LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS : ಬೆಂಗಳೂರಿನಲ್ಲಿ ಅನಾಥ ವಾಹನಗಳ ವಿರುದ್ಧ ಕಠಿಣ ಕ್ರಮ ; ಜುಲೈ 10ರಿಂದ ತೆರವು ಕಾರ್ಯಾಚರಣೆ ಆರಂಭ

ಬೆಂಗಳೂರು :    ಬೆಂಗಳೂರು ನಗರದ ರಸ್ತೆ, ಸಾರ್ವಜನಿಕ ಸ್ಥಳಗಳು ಹಾಗೂ ಖಾಲಿ ಪ್ರದೇಶಗಳಲ್ಲಿ ಅನಾಥವಾಗಿ ಬಿಟ್ಟಿರುವ ವಾಹನಗಳ ವಿರುದ್ಧ ಗ್ರೀಟರ್ ಬೆಂಗಳೂರು ಪ್ರಾಧಿಕಾರ (GBA) ಕಠಿಣ ಕ್ರಮಕ್ಕೆ ಮುಂದಾಗಿದೆ. ಗ್ರೀಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ನಿರ್ದೇಶನದಂತೆ, ಜಿಬಿಎ ಕಾಯ್ದೆ-2024ರ ಸೆಕ್ಷನ್ 324ರ ಅನ್ವಯ ಜುಲೈ 10ರಿಂದ ಐದು ನಗರ ಪಾಲಿಕೆಗಳು ಮತ್ತು ಸಂಚಾರ ಪೊಲೀಸರು ಜಂಟಿಯಾಗಿ ಅನಾಥ ವಾಹನಗಳ ತೆರವು ಕಾರ್ಯಾಚರಣೆ ಆರಂಭಿಸಲಿದ್ದಾರೆ.

ನಗರದ ರಸ್ತೆ, ಸಾರ್ವಜನಿಕ ಸ್ಥಳಗಳು ಮತ್ತು ತೆರೆದ ಪ್ರದೇಶಗಳಲ್ಲಿ ಹಲವು ದಿನಗಳಿಂದ ನಿಲ್ಲಿಸಲಾಗಿರುವ ಅನಾಥ ವಾಹನಗಳನ್ನು ಗುರುತಿಸಿ, ನಿಯಮಾನುಸಾರ ತೆರವುಗೊಳಿಸಿ ಹರಾಜು ಹಾಕುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ವಾಹನಗಳಿಂದ ಸಂಚಾರ ದಟ್ಟಣೆ, ಸಾರ್ವಜನಿಕರಿಗೆ ತೊಂದರೆ ಹಾಗೂ ಸ್ವಚ್ಛತೆಗೆ ಉಂಟಾಗುತ್ತಿರುವ ಸಮಸ್ಯೆಗಳನ್ನು ನಿವಾರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಯಾವ ಕ್ರಮ ಕೈಗೊಳ್ಳಲಾಗುತ್ತದೆ?

  • ಗುರುತಿಸಲಾದ ಅನಾಥ ವಾಹನಗಳಿಗೆ 7 ದಿನಗಳ ಕಾಲಾವಕಾಶ ನೀಡಿ ಅಧಿಕೃತ ಸ್ಟಿಕ್ಕರ್ ಮಾದರಿಯ ನೋಟಿಸ್ ಅಂಟಿಸಲಾಗುತ್ತದೆ.
  • ನೋಟಿಸ್ ಅಂಟಿಸಿದ ವಾಹನಗಳ ಚಕ್ರಗಳಿಗೆ ವೀಲ್ ಕ್ಲ್ಯಾಂಪ್ ಅಳವಡಿಸಲಾಗುತ್ತದೆ.
  • 7 ದಿನಗಳೊಳಗೆ ವಾಹನ ಮಾಲೀಕರು ವಾಹನವನ್ನು ತೆರವುಗೊಳಿಸದಿದ್ದರೆ, ಟೋಯಿಂಗ್ ಮೂಲಕ ವಾಹನವನ್ನು ಜಪ್ತಿ ಮಾಡಲಾಗುತ್ತದೆ.
  • ಜಪ್ತಿ ಮಾಡಿದ ವಾಹನಗಳನ್ನು ನಿಯಮಾನುಸಾರ ಬಹಿರಂಗ ಹರಾಜು ಮಾಡಲಾಗುತ್ತದೆ.

ಸಾರ್ವಜನಿಕರಿಗೆ ಮನವಿ

ರಸ್ತೆ, ಸಾರ್ವಜನಿಕ ಸ್ಥಳ ಅಥವಾ ಖಾಲಿ ಜಾಗಗಳಲ್ಲಿ ನಿಮ್ಮ ಯಾವುದೇ ವಾಹನವನ್ನು ದೀರ್ಘಕಾಲದಿಂದ ಬಿಟ್ಟು ಹೋಗಿದ್ದರೆ, ತಕ್ಷಣವೇ ಅದನ್ನು ನಿಮ್ಮ ಸ್ವಂತ ಜಾಗಕ್ಕೆ ಸ್ಥಳಾಂತರಿಸಿಕೊಳ್ಳುವಂತೆ ಗ್ರೀಟರ್ ಬೆಂಗಳೂರು ಪ್ರಾಧಿಕಾರ ಮನವಿ ಮಾಡಿದೆ. ಸೂಚನೆಯನ್ನು ಪಾಲಿಸದಿದ್ದರೆ ವಾಹನವನ್ನು ಜಪ್ತಿ ಮಾಡಿ ಹರಾಜು ಹಾಕಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ