LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭಾರೀ ವಿರೋಧದ ನಡುವೆಯೂ ಬಿಡದಿ ಟೌನ್ ಶಿಪ್ ಗೆ 500 ಎಕರೆ ಭೂಸ್ವಾಧೀನಕ್ಕೆ ಅಧಿಸೂಚನೆ

ಬೆಂಗಳೂರು: ಭಾರೀ ವಿರೋಧದ ನಡುವೆಯೂ ಬಿಡದಿ ಟೌನ್ ಶಿಪ್ ಗೆ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಮೊದಲ ಹಂತದಲ್ಲಿ 500 ಎಕರೆ ಭೂಸ್ವಾಧೀನಕ್ಕೆ ಚಾಲನೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ರಾಮನಗರ ಭಾಗದಲ್ಲಿ ಬಿಡದಿ ಬಳಿ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರಕ್ಕೆ ಅಧಿಸೂಚನೆ ಹೊರಡಿಸಲಾಗಿದೆ.

ರೈತರ ಪ್ರತಿಭಟನೆಯ ನಡುವೆಯೇ ಬಿಡದಿ ಟೌನ್ ಶಿಪ್ ಗಾಗಿ ರಾಮನಗರ ಮತ್ತು ಹಾರೋಹಳ್ಳಿ ತಾಲೂಕು ವ್ಯಾಪ್ತಿಯ ಮೂರು ಗ್ರಾಮಗಳ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಪ್ರಕಟಿಸಲಾಗಿದೆ. ರಾಮನಗರ ತಾಲೂಕಿನ ಕೆಂಪಯ್ಯನಪಾಳ್ಯ, ಮಂಡಲಹಳ್ಳಿ ಮತ್ತು ಹಾರೋಹಳ್ಳಿ ತಾಲೂಕಿನ ವಡೇರಹಳ್ಳಿಗಳ 755 ಭೂ ಮಾಲೀಕರಿಂದ 519.05 ಎಕರೆ ಭೂಸ್ವಾಧೀನಕ್ಕೆ 2025ರ ಮಾರ್ಚ್ ನಲ್ಲಿ ಪ್ರಾಥಮಿಕ ಅಧಿಸೂಚನೆ ಪ್ರಕಟಿಸಲಾಗಿತ್ತು. ಇದೀಗ ಆ ಭೂಮಿಯ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಪೈಕಿ 20 ಎಕರೆ ಕರಾಬು ಭೂಮಿಯಾಗಿದ್ದು, ಉಳಿದ 499.14 ಎಕರೆ ಖಾಸಗಿ ಭೂಮಿಯಾಗಿದೆ.

ಈ ಭೂಮಿಯನ್ನು ಈಗ ಪರಿಹಾರ ನೀಡಿ ಸ್ವಾಧೀನಪಡಿಸಿಕೊಳ್ಳಲು ನಿರ್ಧರಿಸಲಾಗಿದೆ. ಯೋಜನೆಗಾಗಿ ಭೂಮಿ ನೀಡುವವರಿಗೆ ಸರ್ಕಾರ ಪರಿಹಾರ ನಿಗದಿಪಡಿಸಿದೆ. ಕೆಂಪಯ್ಯನ ಪಾಳ್ಯ ವ್ಯಾಪ್ತಿ ಭೂಮಿ ನೀಡುವವರಿಗೆ ಎಕರೆಗೆ ತಲಾ 2.07 ಕೋಟಿ ರೂ. ಪರಿಹಾರ ನೀಡಲಾಗುವುದು. ಮಂಡಲಹಳ್ಳಿ, ವಡೇರಹಳ್ಳಿ ಗ್ರಾಮಗಳ ಭೂಮಿಗೆ ಎಕರೆಗೆ ತಲಾ 2.14 ಕೋಟಿ ರೂಪಾಯಿ ನಿಗದಿ ಮಾಡಲಾಗಿದೆ. ನಗದು ಪರಿಹಾರ ಪಡೆದುಕೊಳ್ಳದವರಿಗೆ ತಮ್ಮ ಭೂಮಿ ಪ್ರಮಾಣದ ಶೇಕಡ 50ರಷ್ಟು ಅಭಿವೃದ್ಧಿ ಹೊಂದಿದ ಭೂಮಿ ನೀಡಲು ನಿರ್ಧರಿಸಲಾಗಿದೆ. ಬಿಡದಿ ಟೌನ್ ಶಿಪ್ ಯೋಜನೆಗಾಗಿ 9 ಗ್ರಾಮಗಳ 7400 ಎಕರೆಗೂ ಹೆಚ್ಚಿನ ಭೂಮಿ ಸ್ವಾಧೀನಪಡಿಸಿಕೊಳ್ಳಲು ನಿರ್ಧರಿಸಲಾಗಿದೆ ಎನ್ನಲಾಗಿದೆ.

ಚಿತ್ರಕೃಪೆ: ಎಐ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ