LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS : ಉತ್ತರ ಪ್ರದೇಶದಲ್ಲಿ ಭೀಕರ ಗಾಳಿಮಳೆ : 111 ಮಂದಿ ಸಾವು

ಉತ್ತರ ಪ್ರದೇಶ : ಕಳೆದ ಎರಡು ದಿನಗಳಿಂದ ಉತ್ತರ ಪ್ರದೇಶದಲ್ಲಿ ಬೀಸುತ್ತಿರುವ ಭೀಕರ ಗಾಳಿ ಮತ್ತು ಮಳೆಗೆ ರಾಜ್ಯಾದ್ಯಂತ ಬರೋಬ್ಬರಿ 111 ಜನರು ಬಲಿಯಾಗಿದ್ದಾರೆ. ಈ ನೈಸರ್ಗಿಕ ವಿಕೋಪದಿಂದ ಸಾವಿರಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ.

ಮೃತರ ಸಂಖ್ಯೆ 111ಕ್ಕೆ ಏರಿಕೆಯಾಗಿದ್ದು, 75ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅಲ್ಲದೆ, 150ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ.ಸಂಭಲ್ ಮತ್ತು ಉನ್ನಾವೋ ಸೇರಿದಂತೆ ಒಟ್ಟು 19 ಜಿಲ್ಲೆಗಳಲ್ಲಿ ಚಂಡಮಾರುತದಂತಹ ಗಾಳಿ ತೀವ್ರ ಹಾನಿ ಉಂಟುಮಾಡಿದೆ.ನೂರಾರು ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಇದರಿಂದಾಗಿ ಹಲವು ಭಾಗಗಳಲ್ಲಿ ಸಂಚಾರ ಮತ್ತು ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಅನೇಕ ಮನೆಗಳ ಗೋಡೆಗಳು ಮತ್ತು ಮೇಲ್ಛಾವಣಿಗಳು ಕುಸಿದಿವೆ.

ಮುಖ್ಯಮಂತ್ರಿಗಳ ಸೂಚನೆ

ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜಿಲ್ಲಾಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ್ದಾರೆ. ಪ್ರತಿ ಮೂರು ಗಂಟೆಗೊಮ್ಮೆ ಹಾನಿಯ ವರದಿ ನೀಡುವಂತೆ ಮತ್ತು ಬಾಧಿತ ಕುಟುಂಬಗಳಿಗೆ ತಕ್ಷಣವೇ ಪರಿಹಾರ ನಿಧಿಯನ್ನು ವಿತರಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.

ಪವಾಡ ಸದೃಶವಾಗಿ ಬದುಕುಳಿದ ಇ-ರಿಕ್ಷಾಚಾಲಕ!

ಈ ಭೀಕರ ಚಂಡಮಾರುತದ ನಡುವೆ ಬರೇಲಿಯಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ಬರೇಲಿಯ ಬಾಮಿಯಾನ್ ನಿವಾಸಿ, 50 ವರ್ಷದ ನನ್ಹೆ ಎಂಬ ಇ-ರಿಕ್ಷಾ ಚಾಲಕ ಗಾಳಿಯ ಹೊಡೆತಕ್ಕೆ ಸಿಲುಕಿ ಬರೋಬ್ಬರಿ 50 ಅಡಿ ಎತ್ತರಕ್ಕೆ ಹಾರಿದರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಡೆದಿದ್ದೇನು ?

ನಿನ್ನೆ ಅವರು ಮದುವೆ ಸಮಾರಂಭವೊಂದಕ್ಕೆ ತೆರಳುತ್ತಿದ್ದಾಗ ಇದ್ದಕ್ಕಿದ್ದಂತೆ ಬಿರುಗಾಳಿ ಆರಂಭವಾಗಿದೆ. ಮಳೆಯಿಂದ ರಕ್ಷಿಸಿಕೊಳ್ಳಲು ಅವರು ರಸ್ತೆಯ ಪಕ್ಕದಲ್ಲಿದ್ದ ಟಿನ್ ಶೆಡ್ ಅಡಿಯಲ್ಲಿ ನಿಂತಿದ್ದರು. ಶೆಡ್ ಗಾಳಿಗೆ ಹಾರಿಹೋಗದಂತೆ ಅವರು ಅದನ್ನು ಕಟ್ಟಿದ್ದ ಹಗ್ಗವನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದರು. ಆದರೆ ಗಾಳಿಯ ವೇಗ ಎಷ್ಟಿತ್ತೆಂದರೆ, ಇಡೀ ಟಿನ್ ಶೆಡ್‌ನೊಂದಿಗೆ ನನ್ಹೆ ಅವರೂ ಸಹ 50 ಅಡಿ ಎತ್ತರಕ್ಕೆ ಹಾರಿದ್ದಾರೆ! ಕೆಲವು ಕ್ಷಣಗಳ ನಂತರ ಅವರು ಸಮೀಪದ ಹೊಲವೊಂದರಲ್ಲಿ ಬಿದ್ದಿದ್ದಾರೆ. ಅದೃಷ್ಟವಶಾತ್ ಅವರು ಬದುಕುಳಿದಿದ್ದು, ಎರಡು ಕಡೆ ಮೂಳೆ ಮುರಿತದ (Fracture) ಗಾಯಗಳಾಗಿವೆ. ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನ ಇದನ್ನು “ದೈವ ಪವಾಡ” ಎಂದು ಕರೆಯುತ್ತಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಸಿದ್ಧರಾಮಯ್ಯ ಮುನಿಸಿನಿಂದ ಕೈತಪ್ಪಿದ ಸಚಿವ ಸ್ಥಾನ..? ಮನವೊಲಿಸಲು ಜಮೀರ್ ಅಹ್ಮದ್ ಕಸರತ್ತುಇಸ್ರೇಲ್, ಅಮೆರಿಕ ದಾಳಿಯಲ್ಲಿ ಮೃತಪಟ್ಟ 131 ದಿನಗಳ ನಂತರ ಜು. 9ರಂದು ಇರಾನ್ ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆSHOCKING: ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ವಿಷಕಾರಿ ಅನಿಲ ಸೇವಿಸಿ ನಾಲ್ವರು ಸಾವುವಿವಾಹಿತೆಗೆ ಮತ್ತು ಬರುವ ಪಾನೀಯ ಕುಡಿಸಿ ರೇಪ್, ಬೆತ್ತಲೆ ಚಿತ್ರ ಸೆರೆಹಿಡಿದು ಬ್ಲಾಕ್ ಮೇಲ್BREAKING: ಇನ್ನು ಯಾರೂ ಒಂದು ರೂಪಾಯಿ ಲಂಚ ಕೊಡಬೇಕಿಲ್ಲ: ಭ್ರಷ್ಟಾಚಾರ ಮುಕ್ತ ರಾಜ್ಯವಾಗಿಸಲು ಸಿಎಂ ಡಿಕೆ ಮಹತ್ವದ ಹೆಜ್ಜೆಶಿವಮೊಗ್ಗ: ಕೊಳೆತ ಸ್ಥಿತಿಯಲ್ಲಿ ಮಹಿಳೆ, ಸಾಕು ನಾಯಿ ಶವ ಪತ್ತೆಧರ್ಮಸ್ಥಳ ಬುರುಡೆ ಗ್ಯಾಂಗ್ ಪ್ರಕರಣ: ಚಿನ್ನಯ್ಯನ ಬ್ರೇನ್ ಮ್ಯಾಪಿಂಗ್ ಹಾಗೂ ರಿಟ್ ಅರ್ಜಿ ತನಿಖೆ ನಡೆಸುವಂತೆ SITಗೆ ಗಿರೀಶ್ ಮಟ್ಟಣ್ಣನವರ್ ದೂರುBREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಯೋಜನೆ ಸೌಲಭ್ಯ ಪಡೆಯಲು ಮತ್ತೆ ಅರ್ಜಿ ಸಲ್ಲಿಸಬೇಕು: ಸಿಎಂ ಡಿಕೆ ಮಾಹಿತಿದೇಶದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಕೋಟ್ಯಂತರ ರೂ ಅಕ್ರಮ ಫಂಡಿಂಗ್ ಆರೋಪ: ಕರ್ನಾಟಕದ ನಾಲ್ವರು ಸೇರಿ 7 ಜನರ ವಿರುದ್ಧ FIR ದಾಖಲುಸಂಬಳ ಪಡೆಯುವ ಪ್ರತಿಯೊಬ್ಬ ಉದ್ಯೋಗಿಯೂ  ತಿಳಿಯಲೇಬೇಕಾದ ಸೀಕ್ರೆಟ್ ಪಿಎಫ್ ಕಟ್ ಆದ್ರೆ ಸಿಗುತ್ತೆ ₹7 ಲಕ್ಷದ ಬಿಗ್ ಇನ್ಶೂರೆನ್ಸ್ ಬೆನಿಫಿಟ್