LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS: ಗೃಹಲಕ್ಷ್ಮೀ ಯೋಜನೆಗೆ ಮೇಜರ್ ಸರ್ಜರಿ: 3.89 ಲಕ್ಷ ಅನರ್ಹ ಫಲಾನುಭವಿಗಳನ್ನು ಕೈಬಿಟ್ಟ ಸರ್ಕಾರ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ ಮೂಲಕ ಅನರ್ಹ ಫಲಾನುಭವಿಗಳಿಗೆ ಬಿಗ್ ಶಾಕ್ ನೀಡಿದೆ. ಯೋಜನೆಯ ದುರುಪಯೋಗ ಕಂಡು ಬಂದಿರುವ ಹಿನ್ನೆಲೆ ಪರಿಷ್ಕರಣೆ ನಡೆದಿದ್ದು, ಫಲಾನುಭವಿಗಳು ಮರು ಅರ್ಜಿ ಸಲ್ಲಿಸಬೇಕೆಂದು ಸ್ವತಃ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಪರಿಷ್ಕರಣೆ ಆರಂಭವಾದ ಬೆನ್ನಲ್ಲೇ 1.30 ಕೋಟಿ ಗೃಹಲಕ್ಷ್ಮಿಯರ ಪೈಕಿ 3.89 ಲಕ್ಷ ಅನರ್ಹ ಫಲಾನುಭವಿಗಳನ್ನು ಕೈಬಿಡಲಾಗಿದೆ. ಇವರು ಗೃಹಲಕ್ಷ್ಮೀ ಯೋಜನೆಗೆ ಅನರ್ಹ ಎಂದು ಗುರುತಿಸಲಾಗಿದೆ.

ವಿವಿಧ ಇಲಾಖೆಗಳ ಮಾಹಿತಿಯನ್ನು ಸಂಗ್ರಹಿಸಿ ಪರಿಶೀಲನೆ ನಡೆಸಿದ ಬಳಿಕ ಅನರ್ಹ ಫಲಾನುಭವಿಗಳನ್ನು ಗುರುತಿಸಿರುವ ಇಲಾಖೆ, ಅವರ ಖಾತೆಗಳಿಗೆ ಹಣ ವರ್ಗಾವಣೆ ಸ್ಥಗಿತಗೊಳಿಸಿದೆ. ಇಲಾಖೆಯ ಮಾಹಿತಿಯ ಪ್ರಕಾರ, ಆದಾಯ ತೆರಿಗೆ ಮತ್ತು GST ಪಾವತಿಸುವ 1.94 ಲಕ್ಷ ಮಂದಿಯನ್ನು ಯೋಜನೆಯಿಂದ ಹೊರಗಿಡಲಾಗಿದೆ. ಜೊತೆಗೆ, ಮೃತಪಟ್ಟ 1.95 ಲಕ್ಷ ಫಲಾನುಭವಿಗಳ ಹೆಸರಿನಲ್ಲಿದ್ದ ಖಾತೆಗಳಿಗೂ ಹಣ ಜಮೆಯಾಗುತ್ತಿರುವುದು ಪತ್ತೆಯಾಗಿದ್ದು, ಅಂತಹ ಖಾತೆಗಳಿಗೆ ಸಹ ಹಣ ವರ್ಗಾವಣೆ ಸ್ಥಗಿತಗೊಳಿಸಲಾಗಿದೆ.

ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಅನರ್ಹ ಫಲಾನುಭವಿಗಳ ಪೈಕಿ ಬೆಂಗಳೂರು ನಗರ ಜಿಲ್ಲೆ ಮೊದಲ ಸ್ಥಾನದಲ್ಲಿದ್ದು, 47,871 ಗೃಹಲಕ್ಷ್ಮಿಯರನ್ನ ಕೈಬಿಡಲಾಗಿದೆ. ತದನಂತರ ಬೆಳಗಾವಿ, ದಕ್ಷಿಣ ಕನ್ನಡ, ಮೈಸೂರು ಹಾಗೂ ತುಮಕೂರು ಜಿಲ್ಲೆ ಅನರ್ಹರ ಪರಿಷ್ಕರಣೆಯಲ್ಲಿ ಅಗ್ರ 5ರಲ್ಲಿ ಸ್ಥಾನ ಪಡೆದಿವೆ.

ಮಾರ್ಚ್ ತಿಂಗಳಲ್ಲೇ ಒಟ್ಟು 3.89 ಲಕ್ಷ ಅನರ್ಹ ಫಲಾನುಭವಿಗಳನ್ನು ಗುರುತಿಸಿರುವ ಇಲಾಖೆ, ವಿವಿಧ ಸರ್ಕಾರಿ ದತ್ತಾಂಶಗಳನ್ನು ಪರಸ್ಪರ ಹೊಂದಾಣಿಕೆ ಮಾಡಿ ಈ ಪರಿಷ್ಕರಣೆ ಕೈಗೊಂಡಿದೆ. ಅನರ್ಹರಿಗೆ ಹಣ ಪಾವತಿಯಾಗುವುದನ್ನು ತಡೆಯುವ ಉದ್ದೇಶದಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶೀಘ್ರದಲ್ಲೇ ಬಯೋಮೆಟ್ರಿಕ್ ದೃಢೀಕರಣ ವ್ಯವಸ್ಥೆ ಜಾರಿಗೆ ತರಲೂ ಸಿದ್ಧತೆ ನಡೆಸಿದೆ. ಈ ಕ್ರಮದಿಂದ ತಾಂತ್ರಿಕ ಲೋಪಗಳು ಮತ್ತು ನಕಲಿ ಫಲಾನುಭವಿಗಳ ಸಮಸ್ಯೆಯನ್ನು ನಿಯಂತ್ರಿಸಲು ಸಾಧ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಲಾಖೆಯ ಈ ಪರಿಷ್ಕರಣೆಯಿಂದ ಸರ್ಕಾರದ ಬೊಕ್ಕಸಕ್ಕೆ ಪ್ರತಿ ತಿಂಗಳು ಸುಮಾರು 77 ಕೋಟಿ ರೂ. ಉಳಿತಾಯವಾಗಲಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ