LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS: ಬೆಂಗಳೂರಿನಲ್ಲಿ 35 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ; 8 ಆರೋಪಿಗಳು ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಹೆಬ್ಬಾಳ ಠಾಣೆ ಪೊಲೀಸರು ಅಂತಾರಾಜ್ಯ ಮಟ್ಟದ ಬೃಹತ್​​ ಮಾದಕ ವಸ್ತು ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದೆಹಲಿಯಿಂದ ಬೆಂಗಳೂರಿಗೆ ಮಾದಕ ವಸ್ತುಗಳನ್ನು ತಂದು ಮಾರಾಟ ಮಾಡುತ್ತಿದ್ದ ಆರೋಪದಡಿ ಸೆನೆಗಲ್​ ಮೂಲದ ಡನ್ಫಾ ಗೆರಾಲ್ಡ್, ತಾಂಜೇನಿಯಾ ಮೂಲದ ಮೆಗ್ರಾತ್​​, ನೈಜೀರಿಯಾ ಮೂಲದ ಒಬಿಯಾನಿಜ್​ ರೀಟಾ, ದೆಹಲಿ ಮೂಲದ ರೀನಾ ಯಾದವ್​​, ದೆಬಾಶಿಶ್​ ಬ್ಯಾನರ್ಜಿ ಮತ್ತು ಬೆಂಗಳೂರಿನ ಪೆಡ್ಲರ್‌ಗಳಾದ ಧೀರಜ್​​, ಮೊಹಮ್ಮದ್​​ ಮನ್ಸೂರ್​​ ಹಾಗೂ ಅಬ್ದುಲ್​ ಸಮದ್​ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ ಬರೋಬ್ಬರಿ 35 ಕೋಟಿ ರೂ. ಮೌಲ್ಯದ 17.4 ಕೆ.ಜಿ. ಎಂಡಿಎಂಎ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಶಯ ಬಾರದಂತೆ ಸೀರೆಗಳು, ಇಸ್ತ್ರಿ ಮಾಡಲು ಬಳಸುವ ಟೇಬಲ್‌ಗಳು ಮತ್ತು ಕುರ್ಚಿಗಳ ಒಳಭಾಗದಲ್ಲಿ ಎಂಡಿಎಂಎ ಕ್ರಿಸ್ಟಲ್‌ಗಳನ್ನು ಅಡಗಿಸಿ, ಸುಂದರವಾದ ಉಡುಗೊರೆಗಳಂತೆ ಆರೋಪಿಗಳು ಪ್ಯಾಕ್ ಮಾಡುತ್ತಿದ್ದರು. ನಂತರ ಅವುಗಳನ್ನು ಚಾಣಾಕ್ಷತನದಿಂದ ದೆಹಲಿಯಿಂದ ರೈಲಿನ ಮೂಲಕ ಬೆಂಗಳೂರಿಗೆ ತರುತ್ತಿದ್ದರು. ಹೀಗೆ ಬೆಂಗಳೂರು ತಲುಪುವ ಮಾದಕವನ್ನು ನಿರ್ಜನ ಪ್ರದೇಶಗಳಲ್ಲಿ ಕಾರಿನಲ್ಲಿಟ್ಟುಕೊಂಡು ಮಾರಾಟ ಮಾಡುತ್ತಿದ್ದರು.

ಹೆಬ್ಬಾಳದ ಆನಂದನಗರದ ಸಮೀಪ ಮಾದಕ ವಸ್ತಿಗಳನ್ನು ಮಾರಾಟ ಮಾಡುತ್ತಿದ್ದಾಗ ಮೂವರನ್ನು ವಶಕ್ಕೆ ಪಡೆದಿದ್ದ ಪೊಲೀಸರು 4 ಕೆ.ಜಿ. 300 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದರು. ಬಳಿಕ ಸರ್ಜಾಪುರದ ಚೂಡಸಂದ್ರದಲ್ಲಿರುವ ಸ್ಥಳೀಯ ಪೆಡ್ಲರ್​ ಮೊಹಮ್ಮದ್​ ಮನ್ಸೂರ್​ ನಿವಾಸದ ಮೇಲೆ ದಾಳಿ ನಡೆಸಿದಾಗ 10 ಕೆ.ಜಿ ಎಂಡಿಎಂಎ ಪತ್ತೆಯಾಗಿತ್ತು. ​

ಅಬ್ದುಲ್ ಸಮದ್ ಎಂಬಾತನ ಹೆಣ್ಣೂರಿನ ನಿವಾಸದ ಮೇಲೆಯೂ ದಾಳಿ ನಡೆಸಿ 3.5 ಕೆ.ಜಿ ಮಾದಕ ವಸ್ತುವನ್ನು ಜಪ್ತಿ ಮಾಡಲಾಯಿತು. ವಿಚಾರಣೆ ವೇಳೆ, ದೆಹಲಿ ಮತ್ತು ಹರಿಯಾಣದವರೆಗೂ ಆರೋಪಿಗಳ ಜಾಲ ವಿಸ್ತರಿಸಿರುವುದು ಬಯಲಾಗಿತ್ತು. ಸುಮಾರು 40 ಜನ ಪೊಲೀಸ್ ಸಿಬ್ಬಂದಿಗಳ ವಿಶೇಷ ತಂಡ ದೆಹಲಿಯಲ್ಲಿ ಒಂದು ವಾರಕ್ಕೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ