LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ARTO ನಿವಾಸದ ಮೇಲೆ ವಿಜಿಲೆನ್ಸ್ ಅಧಿಕಾರಿಗಳ ದಾಳಿ: 13 ಕೆಜಿ ಚಿನ್ನ, 9 ಕೆಜಿ ಬೆಳ್ಳಿ, ವಜ್ರದ ಆಭರಣ ಪತ್ತೆ; ಬರೋಬ್ಬರಿ 20 ಕೋಟಿ ಮೌಲ್ಯದ ಆಭರಣ ಕಂಡು ದಂಗಾದ ಅಧಿಕಾರಿಗಳು

ಲಕ್ನೋ: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ (ARTO) ನಿವಾಸದ ಮೇಲೆ ವಿಜಿಲೆನ್ಸ್ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಪತ್ತೆಯಾದ 20 ಕೋಟಿ ಮೌಲ್ಯದ ಚಿನ್ನಾಭರಣ ಕಂಡು ಅಧಿಕಾರಿಗಳೇ ಶಾಕ್ ಆಗಿದ್ದಾರೆ.

ಎಆರ್ ಟಿಒ ಅಧಿಕಾರಿ ಲಲಿತ್ ಕುಮಾರ್ ಲಕ್ನೋ ನಿವಾಸದ ಮೇಲೆ ವಿಜಿಲೆನ್ಸ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ನಿವೃತ್ತ ಅಧಿಕಾರಿ ಬಳಿ ಸಿಕ್ಕ ಆಸ್ತಿ ಅಧಿಕಾರಿಗಳನ್ನು ದಂಘಾಗುವಂತೆ ಮಾಡಿದೆ.

ಸುಮಾರು 26 ಗಂಟೆಗಳ ಕಾಲ ನಡೆದ ಶೋಧ ಕಾರ್ಯಾಚರಣೆ ಬಳಿಕ ಲಲಿತ್‌ ಮನೆಯಿಂದ 13 ಕೆಜಿ ಚಿನ್ನ, 9 ಕೆಜಿ ಬೆಳ್ಳಿ ಮತ್ತು ವಜ್ರದ ಆಭರಣಗಳು ಸೇರಿ 20 ಕೋಟಿ ಮೌಲ್ಯದ ಆಭರಣಗಳನ್ನು ವಶಪಡಿಕೊಂಡಿದ್ದಾರೆ. ಜೊತೆಗೆ ಮನೆಗಳು, ಫ್ಲಾಟ್‌ಗಳು ಮತ್ತು ಕೃಷಿ ಭೂಮಿ ಸೇರಿದಂತೆ 15 ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿವೆ. ವಿಜಿಲೆನ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಆಸ್ತಿಗಳ ಒಟ್ಟು ಮೌಲ್ಯ ಸುಮಾರು 35 ಕೋಟಿ ರೂ. ಎಂದು ಅಂದಾಜಿಸಿದ್ದಾರೆ.

ಲಲಿತ್ ಕುಮಾರ್ ಉತ್ತರ ಪ್ರದೇಶದ ಸಾರಿಗೆ ಇಲಾಖೆಯಲ್ಲಿ ಎಆರ್‌ಟಿಒ (ARTO) ಆಗಿ ಕೆಲಸ ನಿರ್ವಹಿಸಿ ನಿವೃತ್ತರಾಗಿದ್ದರು. ಕಾನ್ಪುರದಲ್ಲಿ ಎಆರ್‌ಟಿಒ ಆಗಿದ್ದಾಗ ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ ದಾಖಲಾಗಿತ್ತು. 2020 ರ ಸೆಪ್ಟೆಂಬರ್ 11 ರಂದು ಭ್ರಷ್ಟಾಚಾರ ನಿಗ್ರಹ ಸಂಸ್ಥೆಗೆ ಈ ಪ್ರಕರಣದ ಕುರಿತು ಲಲಿತ್ ಕುಮಾರ್ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡಿತ್ತು. ಕಾನ್ಪುರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಲಲಿತ್ ಕುಮಾರ್ ಅಕ್ರಮವಾಗಿ 93.26 ಲಕ್ಷ ರೂ. ಆದಾಯ ಗಳಿಸಿದ್ದಾರೆ ಎಂದು ವಿಜಿಲೆನ್ಸ್ ತನಿಖೆಯಿಂದ ತಿಳಿದುಬಂದಿತ್ತು.

ಲಲಿತ್ ಕುಮಾರ್ ಅವರು ಸ್ಥಿರಾಸ್ತಿ ಮತ್ತು ಚರಾಸ್ತಿ ಮತ್ತು ನಿರ್ವಹಣೆಗಾಗಿ 1.61 ಕೋಟಿ ರೂ. ಖರ್ಚು ಮಾಡಿದ್ದಾರೆ. ಆದಾಯಕ್ಕಿಂತ 68.66 ಲಕ್ಷರೂ. ಖರ್ಚು ಮಾಡಲಾಗಿದೆ ಎಂದು ವಿಜೆಲೆನ್ಸ್‌ ಗಮನಿಸಿತ್ತು. ಇದೇ ವೇಳೆ 2022 ರ ಜೂನ್‌ನಲ್ಲಿ ಆಗ್ರಾದಲ್ಲಿ ARTO ಆಗಿ ನೇಮಿಸಿದ್ದಾಗಲೂ ಲಲಿತ್‌ ಲಲಿತ್‌ ಅಕ್ರಮ ನಡೆಸಿದ್ದಾರೆ ಅನ್ನೋದು ಬೆಳಕಿಗೆ ಬಂದಿದೆ.

ಜುಲೈ 7 ಮತ್ತು 8 ರಂದು ಅಲಿಗಂಜ್‌ನ ಚಂದ್ರಲೋಕ್ ಕಾಲೋನಿಯಲ್ಲಿರುವ ಲಲಿತ್‌ ಅವರ ಸಿ-143 ನಿವಾಸದ ಮೇಲೆ ವಿಜಿಲೆನ್ಸ್ ತಂಡವು ದಾಳಿ ನಡೆಸಿತು. ಸುಮಾರು 26 ಗಂಟೆಗಳ ಕಾಲ ಶೋಧ ನಡೆಸಲಾಯಿತು. ಈ ವೇಳೆ ಪ್ಯಾಕೆಟ್‌ ಮಾಡಿ ಮನೆಯ ಗೋಡೆ ಸೇರಿದಂತೆ ಹಲವು ಕಡೆಗಳಲ್ಲಿ ಬಚ್ಚಿಟ್ಟಿದ್ದ 1.62 ಕೋಟಿ ನಗದು ಹಣ ಪತ್ತೆಯಾಗಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ, ವಜ್ರದ ಆಭರಣಗಳೂ ಪತ್ತೆಯಾಗಿವೆ.

ಶೋಧದ ಸಮಯದಲ್ಲಿ, ವಿಜಿಲೆನ್ಸ್ ಒಂದು ಟೊಯೋಟಾ ಇನ್ನೋವಾ ಮತ್ತು ಹುಂಡೈ ಐ20 ಕಾರು, ಒಂದು ರಿವಾಲ್ವರ್ ಜೊತೆಗೆ 1 ಕೋಟಿಗೂ ಹೆಚ್ಚು ಹೂಡಿಕೆ ದಾಖಲೆಗಳನ್ನೂ ಪತ್ತೆಹಚ್ಚಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ