LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ALERT : ಕಾಂಟ್ರಾಕ್ಟರ್ ಮನೆಯಲ್ಲಿ ಕೆಲಸಕ್ಕೆ ಸೇರಿ 25 ಲಕ್ಷ ರೂ. ಕಳ್ಳತನ ; ಬೆಂಗಳೂರಲ್ಲಿ ಖತರ್ನಾಕ್ ದಂಪತಿ ಅರೆಸ್ಟ್..!

ಬೆಂಗಳೂರು : ಅಮೃತಹಳ್ಳಿಯಲ್ಲಿರುವ ಕಾಂಟ್ರಾಕ್ಟರ್ ಒಬ್ಬರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ನೇಪಾಳ ಮೂಲದ ದಂಪತಿ 25 ಲಕ್ಷ ರೂಪಾಯಿ ನಗದು ಕಳ್ಳತನ ಮಾಡಿ ಪರಾರಿಯಾಗಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಅಮೃತಹಳ್ಳಿ ಪೊಲೀಸರು ಆರೋಪಿಗಳನ್ನು ಬಂಧಿಸಿ, ಕದ್ದಿದ್ದ ಸಂಪೂರ್ಣ ಹಣವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಪವನ್ ಬಿಸ್ತಾ ಮತ್ತು ಸೀತಾ ಬಿಸ್ತಾ ಎಂದು ಗುರುತಿಸಲಾಗಿದೆ. ಇವರು ಮೂಲತಃ ನೇಪಾಳದವರಾಗಿದ್ದು, ಸುಮಾರು ಒಂದು ತಿಂಗಳ ಹಿಂದೆಯಷ್ಟೇ ಮನೆಯ ಕೆಲಸಕ್ಕಾಗಿ ಕಾಂಟ್ರಾಕ್ಟರ್ ಅವರ ಮನೆಯಲ್ಲಿ ಕೆಲಸಕ್ಕೆ ಸೇರಿದ್ದರು.

ಪೊಲೀಸರ ಮಾಹಿತಿ ಪ್ರಕಾರ, ಉದ್ಯಮಿ ತಮ್ಮ ಕೆಲಸಗಾರರಿಗೆ ಸಂಬಳ ನೀಡುವ ಉದ್ದೇಶದಿಂದ ಬ್ಯಾಂಕ್‌ನಿಂದ 25 ಲಕ್ಷ ರೂಪಾಯಿ ನಗದು ಡ್ರಾ ಮಾಡಿ ಮನೆಯ ಕಪಾಟಿನಲ್ಲಿ ಇಟ್ಟಿದ್ದರು. ಈ ವಿಷಯವನ್ನು ಗಮನಿಸಿದ್ದ ದಂಪತಿ, ಹಣವನ್ನು ಕಳವು ಮಾಡುವ ಸಂಚು ರೂಪಿಸಿ, ಸೂಕ್ತ ಸಮಯದಲ್ಲಿ ನಗದನ್ನು ಕದ್ದು ಪರಾರಿಯಾಗಲು ಯತ್ನಿಸಿದ್ದರು.

ತನಿಖೆಯಲ್ಲಿ ಆರೋಪಿಗಳು ಮನೆಗೆ ಕೆಲಸಕ್ಕೆ ಸೇರುವ ಮೊದಲೇ ಕಳ್ಳತನದ ಉದ್ದೇಶ ಹೊಂದಿದ್ದರೆಂಬ ಶಂಕೆ ವ್ಯಕ್ತವಾಗಿದ್ದು, ಮನೆಯಲ್ಲಿನ ಹಣದ ವ್ಯವಹಾರ ಹಾಗೂ ನಗದು ಇಡುವ ಸ್ಥಳದ ಕುರಿತು ಮಾಹಿತಿ ಸಂಗ್ರಹಿಸಿ ಕೃತ್ಯ ಎಸಗಿರುವುದು ತಿಳಿದುಬಂದಿದೆ.

ಪ್ರಕರಣ ಬೆಳಕಿಗೆ ಬಂದ ತಕ್ಷಣ ಕಾರ್ಯಪ್ರವೃತ್ತರಾದ ಅಮೃತಹಳ್ಳಿ ಪೊಲೀಸರು, ಆರೋಪಿಗಳು ಬೆಂಗಳೂರು ತೊರೆಯುವ ಮುನ್ನವೇ ಅವರನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಅಲ್ಲದೆ, ಕಳುವಾಗಿದ್ದ 25 ಲಕ್ಷ ರೂಪಾಯಿ ನಗದನ್ನು ಸಂಪೂರ್ಣವಾಗಿ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ