LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS: ವಿಜಯ್ ಸಂಪುಟದಲ್ಲಿ ಕಾಂಗ್ರೆಸ್ ನ ಇಬ್ಬರಿಗೆ ಸಚಿವ ಸ್ಥಾನ: ತಮಿಳುನಾಡಿನಲ್ಲಿ 59 ವರ್ಷಗಳ ನಂತರ ಸಚಿವ ಸಂಪುಟಕ್ಕೆ ಕಾಂಗ್ರೆಸ್ ಶಾಸಕರು ಸೇರ್ಪಡೆ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಸಂಪುಟದಲ್ಲಿ ಕಾಂಗ್ರೆಸ್ ನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿದೆ. ನಾಳೆ ಸಚಿವರಾಗಿ ಇಬ್ಬರು ಕಾಂಗ್ರೆಸ್ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ರಾಜೇಶ್ ಕುಮಾರ್ ಮತ್ತು ತಿರು ವಿಶ್ವನಾಥ್ ಅವರ ಹೆಸರನ್ನು ಎಐಸಿಸಿ ಪ್ರಕಟಿಸಿದೆ. ತಮಿಳುನಾಡಿನಲ್ಲಿ 59 ವರ್ಷದ ನಂತರ ಕಾಂಗ್ರೆಸ್ ಶಾಸಕರು ಸಚಿವ ಸಂಪುಟಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ನಿಯೋಜಿತ ಸಚಿವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ವಿಜಯ್ ಅವರ ಟಿವಿಕೆ 234 ಸ್ಥಾನಗಳಲ್ಲಿ 108 ಸ್ಥಾನಗಳನ್ನು ಗೆದ್ದುಕೊಂಡಿತು.  ಬಹುಮತಕ್ಕೆ 10 ಕಡಿಮೆಯಾಗಿ ನಂತರ ಐದು ಸ್ಥಾನಗಳನ್ನು ಗೆದ್ದ ಕಾಂಗ್ರೆಸ್‌ ಮತ್ತು ಎಡರಂಗ, ವಿಸಿಕೆ ಮತ್ತು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಬೆಂಬಲ ಪಡೆದುಕೊಂಡಿತು. ಮೇ 13 ರಂದು ನಡೆದ ವಿಶ್ವಾಸಮತಯಾಚನೆ ವೇಳೆ ಎಐಎಡಿಎಂಕೆ ಒಂದು ಬಣ ಬೆಂಬಲಿಸಿತು. ವಿಜಯ್ ಅವರನ್ನು 144 ಶಾಸಕರು ಬೆಂಬಲಿಸಿದರು. ಅವರಲ್ಲಿ 24 ಎಐಎಡಿಎಂಕೆ ಶಾಸಕರು ಸೇರಿದ್ದಾರೆ.

ಸಂಪುಟಕ್ಕೆ ಎಐಎಡಿಎಂಕೆ ಬಂಡಾಯ ಶಾಸಕರ ಸೇರ್ಪಡೆ ಇಲ್ಲ:

ಸಿಎಂ ವಿಜಯ್ ನೇತೃತ್ವದ ಸಚಿವ ಸಂಪುಟಕ್ಕೆ ಎಐಎಡಿಎಂಕೆ ಬಂಡಾಯ ನಾಯಕರನ್ನು ಸೇರಿಸಿಕೊಳ್ಳುವ ಬಗ್ಗೆ ತನ್ನ ನಿಲುವನ್ನು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಬುಧವಾರ ಸ್ಪಷ್ಟಪಡಿಸಿದೆ.

ಎಐಎಡಿಎಂಕೆ ಪಕ್ಷಾಂತರಿಗಳನ್ನು ಸರ್ಕಾರಕ್ಕೆ ಸೇರಿಸಿಕೊಂಡರೆ ತಮ್ಮ ಪಕ್ಷವು ಟಿವಿಕೆಗೆ ಬೆಂಬಲ ನೀಡುವ ನಿರ್ಧಾರವನ್ನು ಮರುಪರಿಶೀಲಿಸುತ್ತದೆ ಎಂದು ತಮಿಳುನಾಡು ಸಿಪಿಐ(ಎಂ) ಕಾರ್ಯದರ್ಶಿ ಪಿ. ಷಣ್ಮುಗಂ ಕಟು ಎಚ್ಚರಿಕೆ ನೀಡಿದ ಒಂದು ದಿನದ ನಂತರ ಈ ಸ್ಪಷ್ಟನೆ ನೀಡಲಾಗಿದೆ.

ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದ ತಮಿಳುನಾಡು ಸಚಿವ ಆಧವ್ ಅರ್ಜುನ, ಎಐಎಡಿಎಂಕೆ ಶಾಸಕರನ್ನು ಸಂಪುಟದಲ್ಲಿ ಸೇರಿಸಲಾಗುವುದಿಲ್ಲ ಮತ್ತು ಈ ಕುರಿತ ವರದಿಗಳು ಕೇವಲ ಊಹಾಪೋಹಗಳಾಗಿವೆ. ಮೈತ್ರಿಕೂಟದ ಭವಿಷ್ಯದ ಬಗ್ಗೆ ಹೇಳುವುದಾದರೆ ಟಿವಿಕೆ ನೇತೃತ್ವದ ಒಕ್ಕೂಟವು ಅಖಂಡವಾಗಿದೆ ಮತ್ತು ಸಿಎಂ ವಿಜಯ್ ಶೀಘ್ರದಲ್ಲೇ ಸಂಪುಟ ವಿಸ್ತರಣೆಯನ್ನು ನಡೆಸಲಿದ್ದಾರೆ. ಮುಖ್ಯಮಂತ್ರಿಯವರು ಸಂಪುಟವು ಒಂದೇ ಕುಟುಂಬದಂತೆ ಕಾರ್ಯನಿರ್ವಹಿಸಬೇಕೆಂದು ಬಯಸುತ್ತಾರೆ. ಬೆಂಬಲ ನೀಡಿದ ಪಕ್ಷಗಳು ಸಂಪುಟದಲ್ಲಿ ಪ್ರತಿನಿಧಿಸಬೇಕೆಂದು ಅವರು ಬಯಸುತ್ತಾರೆ ಎಂದು ಹೇಳಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಆಸ್ಟ್ರೇಲಿಯಾದ ಮ್ಯಾರಥಾನ್ ನಲ್ಲಿ ಗಮನಸೆಳೆದ ಪೊಲೀಸ್ ಅಧಿಕಾರಿ ಸಂದೀಪ್ ಪಾಟೀಲ್, ಸದಾನಂದ ಅಮ್ರಾಪುರBIG NEWS: ಕುಮಾರಸ್ವಾಮಿ ಪಂಥಾಹ್ವಾನ ನಾನು ಸ್ವೀಕರಿಸುವೆ: ದಿನಾಂಕ ಹಾಗೂ ಸ್ಥಳ ನಿಗದಿ ಮಾಡಲಿ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್ಜೂ. 1 ರಿಂದ ಬೀಡಿ ಕಾರ್ಮಿಕರ ಕಲ್ಯಾಣ ನಿಧಿ ಆಸ್ಪತ್ರೆ ಬಂದ್ಕೊಳವೆಬಾವಿಗಳ ಜಲ ಮರುಪೂರಣಕ್ಕೆ ಹೊಸ ತಂತ್ರಜ್ಞಾನ ಅಳವಡಿಕೆ: ‘ಸ್ಪಾಂಜ್ ಜೋನ್’ ಮೂಲಕ ಅಂತರ್ಜಲ ಮಟ್ಟ ಹೆಚ್ಚಳ, ಬತ್ತಿದ ಬೋರ್ ವೆಲ್ ಗಳಿಗೆ ಮರುಜೀವಮಹಿಳೆ ಸರ ದೋಚಿ ಪರಾರಿಯಾಗುತ್ತಿದ್ದಾಗಲೇ ಸಿಕ್ಕಿಬಿದ್ದ ಕಳ್ಳಜೈಲಿನಲ್ಲಿ ಬೇಸತ್ತು ನಟ ದರ್ಶನ್ ಆತ್ಮಹತ್ಯೆ ಯತ್ನ? ಡಿಜಿಪಿ ಅಲೋಕ್ ಕುಮಾರ್‌ ಕೊಟ್ಟ ಉತ್ತರವೇನು?BIG NEWS: ವಿಜಯ್ ಸಂಪುಟದಲ್ಲಿ ಕಾಂಗ್ರೆಸ್ ನ ಇಬ್ಬರಿಗೆ ಸಚಿವ ಸ್ಥಾನ: ತಮಿಳುನಾಡಿನಲ್ಲಿ 59 ವರ್ಷಗಳ ನಂತರ ಸಚಿವ ಸಂಪುಟಕ್ಕೆ ಕಾಂಗ್ರೆಸ್ ಶಾಸಕರು ಸೇರ್ಪಡೆರಾಜ್ಯದಲ್ಲಿ 6,000 ಕೋಟಿ ರೂ. ಹೂಡಿಕೆಗೆ ಆ್ಯಕ್ಸಿಸ್ ಕೇಡ್ಸ್ ಏರೊಸ್ಪೇಸ್ ಒಲವು: 20 ಸಾವಿರ ಪ್ರತ್ಯಕ್ಷ ಹಾಗೂ 54 ಸಾವಿರ ಪರೋಕ್ಷ ಉದ್ಯೋಗ ಸೃಷ್ಟಿBIG NEWS: ‘ವಿಜಯ್ ಸಂಪುಟದಲ್ಲಿ ಎಐಎಡಿಎಂಕೆ ಬಂಡಾಯಗಾರರು ಇರಲ್ಲ’: ಸಿಪಿಎಂ, ವಿಸಿಕೆ ಎಚ್ಚರಿಕೆ ಬೆನ್ನಲ್ಲೇ ಮಿತ್ರಪಕ್ಷಗಳಿಗೆ ಟಿವಿಕೆ ಭರವಸೆ2026-27ರ ದೇಶೀಯ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ; ಅ. 11 ರಿಂದ ರಣಜಿ ಟ್ರೋಫಿ ಆರಂಭ