LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS : ವಿಧವಾ ವೇತನ ಯೋಜನೆಯಡಿ ರಾಜ್ಯದ ವಿಧವೆಯರಿಗೆ ಸಿಗಲಿದೆ ಮಾಸಿಕ 800 ರೂ. ಪಿಂಚಣಿ.ಹೀಗೆ ಅರ್ಜಿ ಸಲ್ಲಿಸಿ

ರಾಜ್ಯದ ನಿರ್ಗತಿಕ ವಿಧವೆಯರಿಗೆ ಸಾಮಾಜಿಕ ಭದ್ರತೆ ಮತ್ತು ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಈ ಯೋಜನೆಯನ್ನು ಜಾರಿಯಲ್ಲಿಟ್ಟಿದೆ.ಬಡತನ ರೇಖೆಗಿಂತ ಕೆಳಗಿರುವ 18 ರಿಂದ 64 ವರ್ಷದೊಳಗಿನ ನಿರ್ಗತಿಕ ವಿಧವೆಯರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ, ಸರ್ಕಾರದ ಆದೇಶದ ಮೇರೆಗೆ 1ನೇ ಏಪ್ರಿಲ್ 1984 ರಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಅರ್ಹರಿಗೆ ಪ್ರತಿ ತಿಂಗಳು ₹800 ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.ರೈತ ಆತ್ಮಹತ್ಯೆ ಮಾಡಿಕೊಂಡ ಕುಟುಂಬದ ವಿಧವೆಯರಿಗೆ ಮಾಸಿಕ ₹2,000 ಪಿಂಚಣಿ ನೀಡುವ ಸೌಲಭ್ಯವಿದೆ.

ಅರ್ಹತಾ ಮಾನದಂಡಗಳು:

  1. ವಿಧವೆ: ಪತಿಯನ್ನು ಕಳೆದುಕೊಂಡ ಮಹಿಳೆ ಅಥವಾ ಕಾನೂನು ರೀತಿಯಲ್ಲಿ ಪತಿ ಮೃತಪಟ್ಟಿದ್ದಾರೆ ಎಂದು ಪರಿಗಣಿಸಲ್ಪಟ್ಟ ಮಹಿಳೆ.
  2. ಆದಾಯ ಮಿತಿ: ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾರ್ಷಿಕ ಆದಾಯವು ರೂ. 32,000/- ಕ್ಕಿಂತ ಕಡಿಮೆ ಇರಬೇಕು.
  3. ಅರ್ಹತೆ ಮುಂದುವರಿಕೆ: ವಿಧವೆಯು ಮೃತಪಡುವವರೆಗೆ ಅಥವಾ ಮರು ವಿವಾಹವಾಗುವವರೆಗೆ ಅಥವಾ ಉದ್ಯೋಗ ಪಡೆದು ನಿಗದಿತ ಆದಾಯಕ್ಕಿಂತ ಹೆಚ್ಚು ಆದಾಯ ಗಳಿಸುವವರೆಗೆ ಈ ವೇತನ ಪಡೆಯಬಹುದು.

ಸಲ್ಲಿಸಬೇಕಾದ ದಾಖಲೆಗಳು

  • ವಾಸಸ್ಥಳ ದೃಢೀಕರಣ ಪತ್ರ.
  • ವಯಸ್ಸಿನ ದೃಢೀಕರಣ ಪತ್ರ.
  • ಬ್ಯಾಂಕ್ ಮತ್ತು ಅಂಚೆ ಕಚೇರಿಯ ಖಾತೆ ವಿವರಗಳು.
  • ಆಧಾರ್ ಕಾರ್ಡ್.

ಪಿಂಚಣಿ ಮೊತ್ತ:

ಈ ಯೋಜನೆಯಡಿ ಪ್ರತಿ ತಿಂಗಳು ರೂ. 800 ಪಿಂಚಣಿಯನ್ನು ನೀಡಲಾಗುತ್ತದೆ.

ಅರ್ಜಿಸಲ್ಲಿಸುವುದು ಹೇಗೆ?

ಅರ್ಜಿದಾರರು ತಮ್ಮ ವಾಸಸ್ಥಳದ ವ್ಯಾಪ್ತಿಗೆ ಬರುವ ಅಟಲ್ಜೀ ಜನಸ್ನೇಹಿ ಕೇಂದ್ರದ(ನಾಡಕಚೇರಿ) ಮೂಲಕ ಅರ್ಜಿ ಸಲ್ಲಿಸಬೇಕು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ