LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS : ತ್ರ್ಯಂಬಕೇಶ್ವರ ದೇವಾಲಯದಲ್ಲಿ ಅಪರೂಪದ ಆವಿಷ್ಕಾರ ; ಅಮೃತಕುಂಡದಲ್ಲಿ ಶಿವಲಿಂಗ ದರ್ಶನ |WATCH VIDEO

ಮಹಾರಾಷ್ಟ್ರ: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಪ್ರಸಿದ್ಧ ತ್ರ್ಯಂಬಕೇಶ್ವರ ದೇವಾಲಯದ ಆವರಣದಲ್ಲಿರುವ ಐತಿಹಾಸಿಕ ಅಮೃತಕುಂಡದಲ್ಲಿ ಹಲವು ದಶಕಗಳ ಬಳಿಕ ಶಿವಲಿಂಗವು ಗೋಚರವಾಗಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಕೈಗೊಂಡಿರುವ ಸಂರಕ್ಷಣೆ ಮತ್ತು ಪುನರುಜ್ಜೀವನ ಕಾಮಗಾರಿಗಳ ವೇಳೆ ಈ ಅಪರೂಪದ ಆವಿಷ್ಕಾರ ಬೆಳಕಿಗೆ ಬಂದಿದೆ.

ಹೌದು. ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಪ್ರಸಿದ್ಧ ತ್ರ್ಯಂಬಕೇಶ್ವರ ದೇವಾಲಯದ ಐತಿಹಾಸಿಕ ಅಮೃತಕುಂಡದಲ್ಲಿ ಹಲವು ದಶಕಗಳ ಬಳಿಕ ಶಿವಲಿಂಗವು ಗೋಚರಿಸಿದ್ದು, ಭಕ್ತರಲ್ಲಿ ಭಾರೀ ಸಂಭ್ರಮ ಮೂಡಿಸಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಕೈಗೊಂಡಿರುವ ಸಂರಕ್ಷಣೆ ಕಾಮಗಾರಿಗಳ ವೇಳೆ ಕುಂಡದ ನೀರನ್ನು ಸಂಪೂರ್ಣವಾಗಿ ತೆರವುಗೊಳಿಸಿದಾಗ ಸುಮಾರು 65 ಅಡಿ ಆಳದಲ್ಲಿದ್ದ ಶಿವಲಿಂಗ ದರ್ಶನ ನೀಡಿದೆ.

ಅಮೃತಕುಂಡದಲ್ಲಿದ್ದ ನೀರನ್ನು ಸಂಪೂರ್ಣವಾಗಿ ಹೊರತೆಗೆದು ಸ್ವಚ್ಛಗೊಳಿಸಿದಾಗ ಸುಮಾರು 65 ಅಡಿ ಆಳದಲ್ಲಿ ಶಿವಲಿಂಗ ಕಾಣಿಸಿಕೊಂಡಿದೆ. ಪೇಶ್ವೆಗಳ ಕಾಲಕ್ಕೆ ಸೇರಿದ ಈ ಪುರಾತನ ಅಮೃತಕುಂಡದ ನೀರನ್ನೇ ತ್ರ್ಯಂಬಕೇಶ್ವರ ಜ್ಯೋತಿರ್ಲಿಂಗದ ಪೂಜೆ ಹಾಗೂ ಅಭಿಷೇಕಗಳಿಗೆ ಬಳಸಲಾಗುತ್ತದೆ. ವಾಸ್ತವವಾಗಿ 2026ರ ಸಿಂಹಸ್ಥ ಕುಂಭಮೇಳದ ಸಿದ್ಧತಾ ಕಾಮಗಾರಿಗಳ ಸಂದರ್ಭದಲ್ಲಿ ಈ ಶಿವಲಿಂಗದ ಅಸ್ತಿತ್ವ ಪತ್ತೆಯಾಗಿತ್ತು. ಇದೀಗ ಪುರಾತತ್ವ ಇಲಾಖೆ ಕೈಗೊಂಡಿರುವ ಸಂರಕ್ಷಣಾ ಕಾರ್ಯಗಳ ಭಾಗವಾಗಿ ಕುಂಡದ ನೀರನ್ನು ಸಂಪೂರ್ಣವಾಗಿ ತೆರವುಗೊಳಿಸಿದ ಬಳಿಕ ಶಿವಲಿಂಗ ಸ್ಪಷ್ಟವಾಗಿ ಗೋಚರಿಸಿದೆ. ಸಾಮಾನ್ಯವಾಗಿ ಅಮೃತಕುಂಡದಲ್ಲಿ ವರ್ಷಪೂರ್ತಿ ನೀರು ತುಂಬಿರುತ್ತದೆ. ಆದ್ದರಿಂದ ಕುಂಡದ ತಳದಲ್ಲಿರುವ ಶಿವಲಿಂಗ ಭಕ್ತರ ಕಣ್ಣಿಗೆ ಕಾಣಿಸುವುದಿಲ್ಲ. ಹಲವು ವರ್ಷಗಳ ಬಳಿಕ ನೀರನ್ನು ಸಂಪೂರ್ಣವಾಗಿ ಹೊರತೆಗೆದ ಪರಿಣಾಮ ಈ ಅಪರೂಪದ ದರ್ಶನ ಸಾಧ್ಯವಾಗಿದೆ.

ಈ ಸುದ್ದಿ ತಿಳಿಯುತ್ತಿದ್ದಂತೆಯೇ ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸಿದ್ದಾರೆ. ಆದರೆ ಭದ್ರತಾ ಕಾರಣಗಳಿಂದ ಸಾಮಾನ್ಯ ಭಕ್ತರಿಗೆ ಅಮೃತಕುಂಡದೊಳಗೆ ಪ್ರವೇಶಿಸಲು ಅವಕಾಶ ನೀಡಲಾಗಿಲ್ಲ. ನಾಸಿಕ್ ನಗರದಿಂದ ಸುಮಾರು 28 ಕಿಲೋಮೀಟರ್ ದೂರದಲ್ಲಿರುವ ಬ್ರಹ್ಮಗಿರಿ ಬೆಟ್ಟದ ತಪ್ಪಲಿನಲ್ಲಿ ನೆಲೆಗೊಂಡಿರುವ ತ್ರ್ಯಂಬಕೇಶ್ವರ ದೇವಾಲಯವು ದೇಶದ ದ್ವಾದಶ ಜ್ಯೋತಿರ್ಲಿಂಗಗಳಲ್ಲಿ ಒಂದಾಗಿದೆ. ಇಲ್ಲಿ ಶಿವಲಿಂಗವು ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ತ್ರಿಮೂರ್ತಿಗಳ ಸಂಕೇತವಾಗಿ ಪೂಜಿಸಲ್ಪಡುತ್ತದೆ. ಅಲ್ಲದೆ, ಪವಿತ್ರ ಗೋದಾವರಿ ನದಿಯ ಉಗಮಸ್ಥಳವೂ ಇದೇ ಆಗಿರುವುದರಿಂದ ಈ ಕ್ಷೇತ್ರಕ್ಕೆ ವಿಶೇಷ ಧಾರ್ಮಿಕ ಮಹತ್ವವಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ