LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರೇಷನ್ ಅಂಗಡಿ ಇನ್ಮುಂದೆ ಬೆಳಗ್ಗೆ 7ಕ್ಕೇ ಓಪನ್, ಅ.1ರಿಂದ ಹೊಸ ವೇಳಾಪಟ್ಟಿ.!

ಬೆಂಗಳೂರು: ರಾಜ್ಯದ ನ್ಯಾಯಬೆಲೆ (ರೇಷನ್) ಅಂಗಡಿಗಳ ಕಾರ್ಯನಿರ್ವಹಣಾ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದ್ದು, ಅಕ್ಟೋಬರ್ 1ರಿಂದ ಹೊಸ ಸಮಯ ಜಾರಿಗೆ ಬರಲಿದೆ. ಇದರೊಂದಿಗೆ ಪಡಿತರ ಕಾರ್ಡ್‌ದಾರರಿಗೆ ಇ-ಕೆವೈಸಿ ಮಾಡಿಸಲು ಅಕ್ಟೋಬರ್ 20ರವರೆಗೆ ಕಾಲಾವಕಾಶ ವಿಸ್ತರಿಸಿ ಸರ್ಕಾರ ಆದೇಶಿಸಿದೆ.

ಸರ್ವರ್ ಸಮಸ್ಯೆ ಹಾಗೂ ತಾಂತ್ರಿಕ ದೋಷಗಳಿಂದಾಗಿ ಜನರು ಎದುರಿಸುತ್ತಿದ್ದ ಸಂಕಷ್ಟಕ್ಕೆ ಸ್ಪಂದಿಸಿ ರಾಜ್ಯ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಹಾಗೂ ಪಡಿತರ ವಿತರಣಾ ವ್ಯವಸ್ಥೆಯನ್ನು ಮತ್ತಷ್ಟು ಜನಸ್ನೇಹಿಯಾಗಿಸಲು ಅಕ್ಟೋಬರ್ 1ರಿಂದ ರೇಷನ್ ಅಂಗಡಿಗಳು ದಿನಕ್ಕೆ ಎರಡು ಪಾಳಿಯಲ್ಲಿ ತೆರೆಯಲಿವೆ.

ಬೆಳಗಿನ ಅವಧಿ: ಬೆಳಗ್ಗೆ 7:00 ರಿಂದ ಮಧ್ಯಾಹ್ನ 12:00 ರವರೆಗೆ

ಸಂಜೆಯ ಅವಧಿ: ಸಂಜೆ 4:00 ರಿಂದ ರಾತ್ರಿ 8:00 ರವರೆಗೆ

ಕೂಲಿ-ಕಾರ್ಮಿಕರು ಹಾಗೂ ನೌಕರರು ಬೆಳಗ್ಗೆ ಕೆಲಸಕ್ಕೆ ತೆರಳುವ ಮುನ್ನ ಅಥವಾ ಸಂಜೆ ಕೆಲಸ ಮುಗಿಸಿ ಮನೆಗೆ ಹಿಂದಿರುಗುವಾಗ ಸುಲಭವಾಗಿ ರೇಷನ್ ಪಡೆಯಲು ಮತ್ತು ಇ-ಕೆವೈಸಿ ಮಾಡಿಸಿಕೊಳ್ಳಲು ಈ ಸಮಯ ನಿಗದಿಪಡಿಸಲಾಗಿದೆ.

ಅ.20ರವರೆಗೆ ಇ-ಕೆವೈಸಿ ಗಡುವು ವಿಸ್ತರಣೆ:

ರಾಜ್ಯದಲ್ಲಿ ಬೋಗಸ್ ಕಾರ್ಡ್‌ ಪತ್ತೆ ಹಾಗೂ ಪಡಿತರ ಸೋರಿಕೆ ತಡೆಗೆ ಆಹಾರ ಇಲಾಖೆಯು ಇ-ಕೆವೈಸಿ ಕಡ್ಡಾಯಗೊಳಿಸಿದೆ. ಈ ಹಿಂದೆ ಸೆಪ್ಟೆಂಬರ್ 30 ಕೊನೆಯ ದಿನವಾಗಿತ್ತು. ಆದರೆ ಸರ್ವರ್ ಸಮಸ್ಯೆಯಿಂದಾಗಿ ನ್ಯಾಯಬೆಲೆ ಅಂಗಡಿಗಳ ಮುಂಭಾಗ ಜನ ಸರದಿಯಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಜನರ ಪರದಾಟವನ್ನು ಗಮನಿಸಿ, ಸರ್ವರ್ ಸಮಸ್ಯೆಯನ್ನು ತಕ್ಷಣ ಬಗೆಹರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಇ-ಕೆವೈಸಿ ಪೂರ್ಣಗೊಳಿಸಲು ಅಕ್ಟೋಬರ್ 20ರವರೆಗೆ ಅಂತಿಮ ಗಡುವು ನೀಡಲಾಗಿದೆ. ಸಾರ್ವಜನಿಕರು ಯಾವುದೇ ಗೊಂದಲವಿಲ್ಲದೆ ಸಮೀಪದ ನ್ಯಾಯಬೆಲೆ ಅಂಗಡಿಗೆ ತೆರಳಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಕೋರಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING: ದಕ್ಷಿಣ ಕನ್ನಡ ಜಿಲ್ಲೆ ಇನ್ಮುಂದೆ 'ಮಂಗಳೂರು ಜಿಲ್ಲೆ': ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧಾರBIG BREAKING: ತುಳುವಿಗೆ ರಾಜ್ಯದ 2ನೇ ಭಾಷೆ ಮಾನ್ಯತೆ ನೀಡಲು ರಾಜ್ಯ ಸಚಿವ ಸಂಪುಟ ತೀರ್ಮಾನಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಿ: ಸಿಎಂ ಡಿ.ಕೆ. ಶಿವಕುಮಾರ್‌ಗೆ ವಕೀಲರ ನಿಯೋಗದಿಂದ ಮನವಿ ಸಲ್ಲಿಕೆKPSC ನೇಮಕಾತಿ ಅಕ್ರಮದ ಜಾಲ ಭೇದಿಸಿದ CID: 13 ಬೇನಾಮಿ ಖಾತೆಗಳಲ್ಲಿದ್ದ 67 ಲಕ್ಷ ಸೀಜ್!BREAKING : ನಟ ದರ್ಶನ್ ಗೆ ಬಿಗ್ ರಿಲೀಫ್ : ಕ್ರಾಸ್ ಎಕ್ಸಾಮಿನೇಷನ್ ವೇಳೆ, ಖುದ್ದು ಹಾಜರಾತಿಗೆ ಅನುಮತಿ ನೀಡಿದ ಹೈಕೋರ್ಟ್ತೆರವುಗೊಳಿಸಿದ್ದ ಫುಟ್‌ಪಾತ್ ಮೇಲೆ ಮತ್ತೆ ವ್ಯಾಪಾರ ಮಾಡಿದ್ರೆ FIR, ಸಾಮಗ್ರಿ ಜಪ್ತಿ: ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆಕರ್ನಾಟಕ 'SSLC ಅರ್ಧವಾರ್ಷಿಕ ಪರೀಕ್ಷೆ'ಯ ವೇಳಾಪಟ್ಟಿ ಪ್ರಕಟ | Karnataka SSLC Examಮಂಗಳೂರಿನಲ್ಲಿಂದು ಐತಿಹಾಸಿಕ ಸಂಪುಟ ಸಭೆ: ಕರಾವಳಿ ಜನರ ಚಿತ್ತ ಸರ್ಕಾರದ ನಿರ್ಧಾರಗಳತ್ತಬರಪೀಡಿತ ತಾಲೂಕುಗಳ ರೈತರಿಗೆ ಬಿಗ್ ರಿಲೀಫ್: ಸಾಲ ಮರುಪಾವತಿಗೆ 12 ತಿಂಗಳ ಕಾಲಾವಕಾಶಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸಿಎಂ ಡಿಕೆಶಿ ಹೊಸ ಮಿಷನ್ : 50,000 ನಿವೇಶನ, ಕಲಬುರಗಿಯಲ್ಲಿ ಐಇ ಪಾರ್ಕ್.!