LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

5 ವರ್ಷದೊಳಗಿನ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ: ಕಡ್ಡಾಯ ಲಸಿಕೆ ಹಾಕಿಸಲು ಜೂ. 28 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ

ಬೆಂಗಳೂರು: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡುವ ಉದ್ದೇಶದಿಂದ 2026 ರ ಜೂನ್ 28 ರ ಭಾನುವಾರದಂದು ‘ರಾಷ್ಟ್ರೀಯ ಲಸಿಕಾ ದಿನ (ಪಲ್ಸ್ ಪೋಲಿಯೋ)’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಿತ್ವಿಕ್ ಪಾಂಡೆ ಅವರು ತಿಳಿಸಿದ್ದಾರೆ.

ಭಾರತವು ಕಳೆದ 14 ವರ್ಷಗಳಿಗೂ ಮೇಲ್ಪಟ್ಟು ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದರೂ, ಜಗತ್ತಿನ ಕೆಲವು ಭಾಗಗಳಲ್ಲಿ ಹಾಗೂ ಭಾರತದ ನೆರೆ ರಾಷ್ಟ್ರಗಳಲ್ಲಿ ವೈಲ್ಡ್ ಪೋಲಿಯೋ ವೈರಸ್ (Wild Polio Virus) ಹರಡುವಿಕೆ ಇನ್ನೂ ಇರುವುದರಿಂದ ಈ ಮುನ್ನೆಚ್ಚರಿಕೆ ಕ್ರಮ ಅತ್ಯಗತ್ಯವಾಗಿದೆ. ಭಾರತ ತಜ್ಞ ಸಲಹಾ ಗುಂಪಿನ ಶಿಫಾರಸ್ಸಿನ ಅನ್ವಯ ಈ ಅಭಿಯಾನವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮೊದಲನೇ ದಿನ ಜೂನ್ 28 ರಂದು ಪೋಲಿಯೋ ಬೂತ್‍ಗಳಲ್ಲಿ ಲಸಿಕೆ ನೀಡಲಾಗುವುದು. ನಂತರದ 2 ರಿಂದ 3 ದಿನಗಳಲ್ಲಿ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಲಸಿಕೆ ವಂಚಿತ ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ. ವಲಸಿಗ ಸಮುದಾಯದ ಮಕ್ಕಳು, ಹೆಚ್ಚು ಅಪಾಯದಂಚಿನಲ್ಲಿರುವ ಪ್ರದೇಶಗಳು ಹಾಗೂ ನಗರ ಪ್ರದೇಶದ ಕೊಳಗೇರಿ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ.

ಎಲ್ಲಾ ಇಲಾಖೆಗಳ ಸಹಕಾರಕ್ಕೆ ಮನವಿ:

ಈ ಬೃಹತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳ ಸಹಕಾರವನ್ನು ಬಯಸಿರುವ ಆರೋಗ್ಯ ಇಲಾಖೆಯು, ಹೆಚ್ಚಿನ ಪ್ರಚಾರ ನೀಡಲು ಮಾಹಿತಿ, ಶಿಕ್ಷಣ ಮತ್ತು ಸಂವಹನ ಚಟುವಟಿಕೆಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು, ಎಲ್ಲಾ ಮಾಧ್ಯಮಗಳು, ಆಕಾಶವಾಣಿ ಹಾಗೂ ಎಫ್.ಎಮ್ ವಾಹಿನಿಗಳಲ್ಲಿ ಜಿಂಗಲ್ಸ್ ಮೂಲಕ ಈ ಅಭಿಯಾನದ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ನಿರ್ದೇಶನ ನೀಡಲಾಗಿದೆ.

ಸಾರ್ವಜನಿಕರು ಹಾಗೂ ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿಗಳನ್ನು ಹಾಕಿಸಿ ಸಹಕರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ