LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

‘ಗೃಹಲಕ್ಷ್ಮಿ’ ಯೋಜನೆಯಲ್ಲಿ ಭಾರೀ ಅಕ್ರಮ : ಖಾತೆ ಇಲ್ಲದವರಿಗೆ ₹60 ಕೋಟಿ ಜಮೆ , CAG ವರದಿಯಲ್ಲಿ ಸ್ಪೋಟಕ ಮಾಹಿತಿ.!

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ದೊಡ್ಡ ಹಣಕಾಸು ಅಕ್ರಮಗಳು ಬಯಲಾಗಿವೆ. CAG ವರದಿಯ ಪ್ರಕಾರ ಫಲಾನುಭವಿಗಳ ಹೆಸರಿನಲ್ಲಿ ಸರಿಯಾದ ಪರಿಶೀಲನೆ ಇಲ್ಲದೆ ಹಾಗೂ ಬ್ಯಾಂಕ್ ಖಾತೆಗಳ ಲಿಂಕಿಂಗ್ ದೋಷಗಳಿಂದ ಸುಮಾರು ₹60 ಕೋಟಿ ಹಣ ಅನಿಯಮಿತವಾಗಿ ಠೇವಣಿಯಾಗಿರುವುದು ಪತ್ತೆಯಾಗಿದೆ. ಈ ಅಕ್ರಮದಿಂದ DBT ವ್ಯವಸ್ಥೆಯ ನಿಗಾವಳಿ ಮತ್ತು ಜಾರಿಗೆ ಸಂಬಂಧಿಸಿದ ಗಂಭೀರ ಲೋಪಗಳು ಹೊರಬಿದ್ದಿವೆ.

ಕರ್ನಾಟಕ ಸರ್ಕಾರದ ಪ್ರಮುಖ ಕಲ್ಯಾಣ ಯೋಜನೆ ಗೃಹಲಕ್ಷ್ಮಿ (Gruha Lakshmi) ಯೋಜನೆಗೆ ಸಂಬಂಧಿಸಿದಂತೆ ಕಂಟ್ರೋಲರ್ ಅಂಡ್ ಆಡಿಟರ್ ಜನರಲ್ (CAG) ವರದಿಯಲ್ಲಿ ದೊಡ್ಡ ಮಟ್ಟದ ಅಕ್ರಮಗಳು ಬೆಳಕಿಗೆ ಬಂದಿವೆ.

ಹೌದು.ಕರ್ನಾಟಕ ಸರ್ಕಾರದ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ CAG ವರದಿಯಲ್ಲಿ ಗಂಭೀರ ಅಕ್ರಮಗಳು ಬೆಳಕಿಗೆ ಬಂದಿವೆ. ವರದಿ ಪ್ರಕಾರ, 23,262 ಫಲಾನುಭವಿಗಳಿಗೆ ಬ್ಯಾಂಕ್ ಖಾತೆ ವಿವರಗಳೇ ಇಲ್ಲದೆ ಸುಮಾರು ₹46.52 ಕೋಟಿ ಹಣ ಪಾವತಿಸಲಾಗಿದೆ ಎಂಬ ಅಚ್ಚರಿ ಸಂಗತಿ ಬಹಿರಂಗವಾಗಿದೆ.ಅದೇ ವೇಳೆ, ಕೆಲ ಪ್ರಕರಣಗಳಲ್ಲಿ ಒಂದೇ ಬ್ಯಾಂಕ್ ಖಾತೆಗೆ ಹಲವು ಫಲಾನುಭವಿಗಳ ಹಣ ಜಮೆಯಾಗಿರುವುದು, ಹಾಗೂ ವ್ಯವಸ್ಥೆಯಲ್ಲಿ ಸರಿಯಾದ ಪರಿಶೀಲನೆ ಇಲ್ಲದೇ DBT (Direct Benefit Transfer) ಮೂಲಕ ಹಣ ಬಿಡುಗಡೆ ಮಾಡಿರುವುದು ಕೂಡ ವರದಿಯಲ್ಲಿ ಉಲ್ಲೇಖವಾಗಿದೆ.

CAG ವರದಿ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಈ ರೀತಿಯ ಪಾವತಿಗಳು ಹೇಗೆ ಸಾಧ್ಯವಾಯಿತು ಎಂಬುದಕ್ಕೆ ಸ್ಪಷ್ಟನೆ ನೀಡುವಂತೆ ಪ್ರಶ್ನಿಸಿದೆ. ಈ ಅಕ್ರಮಗಳಿಂದ ಯೋಜನೆಯ ಪಾರದರ್ಶಕತೆ ಮತ್ತು ನಿಗಾವಳಿ ವ್ಯವಸ್ಥೆಯ ಮೇಲೆ ಗಂಭೀರ ಪ್ರಶ್ನೆಗಳು ಎದ್ದಿವೆ.ಇದರಿಂದಾಗಿ ರಾಜ್ಯದ ಮಹತ್ವಾಕಾಂಕ್ಷಿ ಕಲ್ಯಾಣ ಯೋಜನೆಯ ಅನುಷ್ಠಾನದಲ್ಲಿ ದೊಡ್ಡ ಮಟ್ಟದ ಆಡಳಿತ ಲೋಪಗಳು ಇರುವುದನ್ನು ವರದಿ ಬಹಿರಂಗಪಡಿಸಿದೆ.

₹60 ಕೋಟಿ ಹಣ ಅಕ್ರಮ ಹಣ ಠೇವಣಿ

ವರದಿ ಪ್ರಕಾರ, ಕೆಲವು ಫಲಾನುಭವಿಗಳ ಬ್ಯಾಂಕ್ ಖಾತೆಗಳಲ್ಲಿ ಒಂದೇ ಖಾತೆಗೆ ಹಲವಾರು ಫಲಾನುಭವಿಗಳ ಹಣ ಜಮೆಯಾಗಿದ್ದು, ಒಟ್ಟಾರೆ ಸುಮಾರು ₹60 ಕೋಟಿ ಹಣ ಅಕ್ರಮವಾಗಿ ಠೇವಣಿಯಾಗಿರುವುದು ಪತ್ತೆಯಾಗಿದೆ. ಈ ಹಣವನ್ನು ಸುಮಾರು 3 ಲಕ್ಷ ಕಂತುಗಳ ರೂಪದಲ್ಲಿ ವರ್ಗಾಯಿಸಲಾಗಿದೆ ಎಂದು ತಿಳಿದುಬಂದಿದೆ.
ಇದೇ ವೇಳೆ, ಕೆಲವರು ಒಂದೇ ವ್ಯಕ್ತಿಯ ಹೆಸರಿನಲ್ಲಿ ಹಲವು ಖಾತೆಗಳನ್ನು ತೆರೆಯುವ ಮೂಲಕ ಯೋಜನೆಯ ಹಣವನ್ನು ಅನ್ಯಾಯವಾಗಿ ಪಡೆಯುತ್ತಿರುವುದು ಕೂಡ ವರದಿಯಲ್ಲಿ ಬಹಿರಂಗವಾಗಿದೆ. ಇದರಿಂದ ಸರ್ಕಾರದ DBT (Direct Benefit Transfer) ವ್ಯವಸ್ಥೆಯಲ್ಲಿ ಗಂಭೀರ ನಿಗಾವಳಿ ಕೊರತೆ ಇರುವುದನ್ನು CAG ಉಲ್ಲೇಖಿಸಿದೆ.
ಈ ಹಿನ್ನೆಲೆಯಲ್ಲಿ ಫಲಾನುಭವಿಗಳ ಪರಿಶೀಲನೆ, ಇ-ಕೆವೈಸಿ ಮತ್ತು ಬ್ಯಾಂಕ್ ಖಾತೆಗಳ ಸರಿಯಾದ ಲಿಂಕಿಂಗ್ ಮಾಡದಿರುವುದು ಪ್ರಮುಖ ಲೋಪಗಳಾಗಿ ಗುರುತಿಸಲಾಗಿದೆ. ಸರ್ಕಾರ ಈಗ ಈ ಅಕ್ರಮಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ