LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS: ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಅನಾಹುತ: ರಾಜ್ಯಾದ್ಯಂತ 6 ಜನರು ದುರ್ಮರಣ

ಬೆಂಗಳೂರು: ರಾಜ್ಯದ ಹಲವೆಡೆ ವರುಣಾರ್ಭಟ ಜೋರಾಗಿದ್ದರೆ, ಮತ್ತೆ ಹಲವೆಡೆ ಬಿಸಿಲ ಝಳ ಹೆಚ್ಚುತ್ತಿದೆ. ವಿವಿಧ ಜಿಲ್ಲೆಗಳಲ್ಲಿ ಸುರಿದ ಗುಡುಗು ಸಹಿತ ಬಿರುಗಾಳಿ, ಮಳೆಗೆ ಈವರೆ 6 ಜನರು ಸಾವನ್ನಪ್ಪಿದ್ದಾರೆ. ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.

ದಾವಣಗೆರೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮಳೆ ಅನಾಹುತಕ್ಕೆ ಆರು ಮಂದಿ ಮೃತಪಟ್ಟಿದ್ದಾರೆ. ಹಲವೆಡೆ ಮನೆಗಳ ಮೇಲ್ಛಾವಣಿ ಹಾರಿಹೋಗಿದ್ದು, ಜನರ ಬದುಕು ಮೂರಾಬಟ್ಟೆಯಾಗಿದೆ. ಬಿರುಗಾಳಿಯ ಆರ್ಭಟಕ್ಕೆ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ಹಾನಿಯಾಗಿದೆ.

ವಿಜಯಪುರ ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ಆಲಮೇಲ ತಾಲೂಕಿನ‌ ಮೊರಗಟಿ ಗ್ರಾಮದಲ್ಲಿ ಅನಾಅಹುತ ಸಂಭವಿಸಿದೆ. ಮನೆಯ ಮೇಲ್ಚಾವಣಿ ಹಾಗೂ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಮತಪಟ್ಟಿದ್ದಾರೆ.

ಮೋರಟಗಿ ಗ್ರಾಮದ ಗುರುನಾಥ ಬಡಿಗೇರ(35), ಜ್ಯೋತಿ ಬಡಿಗೇರ(28), ಮಕ್ಕಳಾದ ಕಾಳಮ್ಮ ಬಡಿಗೇರ(13), ಕೀರ್ತಿ ಬಡಿಗೇರ(9) ಮೃತ ದುರ್ದೈವಿಗಳು. ಬಿರುಗಾಳಿ ಮಳೆಯಿಂದಾಗಿ ಜಿಲ್ಲೆಯ ಹಲವೆಡೆ ಅವಾಂತರಗಳು ಸಂಭವಿಸಿವೆ.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿಯಲ್ಲಿ ಬಿರುಗಾಳಿಗೆ ಬೃಹತ್ ಮರವೊಂದು ಉರುಳಿ ಬಿದ್ದು ವೃದ್ಧರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ ಧಾರಾಕಾರ ಮಳೆ, ಸಿಡಿಲಬ್ಬರಕ್ಕೆ ಯುವಕನೊಬ್ಬ ಬಲಿಯಾಗಿದ್ದಾರೆ. ಜರೇಕಟ್ಟೆ ಗ್ರಾಮದ ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಅಜಿತ್ (19) ಎಂಬ ಯುವಕ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಭೂರಣಕಿ ಗ್ರಾಮದಲ್ಲಿ ಶಾಲೆಯ ಮೇಲ್ಛಾವಣಿ ಹಾರಿಹೋಗಿದ್ದು, ಅದೃಷ್ಟವಶಾತ್ ರಜೆ ಇದ್ದ ಕಾರಣ ಮಕ್ಕಳಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಅಥಣಿಯ ಸಂಬರಗಿಯಲ್ಲಿ ಬಿರುಗಾಳಿಗೆ ಐದು ಮನೆಗಳ ಮೇಲ್ಛಾವಣಿ ಕುಸಿದು ದವಸ ಧಾನ್ಯಗಳು ನಾಶವಾಗಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಏರ್ ಪೋರ್ಟ್ ನಲ್ಲಿ ವಿಮಾನ ಹಾರಾಅಟದಲ್ಲಿ ವ್ಯತ್ಯಯವಾಗಿದೆ. ರನ್‌ವೇ ಸ್ಪಷ್ಟವಾಗಿ ಕಾಣಿಸದ ಕಾರಣ ಬೆಂಗಳೂರಿನಿಂದ ಬಂದಿದ್ದ ಏರ್ ಇಂಡಿಯಾದ ಎರಡು ವಿಮಾನಗಳು ಸುಮಾರು ಹೊತ್ತು ಆಗಸದಲ್ಲೇ ಗಿರಕಿ ಹೊಡೆದಘಟನೆ ನಡೆದಿದೆ.

ಹಾವೇರಿ ಜಿಲ್ಲೆಯ ಇಜಾರಿಲಕಮಾಪುರದಲ್ಲಿ ಅಲೆಮಾರಿಗಳ ಗುಡಿಸಲುಗಳು ಗಾಳಿಗೆ ಹಾರಿಹೋಗಿವೆ. ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಮರ ಬಿದ್ದು ಸಂಚಾರ ಸಂಪೂರ್ಣ ಬಂದ್ ಸ್ಥಗಿತಗೊಂಡಿದೆ. ಉತ್ತರ ಕನ್ನಡದ ಭಟ್ಕಳ ಮತ್ತು ಹೊನ್ನಾವರದಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಹವಾಮಾನ ಇಲಾಖೆ ಸೂಚನೆ ಪ್ರಕಾರ ರಾಜ್ಯದಲ್ಲಿ ಮೇ 17ರವರೆಗೆ ಭಾರಿ ಮಳೆಯಾಗಲಿದ್ದು, ಬೆಂಗಳೂರು ನಗರ, ಗ್ರಾಮಾಂತರ, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಸಿದ್ಧರಾಮಯ್ಯ ಮುನಿಸಿನಿಂದ ಕೈತಪ್ಪಿದ ಸಚಿವ ಸ್ಥಾನ..? ಮನವೊಲಿಸಲು ಜಮೀರ್ ಅಹ್ಮದ್ ಕಸರತ್ತುಇಸ್ರೇಲ್, ಅಮೆರಿಕ ದಾಳಿಯಲ್ಲಿ ಮೃತಪಟ್ಟ 131 ದಿನಗಳ ನಂತರ ಜು. 9ರಂದು ಇರಾನ್ ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆSHOCKING: ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ವಿಷಕಾರಿ ಅನಿಲ ಸೇವಿಸಿ ನಾಲ್ವರು ಸಾವುವಿವಾಹಿತೆಗೆ ಮತ್ತು ಬರುವ ಪಾನೀಯ ಕುಡಿಸಿ ರೇಪ್, ಬೆತ್ತಲೆ ಚಿತ್ರ ಸೆರೆಹಿಡಿದು ಬ್ಲಾಕ್ ಮೇಲ್BREAKING: ಇನ್ನು ಯಾರೂ ಒಂದು ರೂಪಾಯಿ ಲಂಚ ಕೊಡಬೇಕಿಲ್ಲ: ಭ್ರಷ್ಟಾಚಾರ ಮುಕ್ತ ರಾಜ್ಯವಾಗಿಸಲು ಸಿಎಂ ಡಿಕೆ ಮಹತ್ವದ ಹೆಜ್ಜೆಶಿವಮೊಗ್ಗ: ಕೊಳೆತ ಸ್ಥಿತಿಯಲ್ಲಿ ಮಹಿಳೆ, ಸಾಕು ನಾಯಿ ಶವ ಪತ್ತೆಧರ್ಮಸ್ಥಳ ಬುರುಡೆ ಗ್ಯಾಂಗ್ ಪ್ರಕರಣ: ಚಿನ್ನಯ್ಯನ ಬ್ರೇನ್ ಮ್ಯಾಪಿಂಗ್ ಹಾಗೂ ರಿಟ್ ಅರ್ಜಿ ತನಿಖೆ ನಡೆಸುವಂತೆ SITಗೆ ಗಿರೀಶ್ ಮಟ್ಟಣ್ಣನವರ್ ದೂರುBREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಯೋಜನೆ ಸೌಲಭ್ಯ ಪಡೆಯಲು ಮತ್ತೆ ಅರ್ಜಿ ಸಲ್ಲಿಸಬೇಕು: ಸಿಎಂ ಡಿಕೆ ಮಾಹಿತಿದೇಶದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಕೋಟ್ಯಂತರ ರೂ ಅಕ್ರಮ ಫಂಡಿಂಗ್ ಆರೋಪ: ಕರ್ನಾಟಕದ ನಾಲ್ವರು ಸೇರಿ 7 ಜನರ ವಿರುದ್ಧ FIR ದಾಖಲುಸಂಬಳ ಪಡೆಯುವ ಪ್ರತಿಯೊಬ್ಬ ಉದ್ಯೋಗಿಯೂ  ತಿಳಿಯಲೇಬೇಕಾದ ಸೀಕ್ರೆಟ್ ಪಿಎಫ್ ಕಟ್ ಆದ್ರೆ ಸಿಗುತ್ತೆ ₹7 ಲಕ್ಷದ ಬಿಗ್ ಇನ್ಶೂರೆನ್ಸ್ ಬೆನಿಫಿಟ್