LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS: ವಿಜಯ್ ಸಂಪುಟದಲ್ಲಿ ಕಾಂಗ್ರೆಸ್ ನ ಇಬ್ಬರಿಗೆ ಸಚಿವ ಸ್ಥಾನ: ತಮಿಳುನಾಡಿನಲ್ಲಿ 59 ವರ್ಷಗಳ ನಂತರ ಸಚಿವ ಸಂಪುಟಕ್ಕೆ ಕಾಂಗ್ರೆಸ್ ಶಾಸಕರು ಸೇರ್ಪಡೆ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಸಂಪುಟದಲ್ಲಿ ಕಾಂಗ್ರೆಸ್ ನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿದೆ. ನಾಳೆ ಸಚಿವರಾಗಿ ಇಬ್ಬರು ಕಾಂಗ್ರೆಸ್ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ರಾಜೇಶ್ ಕುಮಾರ್ ಮತ್ತು ತಿರು ವಿಶ್ವನಾಥ್ ಅವರ ಹೆಸರನ್ನು ಎಐಸಿಸಿ ಪ್ರಕಟಿಸಿದೆ. ತಮಿಳುನಾಡಿನಲ್ಲಿ 59 ವರ್ಷದ ನಂತರ ಕಾಂಗ್ರೆಸ್ ಶಾಸಕರು ಸಚಿವ ಸಂಪುಟಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ನಿಯೋಜಿತ ಸಚಿವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ವಿಜಯ್ ಅವರ ಟಿವಿಕೆ 234 ಸ್ಥಾನಗಳಲ್ಲಿ 108 ಸ್ಥಾನಗಳನ್ನು ಗೆದ್ದುಕೊಂಡಿತು.  ಬಹುಮತಕ್ಕೆ 10 ಕಡಿಮೆಯಾಗಿ ನಂತರ ಐದು ಸ್ಥಾನಗಳನ್ನು ಗೆದ್ದ ಕಾಂಗ್ರೆಸ್‌ ಮತ್ತು ಎಡರಂಗ, ವಿಸಿಕೆ ಮತ್ತು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಬೆಂಬಲ ಪಡೆದುಕೊಂಡಿತು. ಮೇ 13 ರಂದು ನಡೆದ ವಿಶ್ವಾಸಮತಯಾಚನೆ ವೇಳೆ ಎಐಎಡಿಎಂಕೆ ಒಂದು ಬಣ ಬೆಂಬಲಿಸಿತು. ವಿಜಯ್ ಅವರನ್ನು 144 ಶಾಸಕರು ಬೆಂಬಲಿಸಿದರು. ಅವರಲ್ಲಿ 24 ಎಐಎಡಿಎಂಕೆ ಶಾಸಕರು ಸೇರಿದ್ದಾರೆ.

ಸಂಪುಟಕ್ಕೆ ಎಐಎಡಿಎಂಕೆ ಬಂಡಾಯ ಶಾಸಕರ ಸೇರ್ಪಡೆ ಇಲ್ಲ:

ಸಿಎಂ ವಿಜಯ್ ನೇತೃತ್ವದ ಸಚಿವ ಸಂಪುಟಕ್ಕೆ ಎಐಎಡಿಎಂಕೆ ಬಂಡಾಯ ನಾಯಕರನ್ನು ಸೇರಿಸಿಕೊಳ್ಳುವ ಬಗ್ಗೆ ತನ್ನ ನಿಲುವನ್ನು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಬುಧವಾರ ಸ್ಪಷ್ಟಪಡಿಸಿದೆ.

ಎಐಎಡಿಎಂಕೆ ಪಕ್ಷಾಂತರಿಗಳನ್ನು ಸರ್ಕಾರಕ್ಕೆ ಸೇರಿಸಿಕೊಂಡರೆ ತಮ್ಮ ಪಕ್ಷವು ಟಿವಿಕೆಗೆ ಬೆಂಬಲ ನೀಡುವ ನಿರ್ಧಾರವನ್ನು ಮರುಪರಿಶೀಲಿಸುತ್ತದೆ ಎಂದು ತಮಿಳುನಾಡು ಸಿಪಿಐ(ಎಂ) ಕಾರ್ಯದರ್ಶಿ ಪಿ. ಷಣ್ಮುಗಂ ಕಟು ಎಚ್ಚರಿಕೆ ನೀಡಿದ ಒಂದು ದಿನದ ನಂತರ ಈ ಸ್ಪಷ್ಟನೆ ನೀಡಲಾಗಿದೆ.

ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದ ತಮಿಳುನಾಡು ಸಚಿವ ಆಧವ್ ಅರ್ಜುನ, ಎಐಎಡಿಎಂಕೆ ಶಾಸಕರನ್ನು ಸಂಪುಟದಲ್ಲಿ ಸೇರಿಸಲಾಗುವುದಿಲ್ಲ ಮತ್ತು ಈ ಕುರಿತ ವರದಿಗಳು ಕೇವಲ ಊಹಾಪೋಹಗಳಾಗಿವೆ. ಮೈತ್ರಿಕೂಟದ ಭವಿಷ್ಯದ ಬಗ್ಗೆ ಹೇಳುವುದಾದರೆ ಟಿವಿಕೆ ನೇತೃತ್ವದ ಒಕ್ಕೂಟವು ಅಖಂಡವಾಗಿದೆ ಮತ್ತು ಸಿಎಂ ವಿಜಯ್ ಶೀಘ್ರದಲ್ಲೇ ಸಂಪುಟ ವಿಸ್ತರಣೆಯನ್ನು ನಡೆಸಲಿದ್ದಾರೆ. ಮುಖ್ಯಮಂತ್ರಿಯವರು ಸಂಪುಟವು ಒಂದೇ ಕುಟುಂಬದಂತೆ ಕಾರ್ಯನಿರ್ವಹಿಸಬೇಕೆಂದು ಬಯಸುತ್ತಾರೆ. ಬೆಂಬಲ ನೀಡಿದ ಪಕ್ಷಗಳು ಸಂಪುಟದಲ್ಲಿ ಪ್ರತಿನಿಧಿಸಬೇಕೆಂದು ಅವರು ಬಯಸುತ್ತಾರೆ ಎಂದು ಹೇಳಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ