಅಭಿವೃದ್ಧಿಗೆ ಮಾತ್ರ ಬಳಸಬೇಕೆಂದು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯು ಆದೇಶಿಸಿದೆ. ಹಿಂದಿನ ಡಿಎಂಕೆ ಸರ್ಕಾರ ಜಾರಿಗೆ ತರಲು ಉದ್ದೇಶಿಸಿದ್ದ 29 ಮದುವೆ ಮಂಟಪಗಳು ಮತ್ತು 17 ವಾಣಿಜ್ಯ ಸಂಕೀರ್ಣಗಳ ನಿರ್ಮಾಣ ಯೋಜನೆಗಳನ್ನು ಸಂಪೂರ್ಣವಾಗಿ ರದ್ದುಪಡಿಸಲಾಗಿದೆ.

ದೇವಾಲಯಗಳ ಆಸ್ತಿಪಾಸ್ತಿಗಳ ಸಮಗ್ರ ಲೆಕ್ಕಪರಿಶೋಧನೆಯನ್ನು ನಡೆಸಲಾಗುತ್ತಿದೆ. ದೇವಸ್ಥಾನಗಳಲ್ಲಿ ಭಕ್ತರು ನೀಡುವ ಕಾಣಿಕೆಯ ಚಿನ್ನವನ್ನು ಕರಗಿಸಿ ಬ್ಯಾಂಕ್‌ಗಳಲ್ಲಿ ಠೇವಣಿ ಇಡಲಾಗುತ್ತಿದ್ದು, ಅದರಿಂದ ಬರುವ ಬಡ್ಡಿಯನ್ನು ದೇವಸ್ಥಾನದ ಅಭಿವೃದ್ಧಿಗೆ ಬಳಸಿಕೊಳ್ಳಲಾಗುತ್ತಿದೆ.

ಅಧಿಕೃತ ವಿವರಗಳ ಪ್ರಕಾರ, 115.77 ಕೋಟಿ ರೂ. ಬಜೆಟ್‌ನ 29 ಕಲ್ಯಾಣ ಮಂಟಪ ಯೋಜನೆಗಳ ಅನುಮೋದನೆಯನ್ನು ಅಧಿಕೃತವಾಗಿ ಹಿಂಪಡೆಯಲಾಗಿದೆ. ಇದರೊಂದಿಗೆ, 130.08 ಕೋಟಿ ರೂ. ವೆಚ್ಚದ 17 ಯೋಜಿತ ವಾಣಿಜ್ಯ ಸಂಕೀರ್ಣಗಳ ನಿರ್ಮಾಣವನ್ನು ಸಹ ಕೈಬಿಡಲಾಗಿದೆ. ಈ ರದ್ದತಿ ಆದೇಶ ಹೊರಬೀಳುವ ಮುನ್ನ ಈ 46 ಯೋಜನೆಗಳ ಪೈಕಿ ಯಾವುದೇ ಯೋಜನೆಯ ಕಾಮಗಾರಿ ಅಥವಾ ನಿರ್ಮಾಣ ಕಾರ್ಯಗಳು ಪ್ರಾಯೋಗಿಕವಾಗಿ ಆರಂಭವಾಗಿರಲಿಲ್ಲ ಎಂಬುದನ್ನು ಸರ್ಕಾರಿ ವರದಿಗಳು ಖಚಿತಪಡಿಸಿವೆ.

ತಮಿಳುನಾಡಿನಲ್ಲಿ ಹಿಂದಿನ ಡಿಎಂಕೆ ಸರ್ಕಾರದ ಅವಧಿಯಲ್ಲಿ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಮೂಲಕ ದೇವಸ್ಥಾನಗಳ ಹೆಚ್ಚುವರಿ ಹಣವನ್ನು ವಿವಿಧ ಸಾರ್ವಜನಿಕ ಯೋಜನೆಗಳು ಮತ್ತು ಕಾಲೇಜುಗಳ ಸ್ಥಾಪನೆಗೆ ಬಳಸಿಕೊಳ್ಳಲು ನಿರ್ಧರಿಸಲಾಗಿತ್ತು. ಆದರೆ, ದೇವಸ್ಥಾನದ ಹಣವನ್ನು ಕೇವಲ ಧಾರ್ಮಿಕ ಮತ್ತು ಭಕ್ತರ ಸೌಕರ್ಯಗಳಿಗೆ ಮಾತ್ರ ಬಳಸಬೇಕು ಎಂದು ಹಿಂದೂ ಸಂಘಟನೆಗಳು ಹಾಗೂ ಭಕ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ವಿಜಯ್ ಸರ್ಕಾರ ಭಕ್ತರ ಭಾವನೆಗಳಿಗೆ ಮನ್ನಣೆ ನೀಡಿದ್ದು, ಡಿಎಂಕೆ ಅವಧಿಯ ಆ ಯೋಜನೆಗಳಿಗೆ ತಕ್ಷಣದಿಂದಲೇ ಬ್ರೇಕ್ ಹಾಕಿದೆ. ಸ್ಥಗಿತಗೊಂಡ ಯೋಜನೆಗಳಿಗಾಗಿ ಕಾಯ್ದಿರಿಸಲಾಗಿದ್ದ 245.85 ಕೋಟಿ ರೂ.ಗಳನ್ನು ದೇವಸ್ಥಾನಗಳ ಖಾತೆಗೆ ಮರುಜಮೆ ಮಾಡಲಾಗಿದೆ. ಅಲ್ಲದೇ ಮೊತ್ತವನ್ನು ದೇವಸ್ಥಾನಗಳಿಗೆ ಬರುವ ಭಕ್ತರ ಮೂಲಸೌಕರ್ಯ ಅಭಿವೃದ್ಧಿ, ಉಚಿತ ಅನ್ನದಾಸೋಹ, ಧರ್ಮಶಾಲೆಗಳ ನವೀಕರಣ ಮತ್ತು ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಬಳಸಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ವಿಜಯ್ ನೇತೃತ್ವದ ಟಿವಿಕೆ ಸರ್ಕಾರದ ಈ ನಡೆಗೆ ಹಿಂದೂ ಧಾರ್ಮಿಕ ಮುಖಂಡರು ಮತ್ತು ಭಕ್ತರು ವ್ಯಾಪಕ ಬೆಂಬಲ ವ್ಯಕ್ತಪಡಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
CWRC ನೀಡಿರುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು: ರಾಜ್ಯದ ರೈತರ ಹಿತ ಕಾಯಲು ಸರ್ಕರ ಬದ್ಧ: ಸಚಿವ ರಾಮಲಿಂಗಾರೆಡ್ಡಿBIG NEWS: ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ; ಆದರೂ ಡಿ.ಕೆ.ಶಿವಕುಮಾರ್ ತಮಿಳುನಾಡು ಸಿಎಂ ಅವರನ್ನು ಸಂಧಾನಕ್ಕೆ ಆಹ್ವಾನಿಸಿದ್ದೇಕೆ? ಆರ್.ಅಶೋಕ್ ಪ್ರಶ್ನೆಮಾಜಿ ಸಿಎಂ ಜೆ.ಹೆಚ್. ಪಟೇಲ್ ಬೆಂಬಲಿಗರಾಗಿದ್ದ ಪಿ. ಶೇಖರಪ್ಪ ನಿಧನSHOCKING : ಲವರ್ ಜೊತೆ ಮಾತನಾಡಲು ಅಡ್ಡಿ ; ಅಳುತ್ತಿದ್ದ 3 ವರ್ಷದ ಮಗನನ್ನೇ ಕೊಂದ ಪಾಪಿ ತಾಯಿ.!ಸ್ವಾತಂತ್ರೋತ್ಸವ ಫಲಪುಷ್ಪ ಪ್ರದರ್ಶನ : ಲಾಲ್‌ಬಾಗ್‌ನಲ್ಲಿ ವಿವಿಧ ಸ್ಪರ್ಧೆ, ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಮಾಹಿತಿ ನೀಡಿದವರೇ ಅರೆಸ್ಟ್: ಹೈಕೋರ್ಟ್ ತರಾಟೆಜಲಾಶಯದ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಬಳಸಿBIG NEWS : ಸೈಬರ್ ಅಪರಾಧಗಳಿಗೆ ಮರಣದಂಡನೆ ; ಸಂಸತ್ತಿನಲ್ಲಿ ಮಹತ್ವದ ಮಸೂದೆ ಅಂಗೀಕಾರBREAKING : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉದ್ವಿಗ್ನತೆ ; ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ 20 ಮಂದಿ ಸಾವುಪೊಲೀಸ್ ನೇಮಕಾತಿ ಪರೀಕ್ಷೆ: ವಸ್ತ್ರಸಂಹಿತೆ, ನಿಷೇಧಿತ ವಸ್ತುಗಳು ಸೇರಿ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಸೂಚನೆ