LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ ; ‘HRMS’ ತಂತ್ರಾಂಶದಲ್ಲಿ ಕುಟುಂಬದ ವಿವರಗಳನ್ನು ಕಡ್ಡಾಯವಾಗಿ ನಮೂದಿಸಲು ಸರ್ಕಾರದ ಆದೇಶ !

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅರ್ಹ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಒದಗಿಸುವ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ (KASS) ಕುರಿತು ಸರ್ಕಾರವು ಮಹತ್ವದ ಸುತ್ತೋಲೆಯನ್ನು ಹೊರಡಿಸಿದೆ. ಈ ಯೋಜನೆಯಡಿ ನೊಂದಾಯಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ನೌಕರರ ವಿವರಗಳನ್ನು ಎಚ್.ಆರ್.ಎಂ.ಎಸ್ (HRMS) ತಂತ್ರಾಂಶದಲ್ಲಿ ಕಡ್ಡಾಯವಾಗಿ ನಮೂದಿಸುವಂತೆ ಎಲ್ಲಾ ಡಿ.ಡಿ.ಒ (DDO)ಗಳಿಗೆ ನಿರ್ದೇಶನ ನೀಡಲಾಗಿದೆ.

ಪ್ರಮುಖಾಂಶಗಳು:

  • ನೋಂದಣಿ ಸ್ಥಿತಿಗತಿ: ರಾಜ್ಯದ ಒಟ್ಟು 3,76,955 ನೌಕರರು ಈ ಯೋಜನೆಗೆ ‘ಆಪ್ಟ್-ಇನ್’ (Opt-in) ಆಗಿದ್ದು, 23,081 ನೌಕರರು ‘ಆಪ್ಟ್-ಔಟ್’ (Opt-out) ಆಗಿದ್ದಾರೆ. ‘ಆಪ್ಟ್-ಇನ್’ ಆದ ನೌಕರರ ಪೈಕಿ 1,79,339 ನೌಕರರು ಮತ್ತು ಅವರ ಕುಟುಂಬದ ಸದಸ್ಯರ ಮಾಹಿತಿ ಮಾತ್ರ ತಂತ್ರಾಂಶದಲ್ಲಿ ನೊಂದಾವಣಿಯಾಗಿದೆ.
  • ಬಾಕಿ ಉಳಿದಿರುವ ಮಾಹಿತಿ: ಇನ್ನುಳಿದ 1,97,616 ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರ ವಿವರಗಳನ್ನು HRMS ತಂತ್ರಾಂಶದಲ್ಲಿ ನಮೂದಿಸಬೇಕಾಗಿದೆ.
  • ಅಗತ್ಯತೆ: ವಿವರಗಳನ್ನು ನಮೂದಿಸುವುದರಿಂದ ಪ್ರತಿ ಅರ್ಹ ಸದಸ್ಯರಿಗೆ ‘ಯೂನಿಕ್ ಡಿಪೆಂಡೆಂಟ್ ಐಡಿ’ (Unique Dependant ID) ಸೃಷ್ಟಿಯಾಗಲಿದ್ದು, ಇದು ಫಲಾನುಭವಿಗಳನ್ನು ಗುರುತಿಸಲು ಮತ್ತು ನಗದು ರಹಿತ ಚಿಕಿತ್ಸೆ ಪಡೆಯಲು ಅನುಕೂಲವಾಗುತ್ತದೆ.
  • ಕಟ್ಟುನಿಟ್ಟಿನ ಆದೇಶ: ಈಗಾಗಲೇ ಮಾಹಿತಿ ನಮೂದಿಸಿರುವವರನ್ನು ಹೊರತುಪಡಿಸಿ, ಉಳಿದ ಎಲ್ಲಾ ನೌಕರರ ವಿವರಗಳನ್ನು 15.07.2026ರೊಳಗೆ ತಪ್ಪದೇ HRMS ತಂತ್ರಾಂಶದಲ್ಲಿ ದಾಖಲಿಸುವಂತೆ ಸಂಬಂಧಪಟ್ಟ ಎಲ್ಲಾ ಡಿ.ಡಿ.ಒ (DDO)ಗಳಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸೂಚಿಸಿದೆ.
Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ