ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ (ಕೆಎಸ್ಆರ್ಟಿಸಿ) ನೌಕರರ ಟ್ರೇಡ್ ಯೂನಿಯನ್ ಜಂಟಿ ಕ್ರಿಯಾ ಸಮಿತಿ, ಮೇ 20ರಿಂದ ಕರೆ ನೀಡಿದ್ದ ಮುಷ್ಕರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ವೇತನ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ (ಕೆಎಸ್ಆರ್ಟಿಸಿ) ನೌಕರರ ಟ್ರೇಡ್ ಯೂನಿಯನ್ ಜಂಟಿ ಕ್ರಿಯಾ ಸಮಿತಿ ಮೇ 20ರಿಂದ ಕರೆ ನೀಡಿದ್ದ ಮುಷ್ಕರಕ್ಕೆ ಸಂಬಂಧಿಸಿದಂತೆ, ಹೈಕೋರ್ಟ್ ನಿಷೇಧದ ಮಧ್ಯಂತರ ಆದೇಶವನ್ನು ಜೂನ್ 23ರವರೆಗೆ ವಿಸ್ತರಿಸಿದೆ. ಸಾರಿಗೆಯು ಅತ್ಯಗತ್ಯ ಸೇವೆಯಾಗಿರುವುದರಿಂದ, ಮುಷ್ಕರ ನಡೆಸಲು ಕಾನೂನಿನಲ್ಲಿ ನೌಕರರಿಗೆ ಅವಕಾಶವಿದೆಯೇ ಎಂಬುದರ ಬಗ್ಗೆ ಅಡ್ವೊಕೇಟ್ ಜನರಲ್ ಅವರು ಜಂಟಿ ಕ್ರಿಯಾ ಸಮಿತಿಗೆ ಮೌಖಿಕವಾಗಿ ಪ್ರಶ್ನಿಸಿದ್ದಾರೆ.
ಸಾರಿಗೆ ಸೇವೆಯು ‘ಅತ್ಯಗತ್ಯ ಸೇವೆ’ಯ ವ್ಯಾಪ್ತಿಗೆ ಬರುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಕಾನೂನಾತ್ಮಕವಾಗಿ ಸಾರಿಗೆ ನಿಗಮದ ನೌಕರರಿಗೆ ಮುಷ್ಕರ ನಡೆಸಲು ಅವಕಾಶವಿದೆಯೇ? ಎಂಬ ಬಗ್ಗೆ ಅಡ್ವೊಕೇಟ್ ಜನರಲ್ ಅವರು ಜಂಟಿ ಕ್ರಿಯಾ ಸಮಿತಿಗೆ ಮೌಖಿಕವಾಗಿ ಪ್ರಶ್ನಿಸಿದ್ದಾರೆ.