LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG ALERT : ರಾಜ್ಯದ ಜನತೆ ಗಮನಕ್ಕೆ ; ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಭವಿಷ್ಯದಲ್ಲಿ ಸರ್ಕಾರಿ ಸೌಲಭ್ಯಕ್ಕೂ ಕತ್ತರಿ ?

ಬೆಂಗಳೂರು : ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಮಂಗಳವಾರದಿಂದ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತದಾರರಿಗೆ ಮಹತ್ವದ ಎಚ್ಚರಿಕೆ ನೀಡಿದ್ದಾರೆ. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಪ್ರತಿಯೊಬ್ಬರೂ ಖಚಿತಪಡಿಸಿಕೊಳ್ಳಬೇಕು. ಇಲ್ಲವಾದರೆ ಮತದಾನದ ಹಕ್ಕಿನ ಜೊತೆಗೆ ಸರ್ಕಾರಿ ಸೌಲಭ್ಯಗಳನ್ನೂ ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

“ಮತದಾನದ ಹಕ್ಕು ಎಂದರೆ ಬದುಕುವ ಹಕ್ಕು” ಎಂದು ಹೇಳಿದ ಡಿ.ಕೆ. ಶಿವಕುಮಾರ್, ಪಶ್ಚಿಮ ಬಂಗಾಳದಲ್ಲಿ ಎಸ್ಐಆರ್ ಪ್ರಕ್ರಿಯೆಯ ಆಧಾರದ ಮೇಲೆ ಅನರ್ಹ ಪಡಿತರ ಚೀಟಿದಾರರನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗಿದೆ. ಇತರ ರಾಜ್ಯಗಳಲ್ಲಿಯೂ ಇದೇ ರೀತಿಯ ಕ್ರಮಗಳು ನಡೆಯುತ್ತಿವೆ. ಆದ್ದರಿಂದ ಮತದಾರರ ಪಟ್ಟಿಯಲ್ಲಿ ಹೆಸರು ಉಳಿಯುವುದು ಅತ್ಯಂತ ಮುಖ್ಯ ಎಂದು ತಿಳಿಸಿದರು.

ಜುಲೈ 29ರವರೆಗೆ ಮನೆ ಮನೆ ಸಮೀಕ್ಷೆ
ರಾಜ್ಯ ಚುನಾವಣಾ ಆಯೋಗದ ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ಪ್ರಕ್ರಿಯೆ ಜುಲೈ 29ರವರೆಗೆ ನಡೆಯಲಿದೆ. ಈ ಅಭಿಯಾನದಲ್ಲಿ ರಾಜ್ಯದ 5.5 ಕೋಟಿಗೂ ಹೆಚ್ಚು ಮತದಾರರನ್ನು ಒಳಗೊಳ್ಳಲಾಗುತ್ತಿದೆ.

ಶಾಶ್ವತ ನಿವಾಸ ಪ್ರಮಾಣಪತ್ರಕ್ಕೆ ಅವಕಾಶ
ಎಸ್ಐಆರ್ ಪ್ರಕ್ರಿಯೆಗೆ ನೆರವಾಗಲು ರಾಜ್ಯ ಸರ್ಕಾರ ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲು ತೀರ್ಮಾನಿಸಿದೆ. ಈ ಪ್ರಮಾಣಪತ್ರವನ್ನು ನಿವಾಸದ ಸಾಕ್ಷ್ಯವಾಗಿ ಬಳಸಬಹುದು.ನಾಗರಿಕರು ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಅಥವಾ ಅಟಲ್ ಜನಸ್ನೇಹಿ ಕೇಂದ್ರ, ನಾಡಕಚೇರಿ, ಬೆಂಗಳೂರು ಒನ್, ಕರ್ನಾಟಕ ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳಲ್ಲಿ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

59 ಸಾವಿರಕ್ಕೂ ಹೆಚ್ಚು ಬಿಎಲ್ಒಗಳ ನಿಯೋಜನೆ
ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರ ಮಾಹಿತಿ ಪ್ರಕಾರ, ರಾಜ್ಯದಾದ್ಯಂತ 59,050 ಬೂತ್ ಮಟ್ಟದ ಅಧಿಕಾರಿಗಳು (BLOs), 7,556 ಮೇಲ್ವಿಚಾರಕರು, 224 ಚುನಾವಣಾ ನೋಂದಣಿ ಅಧಿಕಾರಿಗಳು ಹಾಗೂ 336 ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳನ್ನು ಈ ಕಾರ್ಯಕ್ಕೆ ನಿಯೋಜಿಸಲಾಗಿದೆ. ಜೊತೆಗೆ ರಾಜಕೀಯ ಪಕ್ಷಗಳು ನೇಮಿಸಿರುವ 1.1 ಲಕ್ಷಕ್ಕೂ ಹೆಚ್ಚು ಬೂತ್ ಮಟ್ಟದ ಏಜೆಂಟರಿಗೆ ತರಬೇತಿ ನೀಡಲಾಗಿದೆ.

ಹೀಗೆ ನಡೆಯಲಿದೆ ಮಾಹಿತಿ ಸಂಗ್ರಹ
ಜೂನ್ 16, 2026ರ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವ ಪ್ರತಿಯೊಬ್ಬರ ಮನೆಗೆ ಬಿಎಲ್ಒಗಳು ಭೇಟಿ ನೀಡಿ ಎನ್ಯುಮರೇಷನ್ ಫಾರ್ಮ್ ವಿತರಿಸಲಿದ್ದಾರೆ.
• ಫಾರ್ಮ್ ನೀಡಿದ ಮನೆಗಳಿಗೆ ನೇರಳೆ ಬಣ್ಣದ ಚೌಕಾಕಾರದ ಸ್ಟಿಕ್ಕರ್ ಅಂಟಿಸಲಾಗುತ್ತದೆ.
• ಮನೆ ಬೀಗ ಹಾಕಿದ್ದರೆ ಕೆಂಪು ಬಣ್ಣದ ವೃತ್ತಾಕಾರದ ಸ್ಟಿಕ್ಕರ್ ಅಂಟಿಸಲಾಗುತ್ತದೆ.
• ಅಗತ್ಯವಿದ್ದರೆ ಭರ್ತಿ ಮಾಡಿದ ಫಾರ್ಮ್ ಪಡೆಯಲು ಮೂರು ಬಾರಿ ಭೇಟಿ ನೀಡಲಾಗುತ್ತದೆ.

ದಾಖಲೆಗಳನ್ನು ಸಂಗ್ರಹಿಸುವುದಿಲ್ಲ
ಚುನಾವಣಾ ಆಯೋಗದ ಸ್ಪಷ್ಟೀಕರಣದಂತೆ, ಈ ಹಂತದಲ್ಲಿ ಯಾವುದೇ ದಾಖಲೆಗಳನ್ನು ಸಂಗ್ರಹಿಸಲಾಗುವುದಿಲ್ಲ. ಮತದಾರರು ಫಾರ್ಮ್ ಸ್ವೀಕರಿಸಿ, ಭರ್ತಿ ಮಾಡಿ, ಸಹಿ ಮಾಡಿ ಬಿಎಲ್ಒಗಳಿಗೆ ಹಿಂತಿರುಗಿಸಿದರೆ ಸಾಕು ಎಂದು ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ತಿಳಿಸಿದ್ದಾರೆ.ಅಲ್ಲದೆ, ಸಂಪೂರ್ಣ ಪ್ರಕ್ರಿಯೆ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿ ಹಾಗೂ ಕಾನೂನುಬದ್ಧವಾಗಿ ನಡೆಯಲಿದ್ದು, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಅವರು ಮನವಿ ಮಾಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
CWRC ನೀಡಿರುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು: ರಾಜ್ಯದ ರೈತರ ಹಿತ ಕಾಯಲು ಸರ್ಕರ ಬದ್ಧ: ಸಚಿವ ರಾಮಲಿಂಗಾರೆಡ್ಡಿBIG NEWS: ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ; ಆದರೂ ಡಿ.ಕೆ.ಶಿವಕುಮಾರ್ ತಮಿಳುನಾಡು ಸಿಎಂ ಅವರನ್ನು ಸಂಧಾನಕ್ಕೆ ಆಹ್ವಾನಿಸಿದ್ದೇಕೆ? ಆರ್.ಅಶೋಕ್ ಪ್ರಶ್ನೆಮಾಜಿ ಸಿಎಂ ಜೆ.ಹೆಚ್. ಪಟೇಲ್ ಬೆಂಬಲಿಗರಾಗಿದ್ದ ಪಿ. ಶೇಖರಪ್ಪ ನಿಧನSHOCKING : ಲವರ್ ಜೊತೆ ಮಾತನಾಡಲು ಅಡ್ಡಿ ; ಅಳುತ್ತಿದ್ದ 3 ವರ್ಷದ ಮಗನನ್ನೇ ಕೊಂದ ಪಾಪಿ ತಾಯಿ.!ಸ್ವಾತಂತ್ರೋತ್ಸವ ಫಲಪುಷ್ಪ ಪ್ರದರ್ಶನ : ಲಾಲ್‌ಬಾಗ್‌ನಲ್ಲಿ ವಿವಿಧ ಸ್ಪರ್ಧೆ, ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಮಾಹಿತಿ ನೀಡಿದವರೇ ಅರೆಸ್ಟ್: ಹೈಕೋರ್ಟ್ ತರಾಟೆಜಲಾಶಯದ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಬಳಸಿBIG NEWS : ಸೈಬರ್ ಅಪರಾಧಗಳಿಗೆ ಮರಣದಂಡನೆ ; ಸಂಸತ್ತಿನಲ್ಲಿ ಮಹತ್ವದ ಮಸೂದೆ ಅಂಗೀಕಾರBREAKING : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉದ್ವಿಗ್ನತೆ ; ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ 20 ಮಂದಿ ಸಾವುಪೊಲೀಸ್ ನೇಮಕಾತಿ ಪರೀಕ್ಷೆ: ವಸ್ತ್ರಸಂಹಿತೆ, ನಿಷೇಧಿತ ವಸ್ತುಗಳು ಸೇರಿ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಸೂಚನೆ