LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಾಪ ವೈಭವ್: ತಾನೇ 6 ಎಸೆತಕ್ಕೆ ಔಟ್ ಆಗಿ 96 ರನ್ ಬಾರಿಸಿದ ವೈಭವ್ ಸೂರ್ಯವಂಶಿಗೆ ಚೆನ್ನಾಗಿ ಆಡಲಿಲ್ಲ ಎಂದು ಗದರಿದ ರಿಯಾನ್ ಪರಾಗ್; ವಿಡಿಯೊ

ನಿನ್ನೆ ( ಮೇ 29 ) ಮುಲ್ಲಾನ್‌ಪುರದ ಮಹಾರಾಜ ಯದವೀಂದ್ರ ಸಿಂಗ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಎರಡನೇ ಕ್ವಾಲಿಫಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗುಜರಾತ್ ಟೈಟನ್ಸ್ 7 ವಿಕೆಟ್‌ಗಳ ಗೆಲುವನ್ನು ದಾಖಲಿಸಿ ಫೈನಲ್ ಪ್ರವೇಶ ಮಾಡಿತು. ಈ ಮೂಲಕ ಒಂದನೇ ಕ್ವಾಲಿಫಯರ್ ಬಳಿಕ ಮತ್ತೊಮ್ಮೆ ಗುಜರಾತ್ ಟೈಟನ್ಸ್ ರಾಯಲ್ ಬೆಂಗಳೂರು ತಂಡಕ್ಕೆ ಎದುರಾಳಿಯಾಗಿದೆ.

ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ರಾಜಸ್ಥಾನ್ ರಾಯಲ್ಸ್ ವೈಭವ್ ಸೂರ್ಯವಂಶಿ, ಡೊನೊವೆನ್ ಫೆರೇರಾ ಅಬ್ಬರದ ಬ್ಯಾಟಿಂಗ್ ಹಾಗೂ ರವೀಂದ್ರ ಜಡೇಜಾ ಜವಾಬ್ದಾರಿಯುತ ಆಟದ ನೆರವಿನಿಂದ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 214 ರನ್ ಕಲೆಹಾಕಿದ್ದು, ಗುಜರಾತ್ ಟೈಟನ್ಸ್‌ಗೆ 215 ರನ್‌ಗಳ ಸವಾಲಿನ ಗುರಿಯನ್ನು ನೀಡಿತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ಗುಜರಾತ್ ಟೈಟನ್ಸ್ ಆರಂಭಿಕರಾದ ಶುಬ್‌ಮನ್ ಗಿಲ್ ಹಾಗೂ ಸಾಯಿ ಸುದರ್ಶನ್ ಉತ್ತಮ ಆಟದ ನೆರವಿನಿಂದ 18.4 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 219 ರನ್ ಕಲೆಹಾಕಿತು.

ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ಟಾಸ್ ಗೆದ್ದು ಬ್ಯಾಟಿಂಗ್ ಮಾಡುವ ತಮ್ಮ ಯೋಜನೆಗೆ ತಕ್ಕಂತಹ ಆರಂಭ ಪಡೆದುಕೊಳ್ಳಲಿಲ್ಲ. ಯಶಸ್ವಿ ಜೈಸ್ವಾಲ್ 1 ಹಾಗೂ ಧ್ರುವ್ ಜುರೆಲ್ ಕೇವಲ 7 ರನ್‌ಗೆ ವಿಕೆಟ್ ಒಪ್ಪಿಸಿದ ಕಾರಣ ಕೇವಲ 9 ರನ್‌ಗೆ ಎರಡು ವಿಕೆಟ್ ಕಳೆದುಕೊಂಡಿತು. ಹೀಗೆ ಆರಂಭಿಕ ಆಘಾತ ಅನುಭವಿಸಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಆಸರೆಯಾದದ್ದು ಮೂರನೇ ವಿಕೆಟ್‌ಗೆ ಜತೆಯಾದ ರವೀಂದ್ರ ಜಡೇಜಾ ಹಾಗೂ ವೈಭವ್ ಸೂರ್ಯವಂಶಿ. ಈ ಇಬ್ಬರೂ 127 ರನ್‌ಗಳ ಜತೆಯಾಟವನ್ನಾಡಿದರು.

ಜಡೇಜಾ ಕೊನೆಯವರೆಗೂ ಅಜೇಯರಾಗಿ ಉಳಿದು 45 ರನ್ ಬಾರಿಸಿದರೆ, ವೈಭವ್ ಸೂರ್ಯವಂಶಿ 47 ಎಸೆತಗಳಲ್ಲಿ 8 ಬೌಂಡರಿ ಹಾಗೂ 7 ಸಿಕ್ಸರ್ ಸಹಿತ 96 ರನ್ ಬಾರಿಸಿ ತಂಡಕ್ಕೆ ದೊಡ್ಡ ಕೊಡುಗೆ ನೀಡಿದರು. ಇನ್ನು ಜಡೇಜಾ ಇನ್ನಿಂಗ್ಸ್ ಮಧ್ಯದಲ್ಲಿ ಗಾಯದ ಸಮಸ್ಯೆಯಿಂದ ರಿಟೈರ್ಡ್ ಹರ್ಟ್ ಆಗಿ ಡಗ್‌ಔಟ್‌ ಸೇರಿದರು. ಈ ಸಮಯದಲ್ಲಿ ಕಣಕ್ಕಿಳಿದ ನಾಯಕ ರಿಯಾನ್ ಪರಾಗ್ 6 ಎಸೆತಕ್ಕೆ 11 ರನ್ ಕಲೆಹಾಕಿ ಪೆವಿಲಿಯನ್ ಸೇರಿಕೊಂಡರು. ನಾಯಕನಾಗಿ ಇಂತಹ ಸಮಯದಲ್ಲಿ ನಿಲ್ಲಬೇಕಿದ್ದ ಪರಾಗ್ ಕಳಪೆ ಆಟವನ್ನಾಡಿ ನಿರಾಸೆ ಮೂಡಿಸಿದರು.

ಹೀಗೆ ಇಡೀ ಟೂರ್ನಿಯಲ್ಲಿ ಫ್ಲಾಪ್ ಆಗಿ ಫೈನಲ್ ಪ್ರವೇಶಿಸಲು ಅವಕಾಶವಿದ್ದ ಪ್ರಮುಖ ಪಂದ್ಯದಲ್ಲೂ ಮಕಾಡೆ ಮಲಗಿದ ರಿಯಾನ್ ಪರಾಗ್ 47 ಎಸೆತಗಳಲ್ಲಿ 96 ರನ್ ಬಾರಿಸಿ ಬಂದ ಬಾಲಕ ವೈಭವ್ ಸೂರ್ಯವಂಶಿ ಕಡೆ ಡಗ್‌ಔಟ್‌ನಲ್ಲಿ ಬೆರಳು ತೋರಿಸುತ್ತಾ ಗದರಿದ ಘಟನೆ ನಡೆದಿದೆ ಎಂದು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಫೋಟೊ ಹಾಗೂ ವಿಡಿಯೊ ಹಂಚಿಕೊಂಡು ಪರಾಗ್ ವಿರುದ್ಧ ಕಿಡಿಕಾರಿದ್ದಾರೆ. ಮೊದಲು ನಾಯಕನಾಗಿ ಆಡಬೇಕಾದ ಆಟವನ್ನಾಡದ ಈತ ಪುಟ್ಟ ಹುಡುಗನ ಮೇಲೆ ರೇಗಾಡುವುದು ಎಷ್ಟು ಸರಿ ಎಂದು ನೆಟ್ಟಿಗರು ಪರಾಗ್ ನಡೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ