ಬೆಂಗಳೂರು: ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯದ ಸಾರಿಗೆ ನಿಗಮಗಳಿಗೆ 5000 ಹೊಸ ಬಸ್ ಗಳನ್ನು ಸೇರ್ಪಡೆ ಮಾಡಲಾಗುವುದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.
ಕೆಎಸ್ಆರ್ಟಿಸಿ, ಕೆಕೆಆರ್ಟಿಸಿ, ವಾಯುವ್ಯ ಸಾರಿಗೆ ಮತ್ತು ಬಿಎಂಟಿಸಿ ಸಾರಿಗೆ ನಿಗಮಗಳ ಅಧಿಕಾರಿಗಳೊಂದಿಗೆ ಮಂಗಳವಾರ ಸಚಿವರು ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ್ದಾರೆ.
ರಾಜ್ಯ ಸರ್ಕಾರದ ನಿಧಿಯಿಂದ 1 ಸಾವಿರ ಬಸ್ ಖರೀದಿಸಲಿದ್ದು, ಉಳಿದ 4000 ಎಲೆಕ್ಟ್ರಿಕ್ ಬಸ್ ಗಳನ್ನು ಕೇಂದ್ರದ ಆರ್ಥಿಕ ನೆರವಿನೊಂದಿಗೆ ಖರೀದಿಸಲಾಗುವುದು ಎಂದು ಹೇಳಿದ್ದಾರೆ.
ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ನಾಲ್ಕು ಸಾರಿಗೆ ನಿಗಮಗಳಿಗೆ ಬಸ್ ಗಳನ್ನು ಹಂಚಿಕೆ ಮಾಡಲಾಗುವುದು. ಶಕ್ತಿ ಯೋಜನೆ ಅಡಿ ಮಹಿಳಾ ಫಲಾನುಭವಿಗಳಿಗೆ ಸಾರಿಗೆ ಬಸ್ ಗಳಲ್ಲಿ ಸುಗಮ ಪ್ರಯಾಣಕ್ಕೆ ಉಚಿತ ಸ್ಮಾರ್ಟ್ ಕಾರ್ಡ್ ನೀಡಲಾಗುವುದು ಎಂದು ತಿಳಿಸಿದ್ದಾರೆ.