ರಾಜ್ಯದ ನಿರ್ಗತಿಕ ವಿಧವೆಯರಿಗೆ ಸಾಮಾಜಿಕ ಭದ್ರತೆ ಮತ್ತು ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಈ ಯೋಜನೆಯನ್ನು ಜಾರಿಯಲ್ಲಿಟ್ಟಿದೆ.ಬಡತನ ರೇಖೆಗಿಂತ ಕೆಳಗಿರುವ 18 ರಿಂದ 64 ವರ್ಷದೊಳಗಿನ ನಿರ್ಗತಿಕ ವಿಧವೆಯರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ, ಸರ್ಕಾರದ ಆದೇಶದ ಮೇರೆಗೆ 1ನೇ ಏಪ್ರಿಲ್ 1984 ರಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಅರ್ಹರಿಗೆ ಪ್ರತಿ ತಿಂಗಳು ₹800 ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.ರೈತ ಆತ್ಮಹತ್ಯೆ ಮಾಡಿಕೊಂಡ ಕುಟುಂಬದ ವಿಧವೆಯರಿಗೆ ಮಾಸಿಕ ₹2,000 ಪಿಂಚಣಿ ನೀಡುವ ಸೌಲಭ್ಯವಿದೆ.
ಅರ್ಹತಾ ಮಾನದಂಡಗಳು:
- ವಿಧವೆ: ಪತಿಯನ್ನು ಕಳೆದುಕೊಂಡ ಮಹಿಳೆ ಅಥವಾ ಕಾನೂನು ರೀತಿಯಲ್ಲಿ ಪತಿ ಮೃತಪಟ್ಟಿದ್ದಾರೆ ಎಂದು ಪರಿಗಣಿಸಲ್ಪಟ್ಟ ಮಹಿಳೆ.
- ಆದಾಯ ಮಿತಿ: ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾರ್ಷಿಕ ಆದಾಯವು ರೂ. 32,000/- ಕ್ಕಿಂತ ಕಡಿಮೆ ಇರಬೇಕು.
- ಅರ್ಹತೆ ಮುಂದುವರಿಕೆ: ವಿಧವೆಯು ಮೃತಪಡುವವರೆಗೆ ಅಥವಾ ಮರು ವಿವಾಹವಾಗುವವರೆಗೆ ಅಥವಾ ಉದ್ಯೋಗ ಪಡೆದು ನಿಗದಿತ ಆದಾಯಕ್ಕಿಂತ ಹೆಚ್ಚು ಆದಾಯ ಗಳಿಸುವವರೆಗೆ ಈ ವೇತನ ಪಡೆಯಬಹುದು.
ಸಲ್ಲಿಸಬೇಕಾದ ದಾಖಲೆಗಳು
- ವಾಸಸ್ಥಳ ದೃಢೀಕರಣ ಪತ್ರ.
- ವಯಸ್ಸಿನ ದೃಢೀಕರಣ ಪತ್ರ.
- ಬ್ಯಾಂಕ್ ಮತ್ತು ಅಂಚೆ ಕಚೇರಿಯ ಖಾತೆ ವಿವರಗಳು.
- ಆಧಾರ್ ಕಾರ್ಡ್.
ಪಿಂಚಣಿ ಮೊತ್ತ:
ಈ ಯೋಜನೆಯಡಿ ಪ್ರತಿ ತಿಂಗಳು ರೂ. 800 ಪಿಂಚಣಿಯನ್ನು ನೀಡಲಾಗುತ್ತದೆ.
ಅರ್ಜಿಸಲ್ಲಿಸುವುದು ಹೇಗೆ?
ಅರ್ಜಿದಾರರು ತಮ್ಮ ವಾಸಸ್ಥಳದ ವ್ಯಾಪ್ತಿಗೆ ಬರುವ ಅಟಲ್ಜೀ ಜನಸ್ನೇಹಿ ಕೇಂದ್ರದ(ನಾಡಕಚೇರಿ) ಮೂಲಕ ಅರ್ಜಿ ಸಲ್ಲಿಸಬೇಕು.
