LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಲಾಗಿದ್ದ 5,300 ಕೋಟಿ ರೂ. ಅನುದಾನ ಬಿಡುಗಡೆಗೆ ಸಿಎಂ ಡಿ.ಕೆ.ಶಿವಕುಮಾರ್ ಆಗ್ರಹ

ಮಹಾಬಲಿಪುರಂ: ಮೇಲ್ದಂಡೆ ಭದ್ರಾ ಯೋಜನೆಗೆ ಕೇಂದ್ರ ಸರ್ಕಾರ ಘೋಷಿಸಿರುವ ₹5,300 ಕೋಟಿ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದರು.

ತಮಿಳುನಾಡಿನ ಮಹಾಬಲಿಪುರಂನಲ್ಲಿನ 31ನೇ ದಕ್ಷಿಣ ವಲಯ ಮಂಡಳಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸಿಎಂ ಡಿ.ಕೆ.ಶಿವಕುಮಾರ್, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇಂದ್ರ ಹಣಕಾಸು ಸಚಿವರು ಕೇಂದ್ರ ಬಜೆಟ್‌ನಲ್ಲಿ ₹5,300 ಕೋಟಿ ಅನುದಾನ ಘೋಷಿಸಿದ್ದರು. ಆದರೆ ಸಂಸತ್ತಿನಲ್ಲಿ ಘೋಷಣೆಯಾದರೂ ಈವರೆಗೆ ಹಣ ಬಿಡುಗಡೆಯಾಗಿಲ್ಲ. ಇದರಿಂದ ಯೋಜನೆಯ ಅನುಷ್ಠಾನಕ್ಕೆ ತೊಂದರೆಯಾಗುತ್ತಿದೆ ಎಂದು ಹೇಳಿದರು.

ಬೊಮ್ಮಾಯಿ ಅವರ ಅವಧಿಯಲ್ಲಿ ಕೇಂದ್ರ ಹಣಕಾಸು ಸಚಿವರು ಮೇಲ್ದಂಡೆ ಭದ್ರಾ ಯೋಜನೆಗೆ ಕೇಂದ್ರ ಬಜೆಟ್‌ನಲ್ಲಿ ₹5,300 ಕೋಟಿ ಘೋಷಿಸಿದ್ದರು. ಸಂಸತ್ತಿನಲ್ಲೇ ಘೋಷಣೆ ಮಾಡಿದರೂ ಈ ಹಣವನ್ನು ಈವರೆಗೆ ಬಿಡುಗಡೆ ಮಾಡಿಲ್ಲ. ಇದರಿಂದ ಯೋಜನೆಗೆ ತೊಂದರೆಯಾಗುತ್ತಿದೆ. ದಯವಿಟ್ಟು ಅನುದಾನವನ್ನು ಶೀಘ್ರ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಖಾಸಗಿ ವಲಯದ ಕಂಪನಿಗಳು ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ತಮ್ಮ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಯನ್ನು ಬಳಸುತ್ತಿರುವ ರೀತಿಯ ಬಗ್ಗೆಯೂ ಶಿವಕುಮಾರ್ ಕಳವಳ ವ್ಯಕ್ತಪಡಿಸಿದರು.

ರಾಜ್ಯದ ಸ್ಥಳೀಯ ಆದ್ಯತೆಗಳಿಗೆ ಅನುಗುಣವಾಗಿ CSR ನಿಧಿಯನ್ನು ಎಲ್ಲಿ ಬಳಸಬೇಕು ಎಂಬುದನ್ನು ರಾಜ್ಯ ಸರ್ಕಾರ ನಿರ್ಧರಿಸುವಂತಾಗಲು ಸೂಕ್ತ ನೀತಿ ಅಥವಾ ನಿಯಮ ರೂಪಿಸಬೇಕು ಎಂದು ಅವರು ಸಲಹೆ ನೀಡಿದರು.

ಅವರು ಒಂದು ರಾಜ್ಯದಲ್ಲಿ ವ್ಯವಹಾರ ಮಾಡುತ್ತಾರೆ, ಆದರೆ ಬೇರೆಡೆ ಹೂಡಿಕೆ ಮಾಡುತ್ತಾರೆ. ನಮಗೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಆದ್ಯತೆ ಇದೆ. ಹೀಗಾಗಿ CSR ನಿಧಿಯನ್ನು ಎಲ್ಲಿ ಮತ್ತು ಹೇಗೆ ಖರ್ಚು ಮಾಡಬೇಕು ಎಂಬುದನ್ನು ರಾಜ್ಯ ಸರ್ಕಾರ ನಿರ್ಧರಿಸುವಂತಾಗಬೇಕು ಎಂದು ಅವರು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಮಿತ್ ಶಾ ಅವರು ಡಿ.ಕೆ.ಶಿವಕುಮಾರ್ ಅವರ ಸಲಹೆಯನ್ನು ಭಾಗಶಃ ಒಪ್ಪಿಕೊಂಡರು. ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಮುಖ್ಯಸ್ಥರಾಗಿರುವ ಅಧಿಕಾರಿಗಳೊಂದಿಗೆ ಈ ಕುರಿತು ಚರ್ಚಿಸುವಂತೆ ಸೂಚಿಸಿದರು.

ನಾವು ಅಧಿಕಾರಕ್ಕೆ ಬಂದ ನಂತರ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಯಾವುದೇ ರಾಜಕೀಯ ನೇಮಕಾತಿ ಮಾಡಿಲ್ಲ. ಐಎಎಸ್ ಅಧಿಕಾರಿಗಳೇ ಅವುಗಳ ಮುಖ್ಯಸ್ಥರಾಗಿದ್ದಾರೆ. ನಿಮಗೆ ಅವರೊಂದಿಗೆ ಉತ್ತಮ ಬಾಂಧವ್ಯವಿದೆ. ನೀವು ಅವರೊಂದಿಗೆ ಮಾತನಾಡಿ. ನಾನೂ ಅವರೊಂದಿಗೆ ಮಾತನಾಡುತ್ತೇನೆ ಎಂದು ಶಾ ಹೇಳಿದರು.

ಡಿ.ಕೆ.ಶಿವಕುಮಾರ್ ಅವರು ಪ್ರಸ್ತಾಪಿಸಿದ ಕ್ಷೇತ್ರಗಳ ಪುನರ್‌ವಿಂಗಡಣೆ (Delimitation) ವಿಚಾರಕ್ಕೆ ಪ್ರತಿಕ್ರಿಯಿಸಿದ ಶಾ, ಇದು ಕಾಂಗ್ರೆಸ್ ಪಕ್ಷ ಎತ್ತಿರುವ ರಾಜಕೀಯ ವಿಚಾರವಾಗಿದ್ದು, ದಕ್ಷಿಣ ವಲಯ ಮಂಡಳಿಯ ಚರ್ಚೆಯೊಂದಿಗೆ ಅದನ್ನು ಬೆರೆಸಬಾರದು ಎಂದು ಹೇಳಿದರು. ಇದು ರಾಜಕೀಯ ವಿಚಾರ. ಇದನ್ನು ಇಲ್ಲಿನ ಚರ್ಚೆಯೊಂದಿಗೆ ಬೆರೆಸಬೇಡಿ ಎಂದು ಅಮಿತ್ ಶಾ ತಿಳಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
BREAKING : ಬೀದರ್’ನಲ್ಲಿ ‘ಭಾರತ್ ಮಾತಾಕಿ ಜೈ’ ಎಂದ ವಿದ್ಯಾರ್ಥಿಗೆ ಬೆದರಿಕೆ ; ಪ್ರಾಂಶುಪಾಲರ ವಿರುದ್ಧ ‘FIR’ ದಾಖಲುಮುಂಗಾರು ಬೆಳೆ ವಿಮೆ : ಸಾಲ ಪಡೆದ ರೈತರ ನೋಂದಣಿ ದಿನಾಂಕ ಆ. 31ರವರೆಗೆ ವಿಸ್ತರಣೆದೇವರಾಜ ಅರಸು ಅವರ ಸಾಮಾಜಿಕ ನ್ಯಾಯದ ಪರಂಪರೆ ಸದಾ ಪ್ರಸ್ತುತ: ಸಚಿವ ಶಿವರಾಜ್. ಎಸ್‌.ತಂಗಡಗಿ ಅಭಿಮತಸಾಮಾಜಿಕ ನ್ಯಾಯಕ್ಕಾಗಿ, ಬಡ ಜನರ ಪರವಾಗಿ ಹೋರಾಟ ಮಾಡಿದವರಲ್ಲಿ ದೇವರಾಜ ಅರಸು ಮೊದಲಿಗರು: ಡಿಸಿಎಂ ಡಾ.ಜಿ.ಪರಮೇಶ್ವರತಮಿಳುನಾಡಿಗೆ ಕಾವೇರಿ ನೀರು: ಸರ್ಕಾರದ ವಿರುದ್ಧವೇ ಕಿಡಿಕಾರಿದ ಸ್ವಪಕ್ಷದ ಶಾಸಕ ರವಿ ಗಣಿಗಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡಿ: ದಕ್ಷಿಣ ರಾಜ್ಯಗಳ ಸಭೆಯಲ್ಲಿ ಡಿಕೆಶಿ ಒತ್ತಾಯUPI ಪೇಮೆಂಟ್ ಫೇಲ್ ಆಗಿ ಖಾತೆಯಿಂದ ಹಣ ಕಟ್ ಆಯ್ತಾ? ಚಿಂತಿಸ್ಬೇಡಿ.ಜಸ್ಟ್ ಹೀಗೆ ಮಾಡಿದ್ರೆ ಹಣ ವಾಪಸ್!ಸೋನಿಯಾ ಗಾಂಧಿಯವರ ಆತ್ಮಚರಿತ್ರೆ: ಹಳೆಯ ಅಧಿಕಾರದ ರಹಸ್ಯಗಳಿಂದ 2026ರ ಕಾಂಗ್ರೆಸ್ ರಾಜಕೀಯದವರೆಗೆಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಲಾಗಿದ್ದ 5,300 ಕೋಟಿ ರೂ. ಅನುದಾನ ಬಿಡುಗಡೆಗೆ ಸಿಎಂ ಡಿ.ಕೆ.ಶಿವಕುಮಾರ್ ಆಗ್ರಹಅಕ್ಟೋಬರ್ ನಂತರ ಬಿಡುಗಡೆಯಾದರೆ ಬ್ಲಾಕ್ ಬಸ್ಟರ್; ‘ರಾಮಾಯಣ’ ಚಿತ್ರದ ಬಗ್ಗೆ ಪ್ರಸಿದ್ಧ ಟ್ಯಾರೋ ರೀಡರ್ ಭವಿಷ್ಯ