LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS : ʼಅಂತ್ಯೋದಯ ಕಾರ್ಡ್‌ʼದಾರರಿಗೆ ಬಿಗ್ ಶಾಕ್ ; ಇನ್ಮುಂದೆ ಪ್ರತಿ ವ್ಯಕ್ತಿಗೆ 7 ಕೆ.ಜಿ ರೇಷನ್ ನೀಡಲು ಕೇಂದ್ರ ಸರ್ಕಾರ ಚಿಂತನೆ!

ರೇಷನ್ ಕಾರ್ಡ್ ಹೊಂದಿರುವವರಿಗೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗೆ ಮುಂದಾಗಿದೆ. ಅಂತ್ಯೋದಯ ಅನ್ನ ಯೋಜನೆ (AAY) ಕಾರ್ಡ್‌ದಾರರಿಗೆ ನೀಡಲಾಗುತ್ತಿರುವ ರೇಷನ್ ವಿತರಣಾ ವ್ಯವಸ್ಥೆಯಲ್ಲಿ ಬದಲಾವಣೆ ತರಲು ನಿರ್ಧರಿಸಿದೆ.

ಇನ್ನು ಮುಂದೆ ಕುಟುಂಬದ ಆಧಾರದ ಬದಲಿಗೆ, ಪ್ರತಿ ವ್ಯಕ್ತಿಗೆ 7 ಕೆಜಿ ಅಕ್ಕಿ ಅಥವಾ ಗೋಧಿ ನೀಡುವ ಹೊಸ ನಿಯಮ ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಈ ಸಂಬಂಧ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ–2013ಕ್ಕೆ ತಿದ್ದುಪಡಿ ತರಲು ಉದ್ದೇಶಿಸಿದ್ದು, ಸಾರ್ವಜನಿಕರಿಂದ ಜುಲೈ 13ರವರೆಗೆ ಅಭಿಪ್ರಾಯಗಳನ್ನು ಆಹ್ವಾನಿಸಿದೆ.

ಹೊಸ ನಿಯಮ ಏನು?

ಇದುವರೆಗೆ ಅಂತ್ಯೋದಯ ಅನ್ನ ಯೋಜನೆಯಡಿ ಕುಟುಂಬದಲ್ಲಿ ಎಷ್ಟು ಸದಸ್ಯರಿದ್ದರೂ ತಿಂಗಳಿಗೆ 35 ಕೆಜಿ ಉಚಿತ ರೇಷನ್ ನೀಡಲಾಗುತ್ತಿತ್ತು. ಆದರೆ ಹೊಸ ನಿಯಮದ ಪ್ರಕಾರ, ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ 7 ಕೆಜಿ ರೇಷನ್ ನೀಡಲಾಗುತ್ತದೆ. ಉದಾಹರಣೆಗೆ: 2 ಸದಸ್ಯರಿದ್ದರೆ – 14 ಕೆಜಿ 3 ಸದಸ್ಯರಿದ್ದರೆ – 21 ಕೆಜಿ 4 ಸದಸ್ಯರಿದ್ದರೆ – 28 ಕೆಜಿ 5 ಅಥವಾ ಅದಕ್ಕಿಂತ ಹೆಚ್ಚು ಸದಸ್ಯರಿದ್ದರೆ – ಗರಿಷ್ಠ 35 ಕೆಜಿ ಅಂದರೆ, ಗರಿಷ್ಠ ಮಿತಿ 35 ಕೆಜಿಯೇ ಮುಂದುವರಿಯಲಿದ್ದು, ಸಣ್ಣ ಕುಟುಂಬಗಳಿಗೆ ಸಿಗುವ ರೇಷನ್ ಪ್ರಮಾಣದಲ್ಲಿ ಬದಲಾವಣೆ ಆಗಲಿದೆ. ಸಾಮಾನ್ಯ ರೇಷನ್ ಕಾರ್ಡ್‌ಗಳಿಗೆ ಏನು? ಸಾಮಾನ್ಯ ರೇಷನ್ ಕಾರ್ಡ್ ಹೊಂದಿರುವವರಿಗೆ ಯಾವುದೇ ಬದಲಾವಣೆ ಇರುವುದಿಲ್ಲ. ಅವರಿಗೆ ಹಿಂದಿನಂತೆ ಪ್ರತಿ ವ್ಯಕ್ತಿಗೆ 5 ಕೆಜಿ ಆಹಾರ ಧಾನ್ಯ ವಿತರಣೆ ಮುಂದುವರಿಯಲಿದೆ.

ಈ ಹೊಸ ನಿಯಮವು ಕೇಂದ್ರ ಸರ್ಕಾರದ ಅಂತ್ಯೋದಯ ಅನ್ನ ಯೋಜನೆ (AAY) ಅಡಿಯಲ್ಲಿ ಇರುವ ರೇಷನ್ ಕಾರ್ಡ್‌ದಾರರಿಗೆ ಮಾತ್ರ ಅನ್ವಯವಾಗಲಿದೆ. ಸರ್ಕಾರದ ಉದ್ದೇಶ ಕುಟುಂಬದ ಗಾತ್ರದ ಆಧಾರದ ಬದಲಿಗೆ ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ಸಮಾನ ಪ್ರಮಾಣದಲ್ಲಿ ಆಹಾರ ಧಾನ್ಯ ವಿತರಿಸುವುದು ಹಾಗೂ ಆಹಾರ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ತಿದ್ದುಪಡಿಯನ್ನು ತರಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಸಂಬಂಧ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಗೆ ತಿದ್ದುಪಡಿ ತರಲಾಗುತ್ತದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ