LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

72,000 ಹುದ್ದೆಗಳ ನೇಮಕಾತಿಗೆ ಇಲಾಖೆಗಳಿಗೆ ನೋಟಿಫಿಕೇಷನ್: ಸ್ಪಷ್ಟನೆ ನೀಡಿದ ಡಿಸಿಎಂ ಪರಮೇಶ್ವರ್

ಬೆಂಗಳೂರು: ರಾಜ್ಯ ಸರ್ಕಾರ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಂಡಿದೆ. ಈ ಬಗ್ಗೆ ಡಿಸಿಎಂ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ.

ಬೆಂಗಳೂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಪರಮೇಶ್ವರ್, ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ತುಂಬುತ್ತೇವೆ ಎಂದು ಚುನಾವಣೆ ಪ್ರಣಾಳಿಕೆಯಲ್ಲಿಯೇ ನಾವು ಹೇಳಿದ್ದೆವು. ಆದರೆ ಅನೇಕ ಕಾರಣಗಳಿಂದ ಅದು ವಿಳಂಬವಾಗಿದೆ. ಇದೀಗ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ನೇಮಕಾತಿ ವಿಚಾರದಲ್ಲಿ ಒಳ ಮೀಸಲಾತಿಯೇ ದೊಡ್ಡ ಸಮಸ್ಯೆಯಾಗಿತ್ತು. ಆದರೀಗ ಒಟ್ಟು 72,000 ಹುದ್ದೆಗಳಿಗೆ ನೇಮಕ ಸಂಬಂಧ ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಈ ಬಗ್ಗೆ ಇಲಾಖೆಗಳಿಗೆ ನೋಟಿಫಿಕೇಶನ್​​ಗೂ ಸೂಚಿಸಲಾಗಿದೆ. ಕಂದಾಯ ಇಲಾಖೆಗಳಿಗೂ ನೇಮಕಾತಿಗೆ ಸೂಚಿಸಲಾಗಿದೆ. ಅದೇ ರೀತಿ ಶಿಕ್ಷಕರು, ವೈದ್ಯರು, ನರ್ಸ್ ಗಳು, ಇಂಜಿನಿಯರ್ಸ್ ಸೇರಿದಂತೆ ಎಲ್ಲಾ ಇಲಾಖೆಗಳಲ್ಲಿಯೂ ವಿಳಂಬ ಮಾಡದೇ ನೇಮಕಾತಿಗೆ ಸೂಚಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲೂ ಈ ಬಗ್ಗೆ ಚರ್ಚೆಯಾಗಿದೆ ಎಂದರು.

ನೇಮಕಾತಿ ನಿಟ್ಟಿನಲ್ಲಿಯೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರು ಅಧಿಕಾರಿಗಳನ್ನು ನೇಮಕ ಮಾಡಿದ್ದಾರೆ. ಉಮಾಮಹದೇವನ್ ಹಾಗೂ ಗೌರವ್ ಗುಪ್ತಾ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ನಮ್ಮ ಉದ್ದೇಶವೇನೆಂದರೆ ರಾಜ್ಯದಲ್ಲಿ ಸಾವಿರಾರು ಸಂಖ್ಯೆಯಲ್ಲಿ ನಿರುದ್ಯೋಗಿ ಯುವಕರಿದ್ದಾರೆ. ಅವರೆಲ್ಲರೂ ಹಲವು ಸಂದರ್ಭಗಳಲ್ಲಿ ಬೀದಿಗಿಳಿದು ನೇಮಕಾತಿಗಾಗಿ ಹೋರಾಟ ನಡೆಸಿದ್ದಾರೆ. ಹಾಗಾಗಿ ನಾವು ತಕ್ಷಣ 72,000 ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಹಳೆಯ ಬಿಬಿಎಂಪಿಗೂ ಹೊಸ ಜಿಬಿಎಗೂ ಇರುವ ವ್ಯತ್ಯಾಸವೇನು? ಇಲ್ಲಿದೆ ತಿಳಿದುಕೊಳ್ಳಬೇಕಾದ ಮಾಹಿತಿBREAKING: ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಜಂಗಲ್ ಸಫಾರಿಗೆ ರಾಜ್ಯ ಸರ್ಕಾರ ನಿರ್ಧಾರBIG NEWS: ಭೈರಮಂಗಲದಲ್ಲಿ ಸಿಎಂಗಾಗಿ ಕಾಯುತ್ತೇನೆ: ನಾವೇನು ಗಲಾಟೆ ಮಾಡಿಸಲು ಹೋಗುತ್ತಿಲ್ಲ; ರೈತರ ಪರ ದನಿ ಎತ್ತಲು ಹೋಗುತ್ತಿದ್ದೇನೆ ಎಂದ ಕುಮಾರಸ್ವಾಮಿಭಾರತದ ಮೇಲೂ ಪ್ರಭಾವ ಬೀರಲಿದೆ ದೂರದ ವೆನೆಜುವೆಲಾದಲ್ಲಿ ಸಂಭವಿಸಿದ ಭೂಕಂಪ!BIG NEWS: ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ದೇಣಿಗೆ ಕಳ್ಳತನ ಹಗರಣ: ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸೇರಿ ಇಬ್ಬರು ರಾಜೀನಾಮೆBIG NEWS : ರಾಜ್ಯದ ರೈತರೇ ಗಮನಿಸಿ ; ಕೃಷಿ ಇಲಾಖೆಯಿಂದ ಸಿಗುವ ಎಲ್ಲಾ ಯೋಜನೆಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.!72,000 ಹುದ್ದೆಗಳ ನೇಮಕಾತಿಗೆ ಇಲಾಖೆಗಳಿಗೆ ನೋಟಿಫಿಕೇಷನ್: ಸ್ಪಷ್ಟನೆ ನೀಡಿದ ಡಿಸಿಎಂ ಪರಮೇಶ್ವರ್JOB ALERT : ಅಂಗನವಾಡಿ ಕಂ-ಕ್ರಷ್ ಕೇಂದ್ರಗಳ ಹುದ್ದೆಗಳಿಗೆ ಆಫ್‌ಲೈನ್ ಅರ್ಜಿ ಆಹ್ವಾನBIG NEWS : ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆ , ಪ್ರಸಾರಕ್ಕೆ ಅಲ್ಲ’ ; ಖಾಸಗಿ ವಿಡಿಯೋ ಹಂಚಿದರೆ ಕಡ್ಡಾಯ FIR.!CBSE ಶಾಲೆಗಳಲ್ಲಿ ತ್ರಿಭಾಷಾ ನೀತಿ ಗೊಂದಲಗಳಿಗೆ ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್ ತೆರೆ: ನಿಯಮ 6ನೇ ತರಗತಿಯ ಹೊಸ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯ